AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕ್ಷೇತ್ರದಲ್ಲಿ ಶುರುವಾಗಿದೆ ದೇಣಿಗೆ ರಾಜಕೀಯ; ಜೆಡಿಎಸ್​ ಅಭ್ಯರ್ಥಿಗೆ ಹೋದಲೆಲ್ಲ ಹರಿದು ಬರ್ತಿದೆ ಹಣ

ರಾಜ್ಯ ರಾಜಕೀಯದಲ್ಲಿ ರಣಕಣ ರಂಗೇರಿದೆ. ಅಖಾಡಕ್ಕೆ ಧುಮುಕಿರುವ ಅಭ್ಯರ್ಥಿಗಳು ಗೆಲ್ಲಲು ಹಣದ ಹೊಳೆಯನ್ನೆ ಹರಿಸುತ್ತಿದ್ದಾರೆ. ಮತದಾರರ ಮನವೊಲಿಸಲು ಅಭ್ಯರ್ಥಿಗಳು ಕೋಟಿ ಕೋಟಿ ಹಣ ಖರ್ಚು ಮಾಡುತ್ತಾರೆ. ಆದ್ರೆ, ಅದೊಂದು ಕ್ಷೇತ್ರದಲ್ಲಿ ಮಾತ್ರ ಆ ಪಕ್ಷದ ಅಭ್ಯರ್ಥಿಗೆ ಮತದಾರರೇ ಹಣ ಕೊಟ್ಟು ಆರ್ಶಿವಾದ ಮಾಡ್ತಿದ್ದಾರೆ. ಆದ್ರೆ, ಮತದಾರರ ದೇಣಿಗೆ ಹಣದ ರಾಜಕೀಯಕ್ಕೆ ಕಾಂಗ್ರೆಸ್ ಹೇಳುತ್ತಿರುವುದು ಬೇರೆ ನೋಡಿ. ಅಷ್ಟಕ್ಕೂ ಅದ್ಯಾವ ಕ್ಷೇತ್ರದಲ್ಲಿ ದೇಣಿಗೆ ಹಣದ ರಾಜಕೀಯ ಶುರುವಾಗಿದೆ ಅಂತೀರಾ? ಇಲ್ಲಿದೆ ನೋಡಿ.

ಈ ಕ್ಷೇತ್ರದಲ್ಲಿ ಶುರುವಾಗಿದೆ ದೇಣಿಗೆ ರಾಜಕೀಯ; ಜೆಡಿಎಸ್​ ಅಭ್ಯರ್ಥಿಗೆ ಹೋದಲೆಲ್ಲ ಹರಿದು ಬರ್ತಿದೆ ಹಣ
ಜೆಡಿಎಸ್​ ಅಭ್ಯರ್ಥಿ ನೇಮಿರಾಜ ನಾಯ್ಕ್
ಕಿರಣ್ ಹನುಮಂತ್​ ಮಾದಾರ್
|

Updated on: May 03, 2023 | 1:49 PM

Share

ಬಳ್ಳಾರಿ: ವಿಧಾನಸಭೆ ಚುನಾವಣೆ(Karnataka Assembly Election) ಕಣ ರಂಗೇರಿದ್ದು, ಅಬ್ಬರದ ಪ್ರಚಾರಗಳಲ್ಲಿ ಉಭಯ ಪಕ್ಷಗಳು ಬ್ಯುಸಿ ಆಗಿದ್ದಾರೆ. ಅದರಂತೆ ಈ ಕ್ಷೇತ್ರದಲ್ಲಿ ಚುನಾವಣೆ ಅಂದ್ರೆ, ಮತದಾರರಿಗೆ ಹಣ ಹಂಚಿಕೆ. ಆಮಿಷ ಒಡ್ಡುವುದು ಸಹಜ.‌ ಆದ್ರೆ, ಈ ಕ್ಷೇತ್ರದಲ್ಲಿ ಅಭ್ಯರ್ಥಿ ಎಲ್ಲಿ ಪ್ರಚಾರಕ್ಕೆ ಹೋದರೂ, ಅಲ್ಲಿ ದೇಣಿಗೆ ಕೊಡ್ತಿರೋ ಮತದಾರರು. ಸಾವಿರ, ಲಕ್ಷಗಟ್ಟಲೆ ದೇಣಿಗೆ. ದೇಣಿಗೆ ಹಣದ ರಾಜಕೀಯ ಅನುಕಂಪದ ನಾಟಕ ಎಂದು ಕಾಂಗ್ರೆಸ್ ಕಿಡಿಕಾರಿದೆ. ಹೌದು ಜಿಲ್ಲೆಯ ಹಗರಿಬೊಮ್ಮನಹಳ್ಳಿ(Hagaribommanahalli) ಕ್ಷೇತ್ರದಲ್ಲಿ ಹೀಗೆ ದೇಣಿಗೆ ಹಣದ ರಾಜಕೀಯ ಶುರುವಾಗಿದೆ. ಈ ಅಭ್ಯರ್ಥಿಯ ಹೆಸರು ನೇಮಿರಾಜ ನಾಯ್ಕ್. ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ. ಈ ಹಿಂದೆ ಬಿಜೆಪಿಯಿಂದ ಶಾಸಕರಾಗಿದ್ದ ಇವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಕೈತಪ್ಪಿದ ಪರಿಣಾಮ ಕೊನೆ ಕ್ಷಣದಲ್ಲಿ ತೆನೆ ಹೊತ್ತು ಅಖಾಡಕ್ಕೆ ಇಳಿದಿದ್ದಾರೆ. ಇವರಿಗೆ ಬಿಜೆಪಿ ಟಿಕೆಟ್​ ತಪ್ಪಿಸಿ ಅನ್ಯಾಯ ಮಾಡಿದ್ರು ಅನ್ನೋ ಅನುಕಂಪವನ್ನೆ ಇಟ್ಟುಕೊಂಡು ಪ್ರಚಾರಕ್ಕೆ ಇಳಿದಿರುವ ನೇಮಿರಾಜ ನಾಯ್ಕ್ ಗೆ ಇದೀಗ ಕ್ಷೇತ್ರದ ಮತದಾರರು ವಿನೂತನವಾಗಿ ಸ್ಪಂದಿಸುತ್ತಿದ್ದಾರಂತೆ.

ಹೌದು ನೇಮಿರಾಜ ನಾಯ್ಕ್ ಪ್ರಚಾರಕ್ಕೆ ಹೋದ ಹಳ್ಳಿ ಹಳ್ಳಿಗಳಲ್ಲಿ ಮತದಾರರು. ಬೆಂಬಲಿಗರೇ ತಮ್ಮ ಕೈಲಾದಷ್ಟು ಹಣವನ್ನ ದೇಣಿಗೆಯಾಗಿ ನೀಡಿ ಬೆಂಬಲಿಸುತ್ತಿದ್ದಾರೆ. ನೇಮಿರಾಜ ನಾಯ್ಕ್ ಗೆ ರಾಯರಾಳ್ ತಾಂಡಾದ ಮತದಾರರು 4 ಲಕ್ಷ ರೂಪಾಯಿ ಹಣ ದೇಣಿಗೆ ನೀಡಿದ್ದಾರಂತೆ. ಇನ್ನು ಜೆಡಿಎಸ್ ಅಭ್ಯರ್ಥಿಗೆ ಹಣ ದೇಣಿಗೆ ನೀಡಿದ ವಿಚಾರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಭೀಮಾನಾಯ್ಕ್ ಕೆಂಡಾಮಂಡಲವಾಗಿದ್ದಾರೆ‌. ಜೆಡಿಎಸ್ ಅಭ್ಯರ್ಥಿ ಮೊಸಳೆ ಕಣ್ಣೀರು ಸುರಿಸಿ ಡ್ರಾಮಾ ಮಾಡ್ತಿದ್ದಾರೆ. ಪ್ರಚಾರಕ್ಕೂ ಮುನ್ನ ಹಳ್ಳಿ ಹಳ್ಳಿಗೆ ಹಣ ಕಳುಹಿಸಿ ದೇಣಿಗೆ ನಾಟಕ ಮಾಡ್ತಿದ್ದಾರೆ. ರಾಯರಾಳ್ ತಾಂಡದ ಮತದಾರರಿಂದ 4 ಲಕ್ಷ ರೂಪಾಯಿ ದೇಣಿಗೆ ಕೇವಲ ನಾಟಕವಾಗಿದೆ. ಮತದಾರರಿಗೆ ಮೊದಲು ಹಣ ಕಳುಹಿಸಿ ಅದನ್ನ ದೇಣಿಗೆ ರೂಪದಲ್ಲಿ ಪಡೆಯುತ್ತಿದ್ದಾರೆ. ಬೆಂಬಲಿಗರು ಸಾವಿರ, ಎರಡೂ ಸಾವಿರ ಹಣ ಕೊಟ್ಟಿರಬಹುದು. ಲಕ್ಷಾಂತರ ರೂಪಾಯಿ ಹಣ ದೇಣಿಗೆ ಕೊಡಲು ಸಾಧ್ಯವಿಲ್ಲ. ಅನುಕಂಪ ಪಡೆಯಲು ದೇಣಿಗೆ ನಾಟಕ ಶುರು ಮಾಡಿದ್ದಾರೆಂದು ಕೈ ಅಭ್ಯರ್ಥಿ ಭೀಮಾನಾಯ್ಕ್ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ‌.

ಇದನ್ನೂ ಓದಿ:ಅವಹೇಳನಕಾರಿ ಹೇಳಿಕೆಗಳ ವಿರುದ್ಧ ಚುನಾವಣಾ ಆಯೋಗ ಕೆಂಡ; ರಾಜಕೀಯ ಮುಖಂಡರಿಗೆ ನೀಡಿತು ಖಡಕ್ ಎಚ್ಚರಿಕೆ

ಇದೂವರೆಗೂ ಆರೋಪ ಪ್ರತ್ಯಾರೋಪ ಮಾಡ್ತಾ ರಾಜಕೀಯ ಮಾಡುತ್ತಿದ್ದ ನೇಮಿರಾಜ ಮತ್ತು ಭೀಮಾನಾಯ್ಕ್ ಮಧ್ಯೆ ಇದೀಗ ಹಣದ ದೇಣಿಗೆ ರಾಜಕೀಯ ಕಿತ್ತಾಟ ಶುರುವಾಗಿದೆ. ಅಲ್ಲದೇ ಮತದಾರರು ದೇಣಿಗೆ ರೂಪದಲ್ಲಿ ಹಣ ಕೊಡ್ತಿರೋದು ನಿಜವಾ? ಇಲ್ಲ ಕಾಂಗ್ರೆಸ್​ನವರು ಹೇಳ್ತಿರೋ ಹಾಗೆ ದೇಣಿಗೆ ನಾಟಕವಾ? ಅನ್ನೋದು ಮೇ 13ಕ್ಕೆ ತಿಳಿಯಲಿದೆ.

ವರದಿ: ವಿರೇಶ್​ ದಾನಿ ಟಿವಿ9 ಬಳ್ಳಾರಿ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್