AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀತಿ ಸಂಹಿತೆ ಸಿದ್ದತೆಗೆ ಜಿಲ್ಲಾಧಿಕಾರಿಗಳಿಗೆ ತುರ್ತು ಸಂದೇಶ, ಚುನಾವಣೆ ದಿನಾಂಕ ಘೋಷಣೆ ಸುಳಿವು ಕೊಟ್ಟ ಆಯೋಗ

ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ಪತ್ರದ ಮೂಲಕ ಸಂದೇಶ ನೀಡಿದ್ದಾರೆ. ಇದರೊಂದಿಗೆ ಚುನಾವಣೆ ದಿನಾಂಕ ಘೋಷಣೆ ಸುಳಿವು ಸಿಕ್ಕಿದೆ.

ನೀತಿ ಸಂಹಿತೆ ಸಿದ್ದತೆಗೆ ಜಿಲ್ಲಾಧಿಕಾರಿಗಳಿಗೆ ತುರ್ತು ಸಂದೇಶ, ಚುನಾವಣೆ ದಿನಾಂಕ ಘೋಷಣೆ ಸುಳಿವು ಕೊಟ್ಟ ಆಯೋಗ
ಭಾರತೀಯ ಚುನಾವಣಾ ಆಯೋಗ
TV9 Web
| Edited By: |

Updated on:Mar 24, 2023 | 10:02 AM

Share

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ದಿನಗಣನೆ ಶುರುವಾಗಿದೆ. ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿವೆ. ಎಎಪಿ, ಕೆಆರ್‌ಪಿಪಿ ಕೂಡ ಕಮಾಲ್‌ ಮಾಡಲು ತಯಾರಿ ನಡೆಸಿದ್ದು, ಏಪ್ರಿಲ್‌ ಅಥವಾ ಮೇನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ(Election Commission) ಪತ್ರದ ಮೂಲಕ ತುರ್ತು  ಸೂಚನೆ ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ(Code of Conduct) ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಸಂದೇಶ ನೀಡಿದ್ದು, ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆಯಾಗಬಹುದು. ಹೀಗಾಗಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗಳನ್ನು ಸಿದ್ದವಿಟ್ಟುಕೊಳ್ಳಿ ಎಂದು ಸಂದೇಶ ರವಾನಿಸಲಾಗಿದೆ.

ಇದನ್ನೂ ಓದಿ: Karnataka Assembly Election: ಚುನಾವಣೆ ಹಿನ್ನೆಲೆ ಮತದಾರರಿಗೆ ಆಮಿಷ, ವಾರದಲ್ಲಿ ಕೋಟಿ ಕೋಟಿ ಮೌಲ್ಯದ ವಸ್ತುಗಳು ಜಪ್ತಿ

ಹೌದು…ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಲು ಕೇಂದ್ರ ಚುನಾವಣೆ ಆಯೋಗ ತಯಾರಿ ನಡೆಸಿದ್ದು, ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ರವಾನಿಸಿದೆ. ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆ ಆಗಬಹುದು. ಈ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಪತ್ರ ಹೋಗಿದೆ. ಹೀಗಾಗಿ ಮಾರ್ಚ್​ 27 ಅಥವಾ 28ರಂದು ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ದಿನಾಂಕ ಘೋಷಣೆ ಸಾಧ್ಯತೆ ಇದೆ.

ಮುಂದಿನ ವಾರದ ಆರಂಭದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಬಹುದು ಎಂದು ನವದೆಹಲಿಯ ಮೂಲಗಳು ತಿಳಿಸಿವೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಇತರ ಇಬ್ಬರು ಚುನಾವಣಾ ಆಯುಕ್ತರಾದ ಅನುಪ್ ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಅವರು ನವದೆಹಲಿಯಲ್ಲಿ ಚುನಾವಣಾ ವೇಳಾಪಟ್ಟಿಯನ್ನು ಘೋಷಣೆ ಮಾಡಲಿದ್ದು, ತಕ್ಷಣ ನೀತಿ ಸಂಹಿತೆ ರಾಜ್ಯಾದ್ಯಂತ ಜಾರಿಗೆ ಬರಲಿದೆ.

ದಿನಾಂಕ ಘೋಷಣೆಗೂ ಮುನ್ನವೇ ರಾಜ್ಯಕ್ಕೆ ಮೋದಿ

ಚುನಾವಣಾ ವರ್ಷವಾದ ಕಾರಣ ಈಗಾಗಲೇ ಎಲೆಕ್ಷನ್‌ ಕಾವು ಏರತೊಡಗಿದೆ. ಇಂತಹ ಸಂದರ್ಭದಲ್ಲಿ ಪ್ರಧಾನಿ ಆಗಮಿಸುತ್ತಿರುವುದಕ್ಕೆ ರಾಜಕೀಯ ಮಹತ್ವ ಸಹಜ. ಆದರೆ, ಚುನಾವಣೆ ಘೋಷಣೆಗೆ ಮೊದಲು ಪ್ರಧಾನಿ ಕೈಗೊಳ್ಳುತ್ತಿರುವ ಪ್ರವಾಸದಲ್ಲಿ ವಿಕಾಸದ ಕಾರ್ಯಸೂಚಿಯೇ ಮುನ್ನೆಲೆಗೆ ಬರಲಿದೆ. ಚುನಾವಣೆಗೆ ದಿನಾಂಕ ಘೋಷಣೆಗೆ ಮೊದಲು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಭೇಟಿ ನೀಡಿ ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮತ್ತು ಬೆಂಗಳೂರಿನ ಕೆಆರ್ ಪುರಂ ಮತ್ತು ವೈಟ್‌ಫೀಲ್ಡ್ ನಡುವಿನ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲದೇ ದಾವಣಗೆರೆಯಲ್ಲಿ ಬಿಜೆಪಿ ಆಯೋಜಿಸಿರುವ ಬೃಹತ್​ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕರ್ನಾಟಕ ವಿಧಾನಸಭೆಗೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:57 am, Fri, 24 March 23

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್