AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರಟಗೆರೆ ಕ್ಷೇತ್ರದಲ್ಲಿ ಮಾತ್ರ ನಾನು ಸ್ಪರ್ಧಿಸುತ್ತೇವೆ, ಎರಡು ಕ್ಷೇತ್ರಗಳ ಟಿಕೆಟ್​​ ಕೇಳಿಲ್ಲ: ಡಾ ಪರಮೇಶ್ವರ್​ ಸ್ಪಷ್ಟನೆ

ನಾನು ಎರಡು ಕ್ಷೇತ್ರಗಳ ಟಿಕೆಟ್​​ ಕೇಳಿಲ್ಲ. ಕೊರಟಗೆರೆ ಕ್ಷೇತ್ರದಲ್ಲಿ ಮಾತ್ರ ನಾನು ಸ್ಪರ್ಧೆ ಮಾಡುತ್ತಿದ್ದೇನೆ. 2 ಕ್ಷೇತ್ರದ ಗೊಂದಲ ಯಾಕೆ ಬಂತೋ ಗೊತ್ತಿಲ್ಲ ಎಂದು ಮಾಜಿ ಡಿಸಿಎಂ ಡಾ.ಪರಮೇಶ್ವರ್​ ಸ್ಪಷ್ಟನೆ ನೀಡಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on:Apr 08, 2023 | 3:12 PM

Share

ತುಮಕೂರು: ಮಾಜಿ ಸಿಎಂ ಸಿದ್ಧರಾಮಯ್ಯ ಇತ್ತೀಚೆಗೆ ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಈ ನಡುವೆ ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ (Dr Parameshwara) ಸಹ ಎರಡು ಕ್ಷೇತ್ರಗಳಲ್ಲಿ ಟಿಕೆಟ್​ ನೀಡುವಂತೆ ಹೈಕಮಾಂಡ್​ ಬಳಿ ಪಟ್ಟು ಹಿಡಿದಿದ್ದಾರೆ ಎನ್ನಲಾಗಿತ್ತು. ಸದ್ಯ ಈ ಕುರಿತಾಗಿ ಮಾಜಿ ಡಿಸಿಎಂ ಡಾ.ಪರಮೇಶ್ವರ್​ ಸ್ಪಷ್ಟನೆ ನೀಡಿದ್ದಾರೆ. ನಾನು ಎರಡು ಕ್ಷೇತ್ರಗಳ ಟಿಕೆಟ್​​ ಕೇಳಿಲ್ಲ. ಕೊರಟಗೆರೆ ಕ್ಷೇತ್ರದಲ್ಲಿ ಮಾತ್ರ ನಾನು ಸ್ಪರ್ಧೆ ಮಾಡುತ್ತಿದ್ದೇನೆ. 2 ಕ್ಷೇತ್ರದ ಗೊಂದಲ ಯಾಕೆ ಬಂತೋ ಗೊತ್ತಿಲ್ಲ ಎಂದಿದ್ದಾರೆ. ಆ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಜಿಲ್ಲೆಯ ಕೊರಟಗೆರೆಯಲ್ಲಿ ನಡೆದ ಬಲಿಜ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ನಾವು ಅಧಿಕಾರದಲ್ಲಿ ಇದ್ದಾಗ ಸಿಲಿಂಡರ್ ದರ 400 ರೂ. ಇತ್ತು. ಈಗ 1000 ರೂ. ಗಡಿ ದಾಟಿದೆ.

ರಾಜ್ಯದ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕಿದೆ

ಕಾಂಗ್ರೆಸ್ ಅಕ್ಕಿ ಕೊಡದಿದ್ದರೆ ಬಡವರು ಊಟ ಮಾಡಲು ಆಗುತ್ತಿರಲಿಲ್ಲ. ಯಾಕಿಷ್ಟು ಅಕ್ಕಿ ಕೊಡುತ್ತಿದ್ದೀರಾ ಅಂತ ಸಿದ್ದರಾಮಯ್ಯಗೆ ಕೇಳಿದೆ, ಆಗ ಸಿದ್ದರಾಮಯ್ಯ ತಮ್ಮ ಗ್ರಾಮದ ಸ್ಥಿತಿ ಬಗ್ಗೆ ವಿವರಿಸಿ ಹೇಳಿದರು. ಹಬ್ಬ ಅಥವಾ ಅನಾರೋಗ್ಯದ ವೇಳೆ ಮಾತ್ರ ಅನ್ನ ತಿನ್ನಬೇಕಿತ್ತು. ಅದಕ್ಕಾಗಿ ಸಿದ್ದರಾಮಯ್ಯ ಬಡವರಿಗೆ ಉಚಿತವಾಗಿ ಅಕ್ಕಿ ನೀಡಿದರು.

ಇದನ್ನೂ ಓದಿ: PM Modi Mysuru Visit: ಇಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ, ಸಂಚಾರ ಮಾರ್ಗಗಳಲ್ಲಿ ಬದಲಾವಣೆ, ಬದಲಿ ಮಾರ್ಗ ಹೀಗಿದೆ

ರಾಜ್ಯದ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕಿದೆ. ಮೋದಿ ರಾಜ್ಯಕ್ಕೆ‌ ಬಂದಾಗ 10% ಲಂಚದ ಬಗ್ಗೆ ಆರೋಪಿಸಿದ್ದರು. ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಾಗ ಮೋದಿ ಆರೋಪಿಸಿದ್ದರು. ಆದರೆ ಈಗ ನಿಮ್ಮ ಸಿಎಂ 40% ಲಂಚ ತೆಗೆದುಕೊಳ್ತಿದ್ದಾರಲ್ಲ? ಈ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಏನು ಮಾತನಾಡುತ್ತಿಲ್ಲ. ಪ್ರಣಾಳಿಕೆಯಲ್ಲಿ ಘೋಷಿಸಿರುವುದನ್ನು ಅನುಷ್ಠಾನಕ್ಕೆ ತರುತ್ತೇವೆ ಎಂದು ಹೇಳಿದರು.

ಜೆಡಿಎಸ್​ ವಿರುದ್ಧ ಪರಮೇಶ್ವರ್ ಕಿಡಿ 

ಸಿದ್ದರಾಮಯ್ಯ ಸಿಎಂ ಆದಾಗ ಎತ್ತುನಹೊಳೆ ಯೋಜನೆ ಮಾಡಿದ್ದೇವೆ. ಇಂದು ಅದು 20 ಸಾವಿರ ಕೋಟಿಯಾಗಿದೆ. ನಾವು ಅಧಿಕಾರಕ್ಕೆ ಬಂದ ಮೇಲೆ ನೀರು ಹರಿಸುತ್ತೇವೆ. ಬೈರಗೊಂಡ್ಲು ಡ್ಯಾಮ್ ಬದಲಾಯಿಸಿಲು ಹೊರಟಿದ್ದರು. ಆದರೆ ಅದನ್ನ ಸದ್ಯಕ್ಕೆ ನಿಲ್ಲಿಸಲಾಗಿದೆ. ಜೆಡಿಎಸ್ ಹೇಳುತ್ತೆ ಸರ್ಕಾರ ಮಾಡುತ್ತೇವೆ ಅಂತಾ, ಇದು ವಿಪರ್ಯಾಸ, ಅವರು ನಮ್ಮ ಜೊತೆ ಅಥವಾ ಬಿಜೆಪಿ ಜೊತೆ ಅಧಿಕಾರ ಮಾಡಬೇಕು ಎಂದು ಕಿಡಿಕಾರಿದರು.

ಇದನ್ನೂ ಓದಿ: ನಂದಿನಿ ರಾಷ್ಟ್ರ ಮಟ್ಟದ ಬ್ರ್ಯಾಂಡ್​, ಕಾಂಗ್ರೆಸ್​ನಿಂದ ಅಮುಲ್ ವಿಚಾರದಲ್ಲಿ ರಾಜಕೀಯ; ಸಿಎಂ ಬೊಮ್ಮಾಯಿ

ನ್ಯಾಯ ಕೊಡುವ ಕೆಲಸ ಬಿಜೆಪಿ ಮಾಡಿಲ್ಲ

ಈ ಜಾಗೃತಿ ಸಮಾವೇಶ ಮೂಲಕ ನಿಜವಾದ ಬಣ್ಣ ಬಯಲಾಗುತ್ತೆ. ರಾಜ್ಯದಲ್ಲಿ ಬಡವರಿಗೆ ಒಳ್ಳೆಯ ಜೀವನವಾಗಬೇಕು. ಒಳ್ಳೆಯ ನೌಕರಿ ಸಿಗಬೇಕು. ನಮ್ಮ‌ ಸರ್ಕಾರ ‌ಮುಂದುವರೆದಿದ್ದರೇ ಬಲಿಜ ಸಮುದಾಯಕ್ಕೆ 2ಎ‌ ಮೀಸಲಾತಿ ಜಾರಿ ತರುವ ಕೆಲಸ ಮಾಡುತ್ತಿದೆ. ಬಲಿಜ ಸಮುದಾಯದಲ್ಲಿ ಬಡವರು ಇದ್ದಾರೆ. ಅಂತವರಿಗೆ ನ್ಯಾಯ ಸಿಗಬೇಕಿದೆ. ಬಡವರ ಪರವಾಗಿ ಕಾಂಗ್ರೆಸ್ ಪಕ್ಷ ನಿಂತಿದೆ. ನ್ಯಾಯ ಕೇಳುವ ಸಮಾಜಗಳಿಗೆ ಸೂಕ್ತ ನ್ಯಾಯ ಕೊಡುವ ಕೆಲಸ ಬಿಜೆಪಿ ಮಾಡಿಲ್ಲ. ಯಾವುದೇ ಅರ್ಜಿ ಪಡೆಯದೇ ಅವರಿಗೆ ಕೇಂದ್ರ ಸರ್ಕಾರ 10% ಮೀಸಲಾತಿ ಕೊಡುವ ಕೆಲಸ ಮಾಡಿದೆ. ನಿಜವಾದ ಅನ್ಯಾಯವಾದ ಸಮಾಜದವರಿಗೆ ಮೀಸಲಾತಿ ಕಲ್ಪಿಸಿಲ್ಲ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:12 pm, Sat, 8 April 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ