AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ, ಇಂದು ಬೆಂಗಳೂರಿಗೆ ಕೇಂದ್ರ ಚುನಾವಣಾ ಆಯೋಗ ತಂಡ ಭೇಟಿ

15ನೇ ವಿಧಾನಸಭೆಯ ಅವಧಿ ಮೇ ತಿಂಗಳಿಗೆ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ವಿಧಾನಸಭೆ ಚುನಾವಣೆಯ ಪೂರ್ವಭಾವಿ ತಯಾರಿ ಪರಿವೀಕ್ಷಣೆಗೆ ಇಂದು ಕೇಂದ್ರ ಚುನಾವಣಾ ಆಯೋಗ ತಂಡ ಬೆಂಗಳೂರಿಗೆ ಭೇಟಿ ನೀಡಲಿದೆ. ಈ ಮೂರು ದಿನಗಳ ಕಾರ್ಯಕ್ರಮಗಳ ಪಟ್ಟಿ ಈ ಕೆಳಗಿನಂತಿದೆ.

ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ, ಇಂದು ಬೆಂಗಳೂರಿಗೆ ಕೇಂದ್ರ ಚುನಾವಣಾ ಆಯೋಗ ತಂಡ ಭೇಟಿ
ರಮೇಶ್ ಬಿ. ಜವಳಗೇರಾ
|

Updated on:Mar 09, 2023 | 7:35 AM

Share

ಬೆಂಗಳೂರು: ವಿಧಾನಸಭೆ ಚುನಾವಣೆಗೆ (Karnataka Assembly Elections 2023) ದಿನ ಹತ್ತಿರವಾಗುತ್ತಿದ್ದಂತೆಯೇ ಕ್ಷೇತ್ರಗಳಲ್ಲಿ ಮತಪ್ರಚಾರ ಭರ್ಜರಿಯಾಗಿ ನಡೆದಿದೆ. ಹೇಳಿ ಕೇಳಿ ಬೇಸಿಗೆ ಸಮಯದಲ್ಲೇ ಚುನಾವಣೆ ಎದುರಾಗಿದ್ದರಿಂದ ರಣಬಿಸಿಲಲ್ಲಿ ರಣರಂಗ ಮತ್ತಷ್ಟು ಬಿಸಿಯಾಗುತ್ತಿದೆ. ಮತ್ತೊಂದೆಡೆ ಮೂರು ಪಕ್ಷಗಳಲ್ಲಿ ಟಿಕೆಟ್ ಹಂಚಿಕೆ ಕಸರತ್ತು ತೆರೆಮರೆಯಲ್ಲಿ ತಾರಕಕ್ಕೇರಿದೆ. ಇದರ ಮಧ್ಯೆ ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಹಿನ್ನೆಲೆಯಲ್ಲಿ ಚುನಾವಣಾ ದಿನಾಂಕಗಳ ಘೋಷಣೆಗೆ ಪೂರ್ವಭಾವಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ನಿಯೋಗ (Election Commission Delegation)ಇಂದಿನಿಂದ (ಮಾರ್ಚ್ 9) ಮೂರು ದಿನಗಳ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಚುನಾವಣೆಯ ಸಿದ್ಧತೆಯನ್ನು ಪರಿಶೀಲಿಸಲು ರಾಜೀವ್‌ ಕುಮಾರ್ ಅವರು ಚುನಾವಣಾ ಆಯುಕ್ತರಾದ ಅನುಪ್ ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಅವರೊಂದಿಗೆ ಬರಲಿದ್ದು, ವಿವಿಧ ಪಕ್ಷಗಳ ಜೊತೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ.

ಮೊದಲ ದಿನ(ಮಾ.09): ನಿಯೋಗದಲ್ಲಿ ಭಾರತ ಚುನಾವಣಾ ಆಯೋಗದ ಚುನಾವಣಾ ಆಯುಕ್ತರುಗಳಾದ ಅನೂಪ್ ಚಂದ್ರಪಾಂಡೆ, ಅರುಣ್ ಗೋಯಲ್ ಹಾಗೂ ಉಪ ಆಯುಕ್ತರುಗಳು ಸೇರಿದಂತೆ ಆಯೋಗದ ಹಿರಿಯ ಅಧಿಕಾರಿಗಳು ಇಂದು ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿಯಲಿದೆ. ಮೊದಲ ದಿನ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ರಾಜ್ಯಮಟ್ಟದಲ್ಲಿ ಚುನಾವಣಾ ಪೂರ್ವ ತಯಾರಿ ಕುರಿತು ಸಭೆ ನಡೆಸಲಿದೆ. ತದನಂತರ ಮುಂಬರುವ ಚುನಾವಣೆ ಕುರಿತು ಪ್ರತ್ಯೇಕವಾಗಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆಯನ್ನು ನಡೆಸಲಿದ್ದು ಮುಖ್ಯವಾಗಿ ಅವರ ಸಲಹೆ ಮತ್ತು ಅಭಿಪ್ರಾಯಗಳನ್ನು ಪಡೆಯಲಿದೆ.

ಅಂದು ಸಂಜೆ ಹೋಟೆಲ್ ತಾಜ್ ವೆಸ್ಟೆಂಡ್ ನಲ್ಲಿ ಹಮ್ಮಿಕೊಳ್ಳಲಾಗಿರುವ “ಪ್ರಜಾಪ್ರಭುತ್ವದ ಒಳಗೊಳ್ಳುವಿಕೆ ಮತ್ತು ಸಮಗ್ರತೆ” ವಿಷಯದ ಕುರಿತ ಅಂತರರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಲವು ಪ್ರಜಾಪ್ರಭುತ್ವ ದೇಶಗಳ ಚುನಾವಣಾ ಆಯುಕ್ತರುಗಳು ಇದರಲ್ಲಿ ನೇರವಾಗಿ ಪಾಲ್ಗೊಳ್ಳಲಿದ್ದು ಕೆಲವರು ವಿಡಿಯೋ ಕಾನ್ಫಿರೆನ್ಸ್ ಮೂಲಕ ಪಾಲ್ಗೊಳ್ಳಲಿದ್ದಾರೆ.

2ನೇ ದಿನ (ಮಾ.10): ಎರಡನೆಯ ದಿನ ರಾಜ್ಯದ 34 ಜಿಲ್ಲಾ ಚುನಾವಣಾಧಿಕಾರಿಗಳೊಂದಿಗೆ ಚುನಾವಣೆಯ ಪೂರ್ವಭಾವಿ ತಯಾರಿ ಕುರಿತು ಸಭೆ ನಡೆಸಲಿದೆ. ಅಂದು ಸಂಜೆ ನಗರದ ಐಐಎಸ್‍ಸಿ ಆವರದಲ್ಲಿರುವ ಟಾಟಾ ಸಭಾಂಗಣದಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ಮತದಾರರ ಜಾಗೃತಿ ಕುರಿತ ವಿಶೇಷ ವಸ್ತುಪ್ರದರ್ಶನ, ಹ್ಯಾಕಥಾನ್ ಉದ್ಘಾಟಿಸಿದ ನಂತರ ಮತದಾರರ ಜಾಗೃತಿ ಮೂಡಿಸುವ ಎಲ್‍ಇಡಿ ವಾಹನಗಳಿಗೆ ಚಾಲನೆ ನೀಡಲಿದ್ದಾರೆ. ತದನಂತರ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂವಾದದಲ್ಲಿ ಚುನಾವಣಾ ರಾಯಭಾರಿಗಳು, ವಿದ್ಯಾರ್ಥಿಗಳು, ದಿವ್ಯಾಂಗರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಮೂರನೇ ದಿನ (ಮಾ.11): ಮೂರನೇ ದಿನ ಬೆಳಿಗ್ಗೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಅಪರಾಹ್ನದ ನಂತರ ಮೂರು ದಿನಗಳ ತಮ್ಮ ಭೇಟಿಯ ಕುರಿತು ಪತ್ರಿಕಾಗೋಷ್ಠಿ ನಡೆಸಿಕೊಡಲಿದ್ದಾರೆ. ಅಂದು ಸಂಜೆ ಬೆಂಗಳೂರಿನಿಂದ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಇನ್ನಷ್ಟು ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:30 am, Thu, 9 March 23

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?