AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರಕ್ಕೆ ಆಗಮಿಸಿದ ರಾಹುಲ್ ಗಾಂಧಿ ಹೆಲಿಕಾಪ್ಟರ್ ಇಂಚಿಂಚು ಪರಿಶೀಲಿಸಿದ ಚುನಾವಣಾಧಿಕಾರಿಗಳು

ಕಾಂಗ್ರೆಸ್ ಆಯೋಜಿಸಿರುವ ಜೈ ಭಾರತ ಸಮಾವೇಶದಲ್ಲಿ ಭಾಗಿಯಾಗಲು ಕೋಲಾರಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಅನ್ನು ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಕೋಲಾರಕ್ಕೆ ಆಗಮಿಸಿದ ರಾಹುಲ್ ಗಾಂಧಿ ಹೆಲಿಕಾಪ್ಟರ್ ಇಂಚಿಂಚು ಪರಿಶೀಲಿಸಿದ ಚುನಾವಣಾಧಿಕಾರಿಗಳು
ರಾಹುಲ್ ಗಾಂಧಿ
Rakesh Nayak Manchi
|

Updated on:Apr 16, 2023 | 5:34 PM

Share

ಕೋಲಾರ: ಕಾಂಗ್ರೆಸ್ ಆಯೋಜಿಸಿರುವ ಜೈ ಭಾರತ ಸಮಾವೇಶದಲ್ಲಿ ಭಾಗಿಯಾಗಲು ಕೋಲಾರಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಹೆಲಿಕಾಪ್ಟರ್ ಅನ್ನು ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಚುನಾವಣೆ ನೀತಿ ಸಂಹಿತಿ ಜಾರಿಯಲ್ಲಿರುವ (Model Code Of Conduct) ಹಿನ್ನೆಲೆ ಕೋಲಾರದ ಅರ್.ಎಲ್. ಜಾಲಪ್ಪ ಆಸ್ಪತ್ರೆ ಆವರಣದಲ್ಲಿನ ಹೆಲಿಪ್ಯಾಡ್​ನಲ್ಲಿ ಹೆಲಿಕಾಪ್ಟರ್ ಅನ್ನು ಇಂಚಿಂಚು ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಅಧಿಕಾರಿಗಳೊಂದಿಗೆ ಫೈಲೆಟ್ ಮಾತನಾಡಿದರು. ಸಮಾವೇಶದಲ್ಲಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ (Randeep Singh Surjewala), ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar), ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಭಾಗಿಯಾಗಿದ್ದಾರೆ. ಸಮಾವೇಶಕ್ಕೆ ಆಗಮಿಸಿದ ರಾಹುಲ್ ಗಾಂಧಿಗೆ ಕೆ.ಎಚ್. ಮುನಿಯಪ್ಪ ಹಾಗೂ ಬಿಕೆ ಹರಿಪ್ರಸಾದ್ ಅವರು ಹೂ ಗುಚ್ಚ ಕೊಟ್ಟು ಸ್ವಾಗತ ಮಾಡಿದರು. ಈ ವೇಳೆ ಕೆ.ಹೆಚ್​.ಮುನಿಯಪ್ಪ, ಸಲೀಂ ಅಹ್ಮದ್​ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಮಾವೇಶವನ್ನು ದೀಪ ಬೆಳಗುವ ಮೂಲಕ ಚಾಲನೆ ನೀಡಲಾಯಿತು.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಅಧಿಕಾರಿಗಳು ರಾಜಕಾರಣಿಗಳ ಚಲನವಲನಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಇತ್ತೀಚೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಅನ್ನು ಪರಿಶೀಲನೆ ನಡೆಸಲಾಗಿತ್ತು. ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಟೆಂಪಲ್ ರನ್ ನಡೆಸಿದ್ದರು. ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಅಧಿಕಾರಿಗಳ ತಂಡ ಬೊಮ್ಮಾಯಿ ಅವರ ಹೆಲಿಕಾಪ್ಟರ್​ ಪರಿಶೀಲನೆ ನಡೆಸಲಾಗಿತ್ತು. ಹೆಲಿಕಾಪ್ಟರ್, ಸೂಟ್​ಕೇಸ್​ ಅನ್ನು ಅಧಿಕಾರಿಗಳು ಪರಿಶೀಲಿಸಿದ್ದರು.

ಇದನ್ನೂ ಓದಿ: ಮುಖ್ಯಮಂತ್ರಿ ಪಟ್ಟ ನನಗೆ ಬೇಡ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಮಾತ್ರವಲ್ಲದೆ, ಕೋಲಾರಕ್ಕೆ ಆಗಮಿಸಿದ್ದ ಹೆಚ್ ಡಿ ಕುಮಾರಸ್ವಾಮಿ ಅವರ ಹೆಲಿಕಾಪ್ಟರ್ ಅನ್ನು ಕೂಡ ಪರಿಶೀಲನೆ ನಡೆಸಲಾಗಿತ್ತು. ಪಂಚರತ್ನ ಯಾತ್ರೆ ಸಂಬಂಧ ಜಿಲ್ಲೆಯ ಮುಳಬಾಗಿಲು ತಾಲೂಕಿನ ಶಿನಗೇನಹಳ್ಳಿ ಹೆಲಿಪ್ಯಾಡ್​ಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಹೆಚ್​. ಡಿ ಕುಮಾರಸ್ವಾಮಿಯವರ ಹೆಲಿಕಾಪ್ಟರ್​​​ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ಮಾಡಿದ್ದರು.

ಭಾರತದ ಚುನಾವಣಾ ಆಯೋಗ ಮಾರ್ಚ್ 29 ರಂದು ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಗೆ ದಿನಾಂಕವನ್ನು ಘೋಷಣೆ ಮಾಡಿತ್ತು. ಆ ಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. ಹಾಗಾಗಿ ರಾಜಕೀಯ ನಾಯಕರ ವಾಹನ, ಹೆಲಿಕಾಪ್ಟರ್​ಗಳನ್ನು ತಪಾಸಣೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:34 pm, Sun, 16 April 23

Follow Us
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ