Karnataka Polls 2023: ಬೆಂಗಳೂರಿನಲ್ಲಿ ಚುನಾವಣಾಧಿಕಾರಿಗಳ ಹದ್ದಿನ ಕಣ್ಣು: 28 ಕ್ಷೇತ್ರಗಳಿಗೆ ವೀಕ್ಷಕರ ನೇಮಕ

ಬೆಂಗಳೂರಿನ 28 ವಿಧಾನಸಭೆ ಚುನಾವಣೆ ಮೇಲೆ ನಿಗಾ ವಹಿಸಲು ವೀಕ್ಷಕರನ್ನು ನೇಮಿಸಲಾಗಿದೆ. ಹಾಗಾದ್ರೆ, ಯಾವ ಕ್ಷೇತ್ರಕ್ಕೆ ಯಾರು? ಎನ್ನುವ ಮಾಹಿತಿ ಈ ಕೆಳಗಿನಂತಿದೆ.

Karnataka Polls 2023: ಬೆಂಗಳೂರಿನಲ್ಲಿ ಚುನಾವಣಾಧಿಕಾರಿಗಳ ಹದ್ದಿನ ಕಣ್ಣು:  28 ಕ್ಷೇತ್ರಗಳಿಗೆ ವೀಕ್ಷಕರ ನೇಮಕ
5 ಜನ ಕಲಾವಿದರಿಂದ ಸಾಂಪ್ರದಾಯಿಕ ಚಿತ್ತಾರದೊಂದಿಗೆ ಮತದಾರರನ್ನು ಸೆಳೆಯಲು ಈ ವಿನೂತನ ಕ್ರಮ
Follow us
|

Updated on: Apr 23, 2023 | 4:03 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ರಂಗೇರಿದ್ದು, ಇದೇ ಮೇ 10ರಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇನ್ನು ಅಕ್ರಮಗಳನ್ನು ತಡೆಗಟ್ಟಲು ಚುನಾವಣಾ ಆಯೋಗ ಸಹ ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ. ವಿಶೇಷವಾಗಿ ಬೆಂಗಳೂರಿನ 28 ಕ್ಷೇತ್ರಗಳ ಮೇಲೆ ಚುನಾವಣಾಧಿಕಾರಿಗಳು ನಿಗಾ ವಹಿಸಿದ್ದು, 28 ಕ್ಷೇತ್ರಗಳಿಗೆ ವೀಕ್ಷಕರನ್ನು(observers) ನೇಮಿಸಲಾಗಿದೆ. 14 ಸಾಮಾನ್ಯ ವೀಕ್ಷಕರು, ನಾಲ್ವರು ಪೊಲೀಸ್ ವೀಕ್ಷಕರು, 24 ಮಂದಿ ಖರ್ಚು ವೆಚ್ಚಗಳ ವೀಕ್ಷಕರನ್ನು ನೇಮಕ ಮಾಡಿ ಬೆಂಗಳೂರು ಚುನಾವಣಾಧಿಕಾರಿ ಇಂದು(ಏಪ್ರಿಲ್ 23) ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: Karnataka Assembly Elections 2023: ಬೆಂಗಳೂರಿನಲ್ಲಿ ಈವರೆಗೂ ಸೀಜ್‌ ಆದ ವಸ್ತುಗಳ ಮೌಲ್ಯ ಇಷ್ಟೊಂದಾ? ಅಬ್ಬಬ್ಬಾ..!

ಚುನಾವಣೆ ವೇಳೆ ನಡೆಯುವ ಅಕ್ರಮಗಳು ನಡೆಯುತ್ತಿರುವ ಬಗ್ಗೆ ಹೆಚ್ಚು ಆರೋಪಗಳು ಕೇಳಿಬರುತ್ತಿವೆ. ಹೀಗಾಗಿ ಐಎಎಸ್ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಿಸಲಾಗಿದ್ದು, ನಾಲ್ವರನ್ನು ಪೊಲೀಸರ ಕಾರ್ಯ ವೈಖರಿ ಬಗ್ಗೆ ನಿಗಾವಹಿಸಲಿದ್ದಾರೆ. ಇನ್ನು 24 ವೀಕ್ಷಕರು ಕ್ಷೇತ್ರಗಳ ವಿವಿಧ ಪಕ್ಷಗಳ ಅಭ್ಯರ್ಥಿಗಳ ಖರ್ಚು ವೆಚ್ಚಗಳ ಮೇಲೆ ನಿಗಾ ಇಡಲಿದ್ದಾರೆ.

ಯಾವ ಕ್ಷೇತ್ರಕ್ಕೆ ಯಾರು?

  •  ಮಹದೇವಪುರ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರ- ಡಾ. ನಾರಾಯಣಸ್ವಾಮಿ( ಐಎಎಸ್)
  • ಯಶವಂತಪುರ ಹಾಗೂ ದಾಸರಹಳ್ಳಿ- ಕಾಮಿನಿ ಚೌಹಾಣ್ ರತನ್(ಐಎಎಸ್ )
  • ಆರ್ ಆರ್ ನಗರ ಹಾಗೂ ಶಿವಾಜಿನಗರ- ಅಹಮದ್ ನದೀಮ್
  • ಗೋವಿಂದರಾಜನಗರ ಹಾಗೂ ಚಿಕ್ಕಪೇಟೆ-ಲೋಚನ್ ಸೆಹ್ರಾ
  • ಜಯನಗರ ಹಾಗೂ ಬೊಮ್ಮನಹಳ್ಳಿ- ಸಮೀರ್ ವರ್ಮಾ
  • ವಿಜಯನಗರ ಹಾಗೂ ಬಸವನಗುಡಿ- ಬಿ. ಬಾಲಮಯ ದೇವಿ
  • ಯಲಹಂಕ ಹಾಗೂ ಬ್ಯಾಟರಾಯನಪುರ-ಡಾ.ಪ್ರತಿಭಾ ಸಿಂಗ್
  • ಕೆ ಆರ್ ಪುರ ಹಾಗೂ ಆನೇಕಲ್-ಕೆ. ವೀರರಾಘವ ರಾವ್
  • ಮಲ್ಲೇಶ್ವರಂ ಹಾಗೂ ಹೆಬ್ಬಾಳ-ದೀಪಕ್ ಆನಂದ್
  • ಸರ್ವಜ್ಞನಗರ ಹಾಗೂ ಸಿ ವಿ ರಾಮನ್ ನಗರ-ಡಾ.ಕೆ ವಾಸುಕಿ
  • ರಾಜಾಜಿನಗರ ಹಾಗೂ ಚಾಮರಾಜಪೇಟೆ-ಸುಶೀಲ್ ಕುಮಾರ್ ಪಟೇಲ್
  • ಮಹಾಲಕ್ಷ್ಮಿಲೇಔಟ್ ಹಾಗೂ ಪುಲಿಕೇಶಿನಗರ-ಹರಿಚಂದನ ದಾಸರಿ
  • ಶಾಂತಿನಗರ ಹಾಗೂ ಗಾಂಧಿನಗರ- ಅನಿಮೇಶ್ ಕುಮಾರ್ ಪರಶಾರ್
  • ಪದ್ಮನಾಭನಗರ ಹಾಗೂ ಬಿಟಿಎಂ ಲೇಔಟ್-ಅವದೇಶ್ ಕುಮಾರ್ ತಿವಾರಿ

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್