AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಸಿಯಟ್ ಜಾಹೀರಾತಿಗೂ ಕರ್ನಾಟಕ ಚುನಾವಣೆಗೂ ಸಂಬಂಧವೇ ಇಲ್ಲ; ವೈರಲ್ ವಿಡಿಯೊ ಎಡಿಟ್ ಮಾಡಿದ್ದು!

2017 ರಲ್ಲಿ ಪ್ರಸಾರವಾದ ಸಿಯಟ್ ಟೈರ್ಸ್ ಜಾಹೀರಾತನ್ನು ಎಡಿಟ್ ಮಾಡಿ  ಸಾಮಾಜಿಕ ಮಾಧ್ಯಗಳಲ್ಲಿ ಹರಿಬಿಡಲಾಗಿದೆ. ಮೂಲ ಜಾಹೀರಾತಿನಲ್ಲಿ ಬಿಜೆಪಿ ಅಥವಾ ನರೇಂದ್ರ ಮೋದಿ ವಿರುದ್ಧ ಯಾವುದೇ ಬರಹಗಳಾಗಲೀ ಘೋಷಣೆಗಳಾಗಲೀ ಇಲ್ಲ

Fact Check: ಸಿಯಟ್ ಜಾಹೀರಾತಿಗೂ ಕರ್ನಾಟಕ ಚುನಾವಣೆಗೂ ಸಂಬಂಧವೇ ಇಲ್ಲ; ವೈರಲ್ ವಿಡಿಯೊ ಎಡಿಟ್ ಮಾಡಿದ್ದು!
CEAT ಜಾಹೀರಾತು
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Apr 29, 2023 | 8:57 PM

Share

ಶಾಪಿಂಗ್ ಮಾಲ್​​ನಲ್ಲಿ ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿ ಹಣವನ್ನು ಪಾವತಿಸಲು ನಿರಾಕರಿಸುವ ವ್ಯಕ್ತಿ ತನ್ನ ಕೈಯಲ್ಲಿ, ಬಾಯಲ್ಲಿ ಸಾಮಾಗ್ರಿಗಳನ್ನು ಕೊಂಡೊಯ್ಯುವ ವಿಡಿಯೊ ಅದು. ಹೀಗೆ ಕೊಂಡೊಯ್ಯುವಾಗ ಪಾರ್ಕಿಂಗ್ ಸ್ಥಳದಲ್ಲಿ ಆತನ ಕುತ್ತಿಗೆಯಡಿಯಲ್ಲಿರಿಸಿದ ಕೆಚಪ್ ಬಾಟಲಿ ಜಾರಿ ಬೀಳುತ್ತದೆ. ಹಣ ಉಳಿತಾಯ ಮಾಡಲು ಈ ರೀತಿ ಕಸರತ್ತು ಮಾಡುತ್ತಿದ್ದೀರಾ ಎಂಬ ಹಿನ್ನಲೆ ದನಿ ಕೇಳುತ್ತದೆ. ನಂತರ ಸ್ಕ್ರೀನ್​​ನಲ್ಲಿ ಮೋದಿ (PM Modi) ಹಠಾವೋ ಪೈಸೆ ಬಚಾವೋ, ಹೀಗೆ ಹಲವು ಘೋಷಣೆಗಳು ಕಾಣಿಸಿಕೊಳ್ಳುತ್ತವೆ. ಕರ್ನಾಟಕದ ವಿಧಾನಸಭಾ ಚುನಾವಣೆಯು(Karnataka Elections 2023) ಮೇ 10, 2023 ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಈ ಜಾಹೀರಾತು ವೈರಲ್ (Viral Video) ಆಗಿದೆ.

ಫ್ಯಾಕ್ಟ್ ಚೆಕ್

2017 ರಲ್ಲಿ ಪ್ರಸಾರವಾದ ಸಿಯಟ್ ಟೈರ್ಸ್ ಜಾಹೀರಾತನ್ನು ಎಡಿಟ್ ಮಾಡಿ  ಸಾಮಾಜಿಕ ಮಾಧ್ಯಗಳಲ್ಲಿ ಹರಿಬಿಡಲಾಗಿದೆ. ಮೂಲ ಜಾಹೀರಾತಿನಲ್ಲಿ ಬಿಜೆಪಿ ಅಥವಾ ನರೇಂದ್ರ ಮೋದಿ ವಿರುದ್ಧ ಯಾವುದೇ ಬರಹಗಳಾಗಲೀ ಘೋಷಣೆಗಳಾಗಲೀ ಇಲ್ಲ ಎಂದು ಬೂಮ್​​ಲೈವ್ ಫ್ಯಾಕ್ಟ್ ಚೆಕ್ ಮಾಡಿದೆ.

37 ಸೆಕೆಂಡ್‌ಗಳ ಮೂಲ ಜಾಹೀರಾತಿನ ಕೊನೆಯಲ್ಲಿ ವೈರಲ್ ವಿಡಿಯೊದಲ್ಲಿರುವಂತೆ ಮೋದಿ ಹಠಾವೋ ಎಂಬ ಟ್ಯಾಗ್‌ಲೈನ್ ಇಲ್ಲ. ಅದರ ಬದಲು ಹಣವನ್ನು ಉಳಿಸಲು CEAT ಟೈರ್‌ಗಳನ್ನು ಖರೀದಿಸಿ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: Fact Check: ಬಿಜೆಪಿಗೆ ವೋಟ್ ಇಲ್ಲ ಎಂದ ಅನಿವಾಸಿ ಭಾರತೀಯರು; ವಿಡಿಯೊ ಅಭಿಯಾನ ಕರ್ನಾಟಕ ಚುನಾವಣೆಗೆ ಸಂಬಂಧಿಸಿದ್ದಲ್ಲ

ಈ ಜಾಹೀರಾತು ವಿಡಿಯೊವನ್ನು ಜೂನ್ 8, 2017 ರಂದು ಯೂಟ್ಯೂಬ್‌ನಲ್ಲಿ ಸಿಯಟ್ ಟೈರ್ಸ್ ಅಪ್‌ಲೋಡ್ ಮಾಡಿದೆ.

ಎಡಿಟ್ ಮಾಡಿದ ಈ ವಿಡಿಯೊವನ್ನು ಕರ್ನಾಟಕ ಚುನಾವಣೆಯ ಹ್ಯಾಷ್ ಟ್ಯಾಗ್ ಬಳಸಿ ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಲಾಗುತ್ತಿದೆ. ಮೂಲ ಜಾಹೀರಾತಿಗೂ ಚುನಾವಣೆಗೂ ಯಾವುದೇ ಸಂಬಂಧ ಇಲ್ಲ.

ಮತ್ತಷ್ಟು ಫ್ಯಾಕ್ಟ್ ಚೆಕ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!