AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಸಿಯಟ್ ಜಾಹೀರಾತಿಗೂ ಕರ್ನಾಟಕ ಚುನಾವಣೆಗೂ ಸಂಬಂಧವೇ ಇಲ್ಲ; ವೈರಲ್ ವಿಡಿಯೊ ಎಡಿಟ್ ಮಾಡಿದ್ದು!

2017 ರಲ್ಲಿ ಪ್ರಸಾರವಾದ ಸಿಯಟ್ ಟೈರ್ಸ್ ಜಾಹೀರಾತನ್ನು ಎಡಿಟ್ ಮಾಡಿ  ಸಾಮಾಜಿಕ ಮಾಧ್ಯಗಳಲ್ಲಿ ಹರಿಬಿಡಲಾಗಿದೆ. ಮೂಲ ಜಾಹೀರಾತಿನಲ್ಲಿ ಬಿಜೆಪಿ ಅಥವಾ ನರೇಂದ್ರ ಮೋದಿ ವಿರುದ್ಧ ಯಾವುದೇ ಬರಹಗಳಾಗಲೀ ಘೋಷಣೆಗಳಾಗಲೀ ಇಲ್ಲ

Fact Check: ಸಿಯಟ್ ಜಾಹೀರಾತಿಗೂ ಕರ್ನಾಟಕ ಚುನಾವಣೆಗೂ ಸಂಬಂಧವೇ ಇಲ್ಲ; ವೈರಲ್ ವಿಡಿಯೊ ಎಡಿಟ್ ಮಾಡಿದ್ದು!
CEAT ಜಾಹೀರಾತು
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Apr 29, 2023 | 8:57 PM

Share

ಮುಖ್ಯಾಂಶಗಳು

  • ಕರ್ನಾಟಕ ಚುನಾವಣೆ ಬಗ್ಗೆ ಉತ್ತಮ ಜಾಹೀರಾತು ಎಂಬ ಬರಹದೊಂದಿಗೆ ವೈರಲ್ ಆದ ವಿಡಿಯೊ
  • ಎಡಿಟ್ ಮಾಡಿದ ವಿಡಿಯೊದಲ್ಲಿ ಬಳಸಿದ್ದು ಸಿಯಟ್ ಟೈರ್ಸ್ ಜಾಹೀರಾತು
  • ಈ ಜಾಹೀರಾತಿನ ಕೊನೆಯ ಭಾಗವನ್ನು ಎಡಿಟ್ ಮಾಡಿ ವೈರಲ್ ಮಾಡಲಾಗಿದೆ

ಶಾಪಿಂಗ್ ಮಾಲ್​​ನಲ್ಲಿ ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿ ಹಣವನ್ನು ಪಾವತಿಸಲು ನಿರಾಕರಿಸುವ ವ್ಯಕ್ತಿ ತನ್ನ ಕೈಯಲ್ಲಿ, ಬಾಯಲ್ಲಿ ಸಾಮಾಗ್ರಿಗಳನ್ನು ಕೊಂಡೊಯ್ಯುವ ವಿಡಿಯೊ ಅದು. ಹೀಗೆ ಕೊಂಡೊಯ್ಯುವಾಗ ಪಾರ್ಕಿಂಗ್ ಸ್ಥಳದಲ್ಲಿ ಆತನ ಕುತ್ತಿಗೆಯಡಿಯಲ್ಲಿರಿಸಿದ ಕೆಚಪ್ ಬಾಟಲಿ ಜಾರಿ ಬೀಳುತ್ತದೆ. ಹಣ ಉಳಿತಾಯ ಮಾಡಲು ಈ ರೀತಿ ಕಸರತ್ತು ಮಾಡುತ್ತಿದ್ದೀರಾ ಎಂಬ ಹಿನ್ನಲೆ ದನಿ ಕೇಳುತ್ತದೆ. ನಂತರ ಸ್ಕ್ರೀನ್​​ನಲ್ಲಿ ಮೋದಿ (PM Modi) ಹಠಾವೋ ಪೈಸೆ ಬಚಾವೋ, ಹೀಗೆ ಹಲವು ಘೋಷಣೆಗಳು ಕಾಣಿಸಿಕೊಳ್ಳುತ್ತವೆ. ಕರ್ನಾಟಕದ ವಿಧಾನಸಭಾ ಚುನಾವಣೆಯು(Karnataka Elections 2023) ಮೇ 10, 2023 ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಈ ಜಾಹೀರಾತು ವೈರಲ್ (Viral Video) ಆಗಿದೆ.

ಫ್ಯಾಕ್ಟ್ ಚೆಕ್

2017 ರಲ್ಲಿ ಪ್ರಸಾರವಾದ ಸಿಯಟ್ ಟೈರ್ಸ್ ಜಾಹೀರಾತನ್ನು ಎಡಿಟ್ ಮಾಡಿ  ಸಾಮಾಜಿಕ ಮಾಧ್ಯಗಳಲ್ಲಿ ಹರಿಬಿಡಲಾಗಿದೆ. ಮೂಲ ಜಾಹೀರಾತಿನಲ್ಲಿ ಬಿಜೆಪಿ ಅಥವಾ ನರೇಂದ್ರ ಮೋದಿ ವಿರುದ್ಧ ಯಾವುದೇ ಬರಹಗಳಾಗಲೀ ಘೋಷಣೆಗಳಾಗಲೀ ಇಲ್ಲ ಎಂದು ಬೂಮ್​​ಲೈವ್ ಫ್ಯಾಕ್ಟ್ ಚೆಕ್ ಮಾಡಿದೆ.

37 ಸೆಕೆಂಡ್‌ಗಳ ಮೂಲ ಜಾಹೀರಾತಿನ ಕೊನೆಯಲ್ಲಿ ವೈರಲ್ ವಿಡಿಯೊದಲ್ಲಿರುವಂತೆ ಮೋದಿ ಹಠಾವೋ ಎಂಬ ಟ್ಯಾಗ್‌ಲೈನ್ ಇಲ್ಲ. ಅದರ ಬದಲು ಹಣವನ್ನು ಉಳಿಸಲು CEAT ಟೈರ್‌ಗಳನ್ನು ಖರೀದಿಸಿ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: Fact Check: ಬಿಜೆಪಿಗೆ ವೋಟ್ ಇಲ್ಲ ಎಂದ ಅನಿವಾಸಿ ಭಾರತೀಯರು; ವಿಡಿಯೊ ಅಭಿಯಾನ ಕರ್ನಾಟಕ ಚುನಾವಣೆಗೆ ಸಂಬಂಧಿಸಿದ್ದಲ್ಲ

ಈ ಜಾಹೀರಾತು ವಿಡಿಯೊವನ್ನು ಜೂನ್ 8, 2017 ರಂದು ಯೂಟ್ಯೂಬ್‌ನಲ್ಲಿ ಸಿಯಟ್ ಟೈರ್ಸ್ ಅಪ್‌ಲೋಡ್ ಮಾಡಿದೆ.

ಎಡಿಟ್ ಮಾಡಿದ ಈ ವಿಡಿಯೊವನ್ನು ಕರ್ನಾಟಕ ಚುನಾವಣೆಯ ಹ್ಯಾಷ್ ಟ್ಯಾಗ್ ಬಳಸಿ ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಲಾಗುತ್ತಿದೆ. ಮೂಲ ಜಾಹೀರಾತಿಗೂ ಚುನಾವಣೆಗೂ ಯಾವುದೇ ಸಂಬಂಧ ಇಲ್ಲ.

ಮತ್ತಷ್ಟು ಫ್ಯಾಕ್ಟ್ ಚೆಕ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ