AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಸಿಯಟ್ ಜಾಹೀರಾತಿಗೂ ಕರ್ನಾಟಕ ಚುನಾವಣೆಗೂ ಸಂಬಂಧವೇ ಇಲ್ಲ; ವೈರಲ್ ವಿಡಿಯೊ ಎಡಿಟ್ ಮಾಡಿದ್ದು!

2017 ರಲ್ಲಿ ಪ್ರಸಾರವಾದ ಸಿಯಟ್ ಟೈರ್ಸ್ ಜಾಹೀರಾತನ್ನು ಎಡಿಟ್ ಮಾಡಿ  ಸಾಮಾಜಿಕ ಮಾಧ್ಯಗಳಲ್ಲಿ ಹರಿಬಿಡಲಾಗಿದೆ. ಮೂಲ ಜಾಹೀರಾತಿನಲ್ಲಿ ಬಿಜೆಪಿ ಅಥವಾ ನರೇಂದ್ರ ಮೋದಿ ವಿರುದ್ಧ ಯಾವುದೇ ಬರಹಗಳಾಗಲೀ ಘೋಷಣೆಗಳಾಗಲೀ ಇಲ್ಲ

Fact Check: ಸಿಯಟ್ ಜಾಹೀರಾತಿಗೂ ಕರ್ನಾಟಕ ಚುನಾವಣೆಗೂ ಸಂಬಂಧವೇ ಇಲ್ಲ; ವೈರಲ್ ವಿಡಿಯೊ ಎಡಿಟ್ ಮಾಡಿದ್ದು!
CEAT ಜಾಹೀರಾತು
ರಶ್ಮಿ ಕಲ್ಲಕಟ್ಟ
|

Updated on: Apr 29, 2023 | 8:57 PM

Share

ಶಾಪಿಂಗ್ ಮಾಲ್​​ನಲ್ಲಿ ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿ ಹಣವನ್ನು ಪಾವತಿಸಲು ನಿರಾಕರಿಸುವ ವ್ಯಕ್ತಿ ತನ್ನ ಕೈಯಲ್ಲಿ, ಬಾಯಲ್ಲಿ ಸಾಮಾಗ್ರಿಗಳನ್ನು ಕೊಂಡೊಯ್ಯುವ ವಿಡಿಯೊ ಅದು. ಹೀಗೆ ಕೊಂಡೊಯ್ಯುವಾಗ ಪಾರ್ಕಿಂಗ್ ಸ್ಥಳದಲ್ಲಿ ಆತನ ಕುತ್ತಿಗೆಯಡಿಯಲ್ಲಿರಿಸಿದ ಕೆಚಪ್ ಬಾಟಲಿ ಜಾರಿ ಬೀಳುತ್ತದೆ. ಹಣ ಉಳಿತಾಯ ಮಾಡಲು ಈ ರೀತಿ ಕಸರತ್ತು ಮಾಡುತ್ತಿದ್ದೀರಾ ಎಂಬ ಹಿನ್ನಲೆ ದನಿ ಕೇಳುತ್ತದೆ. ನಂತರ ಸ್ಕ್ರೀನ್​​ನಲ್ಲಿ ಮೋದಿ (PM Modi) ಹಠಾವೋ ಪೈಸೆ ಬಚಾವೋ, ಹೀಗೆ ಹಲವು ಘೋಷಣೆಗಳು ಕಾಣಿಸಿಕೊಳ್ಳುತ್ತವೆ. ಕರ್ನಾಟಕದ ವಿಧಾನಸಭಾ ಚುನಾವಣೆಯು(Karnataka Elections 2023) ಮೇ 10, 2023 ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಈ ಜಾಹೀರಾತು ವೈರಲ್ (Viral Video) ಆಗಿದೆ.

ಫ್ಯಾಕ್ಟ್ ಚೆಕ್

2017 ರಲ್ಲಿ ಪ್ರಸಾರವಾದ ಸಿಯಟ್ ಟೈರ್ಸ್ ಜಾಹೀರಾತನ್ನು ಎಡಿಟ್ ಮಾಡಿ  ಸಾಮಾಜಿಕ ಮಾಧ್ಯಗಳಲ್ಲಿ ಹರಿಬಿಡಲಾಗಿದೆ. ಮೂಲ ಜಾಹೀರಾತಿನಲ್ಲಿ ಬಿಜೆಪಿ ಅಥವಾ ನರೇಂದ್ರ ಮೋದಿ ವಿರುದ್ಧ ಯಾವುದೇ ಬರಹಗಳಾಗಲೀ ಘೋಷಣೆಗಳಾಗಲೀ ಇಲ್ಲ ಎಂದು ಬೂಮ್​​ಲೈವ್ ಫ್ಯಾಕ್ಟ್ ಚೆಕ್ ಮಾಡಿದೆ.

37 ಸೆಕೆಂಡ್‌ಗಳ ಮೂಲ ಜಾಹೀರಾತಿನ ಕೊನೆಯಲ್ಲಿ ವೈರಲ್ ವಿಡಿಯೊದಲ್ಲಿರುವಂತೆ ಮೋದಿ ಹಠಾವೋ ಎಂಬ ಟ್ಯಾಗ್‌ಲೈನ್ ಇಲ್ಲ. ಅದರ ಬದಲು ಹಣವನ್ನು ಉಳಿಸಲು CEAT ಟೈರ್‌ಗಳನ್ನು ಖರೀದಿಸಿ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: Fact Check: ಬಿಜೆಪಿಗೆ ವೋಟ್ ಇಲ್ಲ ಎಂದ ಅನಿವಾಸಿ ಭಾರತೀಯರು; ವಿಡಿಯೊ ಅಭಿಯಾನ ಕರ್ನಾಟಕ ಚುನಾವಣೆಗೆ ಸಂಬಂಧಿಸಿದ್ದಲ್ಲ

ಈ ಜಾಹೀರಾತು ವಿಡಿಯೊವನ್ನು ಜೂನ್ 8, 2017 ರಂದು ಯೂಟ್ಯೂಬ್‌ನಲ್ಲಿ ಸಿಯಟ್ ಟೈರ್ಸ್ ಅಪ್‌ಲೋಡ್ ಮಾಡಿದೆ.

ಎಡಿಟ್ ಮಾಡಿದ ಈ ವಿಡಿಯೊವನ್ನು ಕರ್ನಾಟಕ ಚುನಾವಣೆಯ ಹ್ಯಾಷ್ ಟ್ಯಾಗ್ ಬಳಸಿ ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಲಾಗುತ್ತಿದೆ. ಮೂಲ ಜಾಹೀರಾತಿಗೂ ಚುನಾವಣೆಗೂ ಯಾವುದೇ ಸಂಬಂಧ ಇಲ್ಲ.

ಮತ್ತಷ್ಟು ಫ್ಯಾಕ್ಟ್ ಚೆಕ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ