AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರಕ್ಕೆ ಆಗಮಿಸಿದ ರಾಹುಲ್ ಗಾಂಧಿ ಹೆಲಿಕಾಪ್ಟರ್ ಇಂಚಿಂಚು ಪರಿಶೀಲಿಸಿದ ಚುನಾವಣಾಧಿಕಾರಿಗಳು

ಕಾಂಗ್ರೆಸ್ ಆಯೋಜಿಸಿರುವ ಜೈ ಭಾರತ ಸಮಾವೇಶದಲ್ಲಿ ಭಾಗಿಯಾಗಲು ಕೋಲಾರಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಅನ್ನು ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಕೋಲಾರಕ್ಕೆ ಆಗಮಿಸಿದ ರಾಹುಲ್ ಗಾಂಧಿ ಹೆಲಿಕಾಪ್ಟರ್ ಇಂಚಿಂಚು ಪರಿಶೀಲಿಸಿದ ಚುನಾವಣಾಧಿಕಾರಿಗಳು
ರಾಹುಲ್ ಗಾಂಧಿ
Rakesh Nayak Manchi
|

Updated on:Apr 16, 2023 | 5:34 PM

Share

ಕೋಲಾರ: ಕಾಂಗ್ರೆಸ್ ಆಯೋಜಿಸಿರುವ ಜೈ ಭಾರತ ಸಮಾವೇಶದಲ್ಲಿ ಭಾಗಿಯಾಗಲು ಕೋಲಾರಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಹೆಲಿಕಾಪ್ಟರ್ ಅನ್ನು ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಚುನಾವಣೆ ನೀತಿ ಸಂಹಿತಿ ಜಾರಿಯಲ್ಲಿರುವ (Model Code Of Conduct) ಹಿನ್ನೆಲೆ ಕೋಲಾರದ ಅರ್.ಎಲ್. ಜಾಲಪ್ಪ ಆಸ್ಪತ್ರೆ ಆವರಣದಲ್ಲಿನ ಹೆಲಿಪ್ಯಾಡ್​ನಲ್ಲಿ ಹೆಲಿಕಾಪ್ಟರ್ ಅನ್ನು ಇಂಚಿಂಚು ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಅಧಿಕಾರಿಗಳೊಂದಿಗೆ ಫೈಲೆಟ್ ಮಾತನಾಡಿದರು. ಸಮಾವೇಶದಲ್ಲಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ (Randeep Singh Surjewala), ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar), ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಭಾಗಿಯಾಗಿದ್ದಾರೆ. ಸಮಾವೇಶಕ್ಕೆ ಆಗಮಿಸಿದ ರಾಹುಲ್ ಗಾಂಧಿಗೆ ಕೆ.ಎಚ್. ಮುನಿಯಪ್ಪ ಹಾಗೂ ಬಿಕೆ ಹರಿಪ್ರಸಾದ್ ಅವರು ಹೂ ಗುಚ್ಚ ಕೊಟ್ಟು ಸ್ವಾಗತ ಮಾಡಿದರು. ಈ ವೇಳೆ ಕೆ.ಹೆಚ್​.ಮುನಿಯಪ್ಪ, ಸಲೀಂ ಅಹ್ಮದ್​ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಮಾವೇಶವನ್ನು ದೀಪ ಬೆಳಗುವ ಮೂಲಕ ಚಾಲನೆ ನೀಡಲಾಯಿತು.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಅಧಿಕಾರಿಗಳು ರಾಜಕಾರಣಿಗಳ ಚಲನವಲನಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಇತ್ತೀಚೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಅನ್ನು ಪರಿಶೀಲನೆ ನಡೆಸಲಾಗಿತ್ತು. ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಟೆಂಪಲ್ ರನ್ ನಡೆಸಿದ್ದರು. ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಅಧಿಕಾರಿಗಳ ತಂಡ ಬೊಮ್ಮಾಯಿ ಅವರ ಹೆಲಿಕಾಪ್ಟರ್​ ಪರಿಶೀಲನೆ ನಡೆಸಲಾಗಿತ್ತು. ಹೆಲಿಕಾಪ್ಟರ್, ಸೂಟ್​ಕೇಸ್​ ಅನ್ನು ಅಧಿಕಾರಿಗಳು ಪರಿಶೀಲಿಸಿದ್ದರು.

ಇದನ್ನೂ ಓದಿ: ಮುಖ್ಯಮಂತ್ರಿ ಪಟ್ಟ ನನಗೆ ಬೇಡ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಮಾತ್ರವಲ್ಲದೆ, ಕೋಲಾರಕ್ಕೆ ಆಗಮಿಸಿದ್ದ ಹೆಚ್ ಡಿ ಕುಮಾರಸ್ವಾಮಿ ಅವರ ಹೆಲಿಕಾಪ್ಟರ್ ಅನ್ನು ಕೂಡ ಪರಿಶೀಲನೆ ನಡೆಸಲಾಗಿತ್ತು. ಪಂಚರತ್ನ ಯಾತ್ರೆ ಸಂಬಂಧ ಜಿಲ್ಲೆಯ ಮುಳಬಾಗಿಲು ತಾಲೂಕಿನ ಶಿನಗೇನಹಳ್ಳಿ ಹೆಲಿಪ್ಯಾಡ್​ಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಹೆಚ್​. ಡಿ ಕುಮಾರಸ್ವಾಮಿಯವರ ಹೆಲಿಕಾಪ್ಟರ್​​​ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ಮಾಡಿದ್ದರು.

ಭಾರತದ ಚುನಾವಣಾ ಆಯೋಗ ಮಾರ್ಚ್ 29 ರಂದು ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಗೆ ದಿನಾಂಕವನ್ನು ಘೋಷಣೆ ಮಾಡಿತ್ತು. ಆ ಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. ಹಾಗಾಗಿ ರಾಜಕೀಯ ನಾಯಕರ ವಾಹನ, ಹೆಲಿಕಾಪ್ಟರ್​ಗಳನ್ನು ತಪಾಸಣೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:34 pm, Sun, 16 April 23

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು