Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಎರಡನೇ ಪಟ್ಟಿ; ಆಕಾಂಕ್ಷಿಗಳ ಅಸಮಾಧಾನ ಸ್ಫೋಟ, ಕಾಂಗ್ರೆಸ್ ಗೆಲ್ಲಲ್ಲ ಎಂದ ರಘು ಆಚಾರ್

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಗಳ ಎಡನೇ ಪಟ್ಟಿ ಪ್ರಕಟವಾದ ಬೆನ್ನಲ್ಲೇ ಹಲವು ಕಡೆಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ ಸ್ಫೋಟಗೊಂಡಿದೆ.

ಕಾಂಗ್ರೆಸ್ ಎರಡನೇ ಪಟ್ಟಿ; ಆಕಾಂಕ್ಷಿಗಳ ಅಸಮಾಧಾನ ಸ್ಫೋಟ, ಕಾಂಗ್ರೆಸ್ ಗೆಲ್ಲಲ್ಲ ಎಂದ ರಘು ಆಚಾರ್
ರಘು ಆಚಾರ್
Follow us
TV9 Web
| Updated By: Ganapathi Sharma

Updated on: Apr 06, 2023 | 5:45 PM

ಚಿತ್ರದುರ್ಗ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಕಾಂಗ್ರೆಸ್​ ಅಭ್ಯರ್ಥಿಗಳ ಎಡನೇ ಪಟ್ಟಿ ಪ್ರಕಟವಾದ ಬೆನ್ನಲ್ಲೇ ಹಲವು ಕಡೆಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ ಸ್ಫೋಟಗೊಂಡಿದೆ. ಚಿತ್ರದುರ್ಗದಿಂದ ಕೆ.ಸಿ.ವಿರೇಂದ್ರ ಪಪ್ಪಿಗೆ ಟಿಕೆಟ್ ಘೋಷಣೆ ಹಿನ್ನೆಲೆಯಲ್ಲಿ ಕೋಟೆನಾಡಿನಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಮಾಜಿ ಎಂಎಲ್​ಸಿ ರಘು ಆಚಾರ್ ನಾಯಕತ್ವದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ, ರಘು ಆಚಾರ್ ಜೆಡಿಎಸ್ ಸೇರಲು ಸಿದ್ಧತೆ ನಡೆಸಿದ್ದಾರೆ ಎಂದೂ ವರದಿಯಾಗಿದೆ. ಸಿದ್ದರಾಮಯ್ಯ ಅವರೇ ನನಗೆ ಸ್ಪರ್ಧಿಸುವಂತೆ ಹೇಳಿದ್ದರು. ಎಂಎಲ್​ಸಿ ಬೇಡ, ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಎಂದು ಕೈ ನಾಯಕರು ಹೇಳಿದ್ದರು. ಈಗ ಅರ್ಧ ದಾರಿಯಲ್ಲೇ ಕತ್ತು ಕೊಯ್ದಿದ್ದಾರೆ ಎಂದು ರಘು ಆಚಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾತಿ, ಮತ ಬಲ ಇಲ್ಲವೆಂಬ ಸಣ್ಣ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಈ ಜಿಲ್ಲೆಯ ಜನ ಇದಕ್ಕೆ ಉತ್ತರ ನೀಡುತ್ತಾರೆ. ನನಗೊಬ್ಬನಿಗೆ ಅಲ್ಲ, ಮಡಿವಾಳ ಸಮುದಾಯದ, ತರೀಕೆರೆ ಕ್ಷೇತ್ರದ ಆಕಾಂಕ್ಷಿ ಆಗಿದ್ದ ಗೋಪಿಕೃಷ್ಣ ಅವರಿಗೂ ಅನ್ಯಾಯ ಮಾಡಲಾಗಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ; ರಘು ಆಚಾರ ಗುಡುಗು

ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. 197 ಸಣ್ಣ ಸಮುದಾಯಗಳಿಗೆ ಕಾಂಗ್ರೆಸ್ ಒಂದು ಸ್ಥಾನ ನೀಡಿಲ್ಲ. ಆ ಸಮುದಾಯಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷರಿಗೆ ಗೌರವ ಇದೆಯೊ, ಇಲ್ಲವೊ ಗೊತ್ತಿಲ್ಲ ಎಂದು ಡಿಕೆ ಶಿವಕುಮಾರ್ ವಿರುದ್ಧ ರಘು ಆಚಾರ್ ಅಸಮಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: Karnataka Assembly Elections 2023: ಕಾಂಗ್ರೆಸ್​ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ: ಯಾರ್ಯಾರಿಗೆ ಸಿಕ್ತು ಟಿಕೆಟ್? ಇಲ್ಲಿದೆ​​

ಕಾಂಗ್ರೆಸ್ ಪಕ್ಷಕ್ಕೆ ತನು, ಮನ, ಧನ ಸಹಾಯ ಮಾಡಿದ್ದೇನೆ. ಆದರೆ, ನನಗೆ ನಂಬಿಸಿ ಮೋಸ ಮಾಡಿದರು. ಸಾಮಾಜಿಕ ನ್ಯಾಯ ಮರೆತು ಕಾಂಗ್ರೆಸ್ ಅಭ್ಯರ್ಥ ಘೋಷಣೆ ಮಾಡಿದೆ. ಇಡೀ ರಾಜ್ಯದಲ್ಲಿ ವಿಶ್ವಕರ್ಮ ಸಮಾಜ ಕಾಂಗ್ರೆಸ್​​ಗೆ ಮತ ಹಾಕಲ್ಲ. ಮಾರ್ಚ್ 17 ರಂದು ಚಿತ್ರದುರ್ಗದಿಂದ ನಾಮಪತ್ರ ಸಲ್ಲಿಸುತ್ತೇನೆ. ಬೆಂಬಲಿಗರ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.

ನಾಗರಾಜ್ ಛಬ್ಬಿ ರಾಜೀನಾಮೆ ಸಾಧ್ಯತೆ

ಕಲಘಟಗಿ ಕ್ಷೇತ್ರದಲ್ಲಿ ಸಂತೋಷ್ ಲಾಡ್‌ಗೆ ಕಾಂಗ್ರೆಸ್‌ ಟಿಕೆಟ್ ನೀಡಿರುವುದರಿಂದ ಅಸಮಾಧಾನಗೊಂಡಿರುವ ನಾಗರಾಜ್ ಛಬ್ಬಿ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಕಲಘಟಗಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ನಾಗರಾಜ್ ಛಬ್ಬಿ ಇಂದು ರಾತ್ರಿ ಆಪ್ತರ ಸಭೆ ಕರೆದಿದ್ದಾರೆ. ದೆಹಲಿಯಿಂದ ಹುಬ್ಬಳ್ಳಿಗೆ ಆಗಮಿಸುತ್ತಿರುವ ನಾಗರಾಜ್ ಛಬ್ಬಿ, ಆಪ್ತರ ಜೊತೆ ಚರ್ಚಿಸಿ ರಾಜೀನಾಮೆ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ. ಖರ್ಗೆ, ಡಿಕೆಶಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಛಬ್ಬಿ, ಬಹುತೇಕ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಕರ್ನಾಟಕ ವಿಧಾನಸಭಾ ಚುನಾಚವಣೆಯ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?