AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾನ ದಿನ ಮತಗಟ್ಟೆಗೆ ಕರೆದುಕೊಂಡು ಹೋಗಲು ಮನೆಗೆ ಬರುತ್ತೆ ಕ್ಯಾಬ್​​: ನೋಂದಣಿ ಕಡ್ಡಾಯ, ಪ್ರಕ್ರಿಯೆ ಇಲ್ಲಿದೆ

ರಾಜ್ಯಾದ್ಯಂತ ಮತದಾನದ ಪ್ರಮಾಣ ಏರಿಕೆಗಾಗಿ ವಯೋವೃದ್ಧರು ಮತ್ತು ಅಂಗವಿಕಲರಿಗೆ ಚುನಾವಣಾ ಆಯೋಗ ಓಲಾ, ಉಬರ್ ಕ್ಯಾಬ್ ಸೌಲಭ್ಯ ನೀಡುತ್ತಿದೆ.

ಮತದಾನ ದಿನ ಮತಗಟ್ಟೆಗೆ ಕರೆದುಕೊಂಡು ಹೋಗಲು ಮನೆಗೆ ಬರುತ್ತೆ ಕ್ಯಾಬ್​​: ನೋಂದಣಿ ಕಡ್ಡಾಯ, ಪ್ರಕ್ರಿಯೆ ಇಲ್ಲಿದೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:May 05, 2023 | 3:14 PM

Share

ಬೆಂಗಳೂರು: ಪ್ರತಿ ಸಾರ್ವತ್ರಿಕ ಚುನಾವಣೆಯಲ್ಲೂ (Election) ಮತದಾನ (Voting) ಪ್ರಮಾಣ ಹೆಚ್ಚಲೆಂದು ಚುನಾವಣಾ ಆಯೋಗ (Election Commission) ಒಂದಲ್ಲಾ ಒಂದು ಹೊಸ ಪ್ಲಾನ್​​ಗಳನ್ನು ಮಾಡುತ್ತದೆ. ಈ ಹಿಂದೆ ಮಹಿಳೆಯರಿಗಾಗಿ ವಿಶೇಷ ಮತಗಟ್ಟೆ, ಚಿತ್ರನಟರ ಮೂಲಕ ಮತದಾನ ಜಾಗೃತಿ ಮೂಡಿಸುತ್ತಿದೆ. ಈ ಬಾರಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಆಯೋಗ ಮಾಡಿಕೊಟ್ಟಿದೆ. ಅದು ಕೇವಲ 80 ವರ್ಷ ಮೇಲ್ಪಟ್ಟವರಿಗೆ ಮತ್ತು ಅಂಗವಿಕಲರಿಗೆ. ಇದಲ್ಲದೇ ಮತಗಟ್ಟೆಗಳನ್ನು ವಿಶೇಷವಾಗಿ ಆಕರ್ಷಕವಾಗಿ ಕಾಣುವಂತೆ ಶೃಂಗರಿಸಲಾಗುತ್ತಿದೆ. ಅದೇ ರೀತಿಯಾಗಿ ಈಗ ಮತ್ತೊಂದು ಹೊಸ ಪ್ಲಾನ್ ಮಾಡಿದೆ. ಮತದಾನದ ಪ್ರಮಾಣ ಏರಿಕೆಗಾಗಿ ವಯೋವೃದ್ಧರು ಮತ್ತು ಅಂಗವಿಕಲರಿಗೆ ಓಲಾ, ಉಬರ್, ಕ್ಯಾಬ್ ಸೌಲಭ್ಯ ನೀಡುತ್ತಿದೆ.

ರಾಜ್ಯದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಇದು ಇನ್ನು 3-4 ದಿವಸ ಮುಂದುವರೆಯುವ ಸಾಧ್ಯತೆ ಇದೆ. ಈ ಹಿನ್ನೆಲೆ ವಯೋವೃದ್ಧರು ಹಾಗೂ ಅಂಗವಿಕಲರು ಮತಗಟ್ಟೆಗೆ ಬಂದು ಮತದಾನ ಮಾಡಲು ಸಾಧ್ಯವಾಗುವುದಿಲ್ಲ. ಇದರಿಂದ ಮತದಾನ ಪ್ರಕ್ರಿಯೆಯಿಂದ ದೂರ ಉಳಿಯುವ ಸಾಧ್ಯತೆ ಇದೆ. ಇದನ್ನು ತಪ್ಪಿಸಲು ಓಲಾ ಹಾಗೂ ಉಬರ್ ಕ್ಯಾಬ್ ಸಂಸ್ಥೆಗಳ ಜೊತೆ ಚುನಾವಣಾ ಆಯೋಗ ಒಡಂಬಡಿಕೆ ಮಾಡಿಕೊಂಡಿದೆ. ಓಲಾ, ಉಬರ್ ಕ್ಯಾಬ್ ಮೂಲಕ ಮನೆಯಿಂದ ಮತಗಟ್ಟೆಗೆ ಕರೆತಂದು ವೋಟ್ ಮಾಡಿಸಿ ಮನೆಗೆ ಮರಳಿ ಡ್ರಾಫ್ ಮಾಡಲಾಗುತ್ತದೆ.

ಈ ಓಲಾ, ಉಬರ್ ಕ್ಯಾಬ್​ ವ್ಯವಸ್ಥೆ ಪಡೆಯುವುದು ಹೇಗೆ

ಮತದಾನದ ದಿನ ಚುನಾವಣಾ ಆ್ಯಪ್​ನಲ್ಲಿ ನೊಂದಾಯಿಸಿಕೊಂಡ ವೃದ್ದರು ಹಾಗೂ ಅಂಗವಿಕಲರಿಗೆ ಚುನಾವಣಾ ಆಯೋಗ ಕ್ಯಾಬ್ ಸೇವೆ ನೀಡಲಿದೆ.

ನೊಂದಣಿ ಪ್ರಕ್ರಿಯೆ

  1. ಚುನಾವಣಾ ಆ್ಯಪ್​​ ಇನ್​ಸ್ಟಾಲ್​ ಮಾಡಿಕೊಳ್ಳಿ
  2. ವಾಹನ ಸೇವೆಗಳು ಎಂಬ ಅಂಶದ ಮೇಲೆ ಕ್ಲಿಕ್ ಮಾಡಿ
  3. ನಿಮ್ಮ ಜಿಲ್ಲೆ ಆಯ್ಕೆ ಮಾಡಿ
  4. ಬಳಿಕ ನಿಮ್ಮ ವಿಧಾನಸಭಾ ಕ್ಷೇತ್ರವನ್ನು ಆಯ್ಕೆ ಮಾಡಿ
  5. ನಂತರ ನಿಮ್ಮ ಮತಗಟ್ಟೆ ಆಯ್ಕೆ ಮಾಡಿ
  6. ವೋಟರ್​ ಐಡಿ ನಂಬರ್​​, ಹೆಸರು, ಇಮೇಲ್ ನಮೂದಿಸಿ
  7. ನೀವು ವಯೋವೃದ್ದರೋ ಅಥವಾ ಅಂಗವಿಕಲರೋ ಎಂಬ ಆಯ್ಕೆನ್ನು ಗುರುತು ಮಾಡಿ
  8. ಕೊನೆದಾಗಿ ಪಿಕಪ್​ ಮತ್ತು ಡ್ರಾಪ್ ಆಯ್ಕೆನ್ನು ಗುರುತು ಮಾಡಿ ಸಬ್​ಮಿಟ್​ ಕೊಡಿ. ಈ ನೊಂದಣಿಗೆ ಮೇ.08 ಕೊನೆಯ ದಿನಾಂಕವಾಗಿದೆ.

ಈ ಕುರಿತು ಚುನಾವಣಾ ಅಧಿಕಾರಿ ಜಡಿಯಪ್ಪ ಅವರು ಮಾಹಿತಿ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:11 pm, Fri, 5 May 23

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್