AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿನಿಂದ ದೃತಿಗೆಟ್ಟ ಮಾಜಿ ಶಾಸಕ: ಕ್ಷೇತ್ರದಾದ್ಯಂತ ಕಾಮಗಾರಿ ಸ್ಥಳಕ್ಕೆ ಸುತ್ತುತ್ತಿರುವ ರೇಣುಕಾಚಾರ್ಯ

ಈ ಬಾರಿ ಹೊನ್ನಾಳಿ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೀಳಿದಿದ್ದ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ (MP Renukacharya) ಹೀನಾಯ ಸೋಲು ಅನುಭವಿಸಿದ್ದರು. ಇದರಿಂದ ಆಘಾತ ಅನುಭವಿಸಿದ್ದ ಅವರು ಇದೀಗ ವಿಚಿತ್ರವಾಗಿ ವರ್ತಿಸುತ್ತಿರುವ ಕುರಿತು ಕೇಳಿಬಂದಿದೆ.

ಸೋಲಿನಿಂದ ದೃತಿಗೆಟ್ಟ ಮಾಜಿ ಶಾಸಕ: ಕ್ಷೇತ್ರದಾದ್ಯಂತ ಕಾಮಗಾರಿ ಸ್ಥಳಕ್ಕೆ ಸುತ್ತುತ್ತಿರುವ ರೇಣುಕಾಚಾರ್ಯ
ಎಂಪಿ ರೇಣುಕಾಚಾರ್ಯ
Follow us
ಕಿರಣ್ ಹನುಮಂತ್​ ಮಾದಾರ್
|

Updated on:May 16, 2023 | 1:13 PM

ದಾವಣಗೆರೆ: ಮೇ.10 ರಂದು ರಾಜ್ಯಾದ್ಯಂತ ಚುನಾವಣಾ ಮತದಾನ ನಡೆದಿದ್ದು, ಮೇ.13 ರಂದು ಫಲಿತಾಂಶ ಬಂದಿತ್ತು. ಪೂರ್ಣ ಬಹುಮತ ಪಡೆಯುವುದರೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್​ ಗೆದ್ದಬೀಗಿತ್ತು. ಇನ್ನು ಹೊನ್ನಾಳಿ(Honnali) ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೀಳಿದಿದ್ದ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ (MP Renukacharya) ಅವರು ಕೂಡ ಹೀನಾಯ ಸೋಲು ಅನುಭವಿಸಿದ್ದರು. ಹೌದು ಹೀನಾಯ ಸೋಲು ಕಂಡ ಬಳಿಕ ಇದೀಗ ವಿಚಿತ್ರವಾಗಿ ವರ್ತಿಸುತ್ತಿರುವ ಕುರಿತು ಕೇಳಿಬಂದಿದೆ. ಅದರಂತೆ ಇದೀಗ ದಿನ ಬೆಳಗಾದ್ರೆ, ಕ್ಷೇತ್ರದಲ್ಲಿ ತಾವು ಆರಂಭಿಸಿದ ಕಾಮಗಾರಿ ವೀಕ್ಷಣೆಯನ್ನ ಆರಂಭಿಸುತ್ತಿದ್ದಾರೆ.

ಸೋಲಿನಿಂದ ದೃತಿಗೆಟ್ಟ ರೇಣುಕಾಚಾರ್ಯ ವಿಚಿತ್ರ ವರ್ತನೆ

ಇನ್ನು ತಾವು ಆರಂಭಿಸಿದ 14 ಕೋಟಿ ವೆಚ್ಚದ ಹಿರೇಕಲ್ಮಠ ಕೆರೆಯ ಪುಟ್ ಪಾತ್, ಸರ್ಕಾರಿ ಪದವಿ ಕಾಲೇಜ್ ಗೇಟ್, ತುಂಗಭದ್ರ ಶುದ್ಧ ಕುಡಿಯುವ ನೀರಿನ ‌ಘಟಕ, ಪ್ರವಾಸಿ ಮಂದಿರ ಹೀಗೆ ಹತ್ತು ಹಲವಾರ ಕಾಮಗಾರಿಗಳನ್ನ ತಮ್ಮ ಬೆಂಬಲಿಗರಿಗೆ ತೋರಿಸುತ್ತ ರೇಣುಕಾಚಾರ್ಯ ಸುತ್ತಾಡುತ್ತಿದ್ದಾರೆ. ಈ ಕಾಮಗಾರಿ ನಾನೇ ಮಾಡಿದ್ದು, ಎಂದು ಬೆಳಿಗ್ಗೆಯಿಂದ ಕಾಮಗಾರಿ ಸ್ಥಳಕ್ಕೆ ಸುತ್ತುತ್ತಿದ್ದಾರೆ. ಇನ್ನೂ ಕೂಡ ಸೋಲಿನ ಆಘಾತದಿಂದ ರೇಣುಕಾಚಾರ್ಯ ಹೊರ ಬಂದಿಲ್ಲ. ಜೊತೆಗೆ ಸೋತ ದಿನವೇ ಚುನಾವಣಾ ರಾಜಕೀಯದಿಂದ ನಿವೃತ್ತಿ ಎಂದು ಘೋಷಣೆ ಮಾಡಿದ್ದರು. ಇವೆಲ್ಲವನ್ನ ನೋಡುತ್ತಿದ್ದರೆ ರೇಣುಕಾಚಾರ್ಯರವರಿಗೆ ವಿಶ್ರಾಂತಿಯ ಅವಶ್ಯಕತೆಯಿದೆ ಎಂದು ಸಾರ್ವಜನಿಕರು ಮಾತಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:ಸೋಲಿನ ಬೆನ್ನಲ್ಲೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಎಂಪಿ ರೇಣುಕಾಚಾರ್ಯ

ಸೋಲಿನ ಬೆನ್ನಲ್ಲೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದ ಎಂಪಿ ರೇಣುಕಾಚಾರ್ಯ

ಇನ್ನು ಸೋತ ದಿನವೇ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದರು. ಈ ಬಾರಿ ಚುನಾವಣೆಯಲ್ಲಿ ಸೋಲಾಗಿರುವ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಅವರು ಭಾವುಕರಾಗಿ, ಯಾವುದೇ ಕಾರಣಕ್ಕೂ ಚುನಾವಣೆಗೆ ಬರುವುದಿಲ್ಲ ಎಂದು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದರು. ಫಲಿತಾಂಶದ ಬಳಿಕ ಹೊನ್ನಾಳಿಯಲ್ಲಿ ಬೆಂಬಲಿಗರೊಂದಿಗೆ ಮಾತನಾಡಿದ್ದ ರೇಣುಕಾಚಾರ್ಯ, ಮುಂದಿನ ದಿನಗಳಲ್ಲಿ ಚುನಾವಣೆಗೆ ನಿಲ್ಲುವುದಿಲ್ಲ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಪರ ಕೆಲಸ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದರು.

ಇನ್ನು ಕೊವಿಡ್​​ ವೇಳೆ ಜೀವದ ಹಂಗು ತೊರೆದು ಕೆಲಸ ಮಾಡಿದ್ದೇನೆ. ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದರೂ ಜನ ಸೋಲಿಸಿದ್ದಾರೆ ಎಂದು ಬೆಂಬಲಿಗರ ಮುಂದೆ ಕಣ್ಣೀರಿಟ್ಟಿದ್ದರು. ಅಲ್ಲದೇ ಪಕ್ಷ ಯಾರಿಗೆ ಟಿಕೇಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಚುನಾವಣೆಗೆ ಬರೋದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಕ್ಷೇತ್ರದ ಜನರಿಗೆ ಹಗಲಿರುಳು ಕೆಲಸ ಮಾಡಿದ್ದೆ, ಆದರೂ ಸೋಲು ಕಂಡೆ

ನಾನು ಕ್ಷೇತ್ರದ ಜನರಿಗೆ ಹಗಲಿರುಳು ಕೆಲಸ ಮಾಡಿದೆ. ಆದರೂ ಈ ರೀತಿ ಸೋಲು ಆಯ್ತು ಎಂದು ಸೋಲಿನ ಆಘಾತದಿಂದ ತಮ್ಮ ಕ್ಷೇತ್ರದ ಅಭಿಮಾನಿಗಳ ಎದುರು ಮಾತನಾಡಲು ಆಗದೆ ರೇಣುಕಾಚಾರ್ಯ ಕಣ್ಣೀರಿಟ್ಟಿದ್ದರು. ತಾಲೂಕಿನ ಎಲ್ಲಾ ನಾಯಕರು ನನ್ನ ಪರ ಕೆಲಸ ಮಾಡಿದ್ದರು. ನನಗೆ ಮತ ಕೊಟ್ಟವರಿಗೂ, ಕೊಡದವರಿಗೂ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ. ಸೋಲಿನ ಬಳಿಕವೂ ನೀವು ನನ್ನ ಮನೆಗೆ ಬಂದಿದ್ದೀರಿ. ಕೋವಿಡ್​ನಲ್ಲಿ ಕೆಲಸ ಮಾಡಿದ್ದೆ, ಕ್ಷೇತ್ರದ ಅಭಿವೃದ್ಧಿ ಕೆಲಸ ಮಾಡಿದ್ದೆ. ಆದರೆ ಈಗ ಸೋತ ಬಳಿಕ ನಾನು ಯಾರ ಬಗ್ಗೆಯೂ ಆರೋಪ ಮಾಡಲ್ಲ, ನನ್ನ ಸೋಲಿಗೆ ನಾನೇ ಕಾರಣ ಅಂತ ಭಾವಿಸುತ್ತೇನೆ. ಮತದಾರರಿಗೆ ನನ್ನ ಮೇಲೆ ನಂಬಿಕೆ ಇರಲಿಲ್ಲ ಅನ್ಸುತ್ತೆ. ನಾನು ಗೆದ್ದರೂ ಧ್ವೇಷ ರಾಜಕಾರಣ ಮಾಡಿರಲಿಲ್ಲ ಎಂದು ರೇಣುಕಾಚಾರ್ಯ ನೋವು ತೋಡಿಕೊಂಡಿದ್ದರು.

ಇದನ್ನೂ ಓದಿ:Anil Lad: 30,000ಕ್ಕಿಂತ ಕಡಿಮೆ ಮತ ಬಂದರೆ ರಾಜಕೀಯಕ್ಕೆ ಅನರ್ಹ ಎಂದಿದ್ದ ಅನಿಲ್ ಲಾಡ್ ಪಡೆದ ಮತ ಎಷ್ಟು ಗೊತ್ತಾ? ನೋಟಾ ಕೂಡ ನಾಚಿ ನೀರಾಗಿದೆ

2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಎಂ.ಪಿ. ರೇಣುಕಾಚಾರ್ಯ 80,624 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಡಿ.ಜಿ. ಶಾಂತನಗೌಡ 76,391 ಮತಗಳನ್ನು ಪಡೆದಿದ್ದರು. ಈ ಮೂಲಕ ಎಂಪಿ ರೇಣುಕಾಚಾರ್ಯ ಕೇವಲ 4233 ಮತಗಳಿಂದ ಗೆದ್ದಿದ್ದರು. ಬಳಿಕ ಸಿಎಂ ರಾಜಕೀಯ ಕಾರ್ಯದರ್ಶಿ ಆಗಿದ್ದರು. ಕೋವಿಡ್​ ಸಂದರ್ಭದಲ್ಲಿ ರೇಣುಕಾಚಾರ್ಯ ಅವರು ಫೀಲ್ಡ್​ಗಿಳಿದು ಭಾರಿ ಕೆಲಸ ಮಾಡಿದ್ದರು. ಹೀಗಾಗಿ ಈ ಬಾರಿಯೂ ಸಹ ರೇಣುಕಾಚಾರ್ಯ ಗೆದ್ದೆ ಗೆಲ್ಲುತ್ತಾರೆ ಎಂದು ಭಾವಿಸಲಾಗಿತ್ತು. ಇನ್ನು 2013ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಡಿ.ಜಿ. ಶಾಂತನಗೌಡ ಹೊನ್ನಾಳಿ ಕ್ಷೇತ್ರದಲ್ಲಿ ಗೆದ್ದಿದ್ದರು. ಆಗ ಬಿಜೆಪಿಯಿಂದ ಹೊರ ಹೋಗಿ ಕೆಜೆಪಿ ಸೇರಿದ್ದ ಎಂ.ಪಿ. ರೇಣುಕಾಚಾರ್ಯ ಎರಡನೇ ಸ್ಥಾನ ಪಡೆದಿದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:10 pm, Tue, 16 May 23

ಬುರ್ಖಾ ಮಹಿಳೆಯರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆ
ಬುರ್ಖಾ ಮಹಿಳೆಯರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆ
16 ವರ್ಷದ ಹುಡುಗನ ಪಾತ್ರಕ್ಕಾಗಿ ತೂಕ ಕಡಿಮೆ ಮಾಡಿಕೊಂಡ ವಿನಯ್ ರಾಜ್​ಕುಮಾರ್
16 ವರ್ಷದ ಹುಡುಗನ ಪಾತ್ರಕ್ಕಾಗಿ ತೂಕ ಕಡಿಮೆ ಮಾಡಿಕೊಂಡ ವಿನಯ್ ರಾಜ್​ಕುಮಾರ್
ತೂಫಾನ್ ಅರ್ಧಶತಕ ಸಿಡಿಸಿ ಮತ್ತೊಮ್ಮೆ ಪಂದ್ಯ ಗೆಲ್ಲಿಸಿದ ಹೆಟ್ಮೆಯರ್
ತೂಫಾನ್ ಅರ್ಧಶತಕ ಸಿಡಿಸಿ ಮತ್ತೊಮ್ಮೆ ಪಂದ್ಯ ಗೆಲ್ಲಿಸಿದ ಹೆಟ್ಮೆಯರ್
​ಹಾವುಗಳ ಪ್ರೇಮದ ಬೆಸುಗೆ: ಬರೋಬ್ಬರಿ ಅರ್ಧ ಗಂಟೆ ಮಿಲನ..!
​ಹಾವುಗಳ ಪ್ರೇಮದ ಬೆಸುಗೆ: ಬರೋಬ್ಬರಿ ಅರ್ಧ ಗಂಟೆ ಮಿಲನ..!
ಬಹುದಿನಗಳ ಬಳಿಕ ಒಟ್ಟಿಗೆ ಕಾಣಿಸಿಕೊಂಡ ಜಾರಕಿಹೋಳಿ ಅಣ್ತಮ್ಮಸ್
ಬಹುದಿನಗಳ ಬಳಿಕ ಒಟ್ಟಿಗೆ ಕಾಣಿಸಿಕೊಂಡ ಜಾರಕಿಹೋಳಿ ಅಣ್ತಮ್ಮಸ್
5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ