AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀತಿ ಸಂಹಿತೆ ಸಿದ್ದತೆಗೆ ಜಿಲ್ಲಾಧಿಕಾರಿಗಳಿಗೆ ತುರ್ತು ಸಂದೇಶ, ಚುನಾವಣೆ ದಿನಾಂಕ ಘೋಷಣೆ ಸುಳಿವು ಕೊಟ್ಟ ಆಯೋಗ

ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ಪತ್ರದ ಮೂಲಕ ಸಂದೇಶ ನೀಡಿದ್ದಾರೆ. ಇದರೊಂದಿಗೆ ಚುನಾವಣೆ ದಿನಾಂಕ ಘೋಷಣೆ ಸುಳಿವು ಸಿಕ್ಕಿದೆ.

ನೀತಿ ಸಂಹಿತೆ ಸಿದ್ದತೆಗೆ ಜಿಲ್ಲಾಧಿಕಾರಿಗಳಿಗೆ ತುರ್ತು ಸಂದೇಶ, ಚುನಾವಣೆ ದಿನಾಂಕ ಘೋಷಣೆ ಸುಳಿವು ಕೊಟ್ಟ ಆಯೋಗ
ಭಾರತೀಯ ಚುನಾವಣಾ ಆಯೋಗ
TV9 Web
| Edited By: |

Updated on:Mar 24, 2023 | 10:02 AM

Share

ಮುಖ್ಯಾಂಶಗಳು

  • ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆಗೆ ಸೂಚನೆ
  • ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಪತ್ರ
  • ನೀತಿ ಸಂಹಿತೆ ಸಿದ್ದತೆಗೆ ಜಿಲ್ಲಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ತುರ್ತು ಸಂದೇಶ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ದಿನಗಣನೆ ಶುರುವಾಗಿದೆ. ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿವೆ. ಎಎಪಿ, ಕೆಆರ್‌ಪಿಪಿ ಕೂಡ ಕಮಾಲ್‌ ಮಾಡಲು ತಯಾರಿ ನಡೆಸಿದ್ದು, ಏಪ್ರಿಲ್‌ ಅಥವಾ ಮೇನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ(Election Commission) ಪತ್ರದ ಮೂಲಕ ತುರ್ತು  ಸೂಚನೆ ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ(Code of Conduct) ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಸಂದೇಶ ನೀಡಿದ್ದು, ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆಯಾಗಬಹುದು. ಹೀಗಾಗಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗಳನ್ನು ಸಿದ್ದವಿಟ್ಟುಕೊಳ್ಳಿ ಎಂದು ಸಂದೇಶ ರವಾನಿಸಲಾಗಿದೆ.

ಇದನ್ನೂ ಓದಿ: Karnataka Assembly Election: ಚುನಾವಣೆ ಹಿನ್ನೆಲೆ ಮತದಾರರಿಗೆ ಆಮಿಷ, ವಾರದಲ್ಲಿ ಕೋಟಿ ಕೋಟಿ ಮೌಲ್ಯದ ವಸ್ತುಗಳು ಜಪ್ತಿ

ಹೌದು…ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಲು ಕೇಂದ್ರ ಚುನಾವಣೆ ಆಯೋಗ ತಯಾರಿ ನಡೆಸಿದ್ದು, ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ರವಾನಿಸಿದೆ. ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆ ಆಗಬಹುದು. ಈ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಪತ್ರ ಹೋಗಿದೆ. ಹೀಗಾಗಿ ಮಾರ್ಚ್​ 27 ಅಥವಾ 28ರಂದು ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ದಿನಾಂಕ ಘೋಷಣೆ ಸಾಧ್ಯತೆ ಇದೆ.

ಮುಂದಿನ ವಾರದ ಆರಂಭದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಬಹುದು ಎಂದು ನವದೆಹಲಿಯ ಮೂಲಗಳು ತಿಳಿಸಿವೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಇತರ ಇಬ್ಬರು ಚುನಾವಣಾ ಆಯುಕ್ತರಾದ ಅನುಪ್ ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಅವರು ನವದೆಹಲಿಯಲ್ಲಿ ಚುನಾವಣಾ ವೇಳಾಪಟ್ಟಿಯನ್ನು ಘೋಷಣೆ ಮಾಡಲಿದ್ದು, ತಕ್ಷಣ ನೀತಿ ಸಂಹಿತೆ ರಾಜ್ಯಾದ್ಯಂತ ಜಾರಿಗೆ ಬರಲಿದೆ.

ದಿನಾಂಕ ಘೋಷಣೆಗೂ ಮುನ್ನವೇ ರಾಜ್ಯಕ್ಕೆ ಮೋದಿ

ಚುನಾವಣಾ ವರ್ಷವಾದ ಕಾರಣ ಈಗಾಗಲೇ ಎಲೆಕ್ಷನ್‌ ಕಾವು ಏರತೊಡಗಿದೆ. ಇಂತಹ ಸಂದರ್ಭದಲ್ಲಿ ಪ್ರಧಾನಿ ಆಗಮಿಸುತ್ತಿರುವುದಕ್ಕೆ ರಾಜಕೀಯ ಮಹತ್ವ ಸಹಜ. ಆದರೆ, ಚುನಾವಣೆ ಘೋಷಣೆಗೆ ಮೊದಲು ಪ್ರಧಾನಿ ಕೈಗೊಳ್ಳುತ್ತಿರುವ ಪ್ರವಾಸದಲ್ಲಿ ವಿಕಾಸದ ಕಾರ್ಯಸೂಚಿಯೇ ಮುನ್ನೆಲೆಗೆ ಬರಲಿದೆ. ಚುನಾವಣೆಗೆ ದಿನಾಂಕ ಘೋಷಣೆಗೆ ಮೊದಲು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಭೇಟಿ ನೀಡಿ ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮತ್ತು ಬೆಂಗಳೂರಿನ ಕೆಆರ್ ಪುರಂ ಮತ್ತು ವೈಟ್‌ಫೀಲ್ಡ್ ನಡುವಿನ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲದೇ ದಾವಣಗೆರೆಯಲ್ಲಿ ಬಿಜೆಪಿ ಆಯೋಜಿಸಿರುವ ಬೃಹತ್​ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕರ್ನಾಟಕ ವಿಧಾನಸಭೆಗೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:57 am, Fri, 24 March 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ