AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾನ ದಿನ ಮತಗಟ್ಟೆಗೆ ಕರೆದುಕೊಂಡು ಹೋಗಲು ಮನೆಗೆ ಬರುತ್ತೆ ಕ್ಯಾಬ್​​: ನೋಂದಣಿ ಕಡ್ಡಾಯ, ಪ್ರಕ್ರಿಯೆ ಇಲ್ಲಿದೆ

ರಾಜ್ಯಾದ್ಯಂತ ಮತದಾನದ ಪ್ರಮಾಣ ಏರಿಕೆಗಾಗಿ ವಯೋವೃದ್ಧರು ಮತ್ತು ಅಂಗವಿಕಲರಿಗೆ ಚುನಾವಣಾ ಆಯೋಗ ಓಲಾ, ಉಬರ್ ಕ್ಯಾಬ್ ಸೌಲಭ್ಯ ನೀಡುತ್ತಿದೆ.

ಮತದಾನ ದಿನ ಮತಗಟ್ಟೆಗೆ ಕರೆದುಕೊಂಡು ಹೋಗಲು ಮನೆಗೆ ಬರುತ್ತೆ ಕ್ಯಾಬ್​​: ನೋಂದಣಿ ಕಡ್ಡಾಯ, ಪ್ರಕ್ರಿಯೆ ಇಲ್ಲಿದೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:May 05, 2023 | 3:14 PM

Share

ಬೆಂಗಳೂರು: ಪ್ರತಿ ಸಾರ್ವತ್ರಿಕ ಚುನಾವಣೆಯಲ್ಲೂ (Election) ಮತದಾನ (Voting) ಪ್ರಮಾಣ ಹೆಚ್ಚಲೆಂದು ಚುನಾವಣಾ ಆಯೋಗ (Election Commission) ಒಂದಲ್ಲಾ ಒಂದು ಹೊಸ ಪ್ಲಾನ್​​ಗಳನ್ನು ಮಾಡುತ್ತದೆ. ಈ ಹಿಂದೆ ಮಹಿಳೆಯರಿಗಾಗಿ ವಿಶೇಷ ಮತಗಟ್ಟೆ, ಚಿತ್ರನಟರ ಮೂಲಕ ಮತದಾನ ಜಾಗೃತಿ ಮೂಡಿಸುತ್ತಿದೆ. ಈ ಬಾರಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಆಯೋಗ ಮಾಡಿಕೊಟ್ಟಿದೆ. ಅದು ಕೇವಲ 80 ವರ್ಷ ಮೇಲ್ಪಟ್ಟವರಿಗೆ ಮತ್ತು ಅಂಗವಿಕಲರಿಗೆ. ಇದಲ್ಲದೇ ಮತಗಟ್ಟೆಗಳನ್ನು ವಿಶೇಷವಾಗಿ ಆಕರ್ಷಕವಾಗಿ ಕಾಣುವಂತೆ ಶೃಂಗರಿಸಲಾಗುತ್ತಿದೆ. ಅದೇ ರೀತಿಯಾಗಿ ಈಗ ಮತ್ತೊಂದು ಹೊಸ ಪ್ಲಾನ್ ಮಾಡಿದೆ. ಮತದಾನದ ಪ್ರಮಾಣ ಏರಿಕೆಗಾಗಿ ವಯೋವೃದ್ಧರು ಮತ್ತು ಅಂಗವಿಕಲರಿಗೆ ಓಲಾ, ಉಬರ್, ಕ್ಯಾಬ್ ಸೌಲಭ್ಯ ನೀಡುತ್ತಿದೆ.

ರಾಜ್ಯದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಇದು ಇನ್ನು 3-4 ದಿವಸ ಮುಂದುವರೆಯುವ ಸಾಧ್ಯತೆ ಇದೆ. ಈ ಹಿನ್ನೆಲೆ ವಯೋವೃದ್ಧರು ಹಾಗೂ ಅಂಗವಿಕಲರು ಮತಗಟ್ಟೆಗೆ ಬಂದು ಮತದಾನ ಮಾಡಲು ಸಾಧ್ಯವಾಗುವುದಿಲ್ಲ. ಇದರಿಂದ ಮತದಾನ ಪ್ರಕ್ರಿಯೆಯಿಂದ ದೂರ ಉಳಿಯುವ ಸಾಧ್ಯತೆ ಇದೆ. ಇದನ್ನು ತಪ್ಪಿಸಲು ಓಲಾ ಹಾಗೂ ಉಬರ್ ಕ್ಯಾಬ್ ಸಂಸ್ಥೆಗಳ ಜೊತೆ ಚುನಾವಣಾ ಆಯೋಗ ಒಡಂಬಡಿಕೆ ಮಾಡಿಕೊಂಡಿದೆ. ಓಲಾ, ಉಬರ್ ಕ್ಯಾಬ್ ಮೂಲಕ ಮನೆಯಿಂದ ಮತಗಟ್ಟೆಗೆ ಕರೆತಂದು ವೋಟ್ ಮಾಡಿಸಿ ಮನೆಗೆ ಮರಳಿ ಡ್ರಾಫ್ ಮಾಡಲಾಗುತ್ತದೆ.

ಈ ಓಲಾ, ಉಬರ್ ಕ್ಯಾಬ್​ ವ್ಯವಸ್ಥೆ ಪಡೆಯುವುದು ಹೇಗೆ

ಮತದಾನದ ದಿನ ಚುನಾವಣಾ ಆ್ಯಪ್​ನಲ್ಲಿ ನೊಂದಾಯಿಸಿಕೊಂಡ ವೃದ್ದರು ಹಾಗೂ ಅಂಗವಿಕಲರಿಗೆ ಚುನಾವಣಾ ಆಯೋಗ ಕ್ಯಾಬ್ ಸೇವೆ ನೀಡಲಿದೆ.

ನೊಂದಣಿ ಪ್ರಕ್ರಿಯೆ

  1. ಚುನಾವಣಾ ಆ್ಯಪ್​​ ಇನ್​ಸ್ಟಾಲ್​ ಮಾಡಿಕೊಳ್ಳಿ
  2. ವಾಹನ ಸೇವೆಗಳು ಎಂಬ ಅಂಶದ ಮೇಲೆ ಕ್ಲಿಕ್ ಮಾಡಿ
  3. ನಿಮ್ಮ ಜಿಲ್ಲೆ ಆಯ್ಕೆ ಮಾಡಿ
  4. ಬಳಿಕ ನಿಮ್ಮ ವಿಧಾನಸಭಾ ಕ್ಷೇತ್ರವನ್ನು ಆಯ್ಕೆ ಮಾಡಿ
  5. ನಂತರ ನಿಮ್ಮ ಮತಗಟ್ಟೆ ಆಯ್ಕೆ ಮಾಡಿ
  6. ವೋಟರ್​ ಐಡಿ ನಂಬರ್​​, ಹೆಸರು, ಇಮೇಲ್ ನಮೂದಿಸಿ
  7. ನೀವು ವಯೋವೃದ್ದರೋ ಅಥವಾ ಅಂಗವಿಕಲರೋ ಎಂಬ ಆಯ್ಕೆನ್ನು ಗುರುತು ಮಾಡಿ
  8. ಕೊನೆದಾಗಿ ಪಿಕಪ್​ ಮತ್ತು ಡ್ರಾಪ್ ಆಯ್ಕೆನ್ನು ಗುರುತು ಮಾಡಿ ಸಬ್​ಮಿಟ್​ ಕೊಡಿ. ಈ ನೊಂದಣಿಗೆ ಮೇ.08 ಕೊನೆಯ ದಿನಾಂಕವಾಗಿದೆ.

ಈ ಕುರಿತು ಚುನಾವಣಾ ಅಧಿಕಾರಿ ಜಡಿಯಪ್ಪ ಅವರು ಮಾಹಿತಿ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:11 pm, Fri, 5 May 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ