AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಸಿಯಟ್ ಜಾಹೀರಾತಿಗೂ ಕರ್ನಾಟಕ ಚುನಾವಣೆಗೂ ಸಂಬಂಧವೇ ಇಲ್ಲ; ವೈರಲ್ ವಿಡಿಯೊ ಎಡಿಟ್ ಮಾಡಿದ್ದು!

2017 ರಲ್ಲಿ ಪ್ರಸಾರವಾದ ಸಿಯಟ್ ಟೈರ್ಸ್ ಜಾಹೀರಾತನ್ನು ಎಡಿಟ್ ಮಾಡಿ  ಸಾಮಾಜಿಕ ಮಾಧ್ಯಗಳಲ್ಲಿ ಹರಿಬಿಡಲಾಗಿದೆ. ಮೂಲ ಜಾಹೀರಾತಿನಲ್ಲಿ ಬಿಜೆಪಿ ಅಥವಾ ನರೇಂದ್ರ ಮೋದಿ ವಿರುದ್ಧ ಯಾವುದೇ ಬರಹಗಳಾಗಲೀ ಘೋಷಣೆಗಳಾಗಲೀ ಇಲ್ಲ

Fact Check: ಸಿಯಟ್ ಜಾಹೀರಾತಿಗೂ ಕರ್ನಾಟಕ ಚುನಾವಣೆಗೂ ಸಂಬಂಧವೇ ಇಲ್ಲ; ವೈರಲ್ ವಿಡಿಯೊ ಎಡಿಟ್ ಮಾಡಿದ್ದು!
CEAT ಜಾಹೀರಾತು
Follow us
ರಶ್ಮಿ ಕಲ್ಲಕಟ್ಟ
|

Updated on: Apr 29, 2023 | 8:57 PM

ಶಾಪಿಂಗ್ ಮಾಲ್​​ನಲ್ಲಿ ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿ ಹಣವನ್ನು ಪಾವತಿಸಲು ನಿರಾಕರಿಸುವ ವ್ಯಕ್ತಿ ತನ್ನ ಕೈಯಲ್ಲಿ, ಬಾಯಲ್ಲಿ ಸಾಮಾಗ್ರಿಗಳನ್ನು ಕೊಂಡೊಯ್ಯುವ ವಿಡಿಯೊ ಅದು. ಹೀಗೆ ಕೊಂಡೊಯ್ಯುವಾಗ ಪಾರ್ಕಿಂಗ್ ಸ್ಥಳದಲ್ಲಿ ಆತನ ಕುತ್ತಿಗೆಯಡಿಯಲ್ಲಿರಿಸಿದ ಕೆಚಪ್ ಬಾಟಲಿ ಜಾರಿ ಬೀಳುತ್ತದೆ. ಹಣ ಉಳಿತಾಯ ಮಾಡಲು ಈ ರೀತಿ ಕಸರತ್ತು ಮಾಡುತ್ತಿದ್ದೀರಾ ಎಂಬ ಹಿನ್ನಲೆ ದನಿ ಕೇಳುತ್ತದೆ. ನಂತರ ಸ್ಕ್ರೀನ್​​ನಲ್ಲಿ ಮೋದಿ (PM Modi) ಹಠಾವೋ ಪೈಸೆ ಬಚಾವೋ, ಹೀಗೆ ಹಲವು ಘೋಷಣೆಗಳು ಕಾಣಿಸಿಕೊಳ್ಳುತ್ತವೆ. ಕರ್ನಾಟಕದ ವಿಧಾನಸಭಾ ಚುನಾವಣೆಯು(Karnataka Elections 2023) ಮೇ 10, 2023 ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಈ ಜಾಹೀರಾತು ವೈರಲ್ (Viral Video) ಆಗಿದೆ.

ಫ್ಯಾಕ್ಟ್ ಚೆಕ್

2017 ರಲ್ಲಿ ಪ್ರಸಾರವಾದ ಸಿಯಟ್ ಟೈರ್ಸ್ ಜಾಹೀರಾತನ್ನು ಎಡಿಟ್ ಮಾಡಿ  ಸಾಮಾಜಿಕ ಮಾಧ್ಯಗಳಲ್ಲಿ ಹರಿಬಿಡಲಾಗಿದೆ. ಮೂಲ ಜಾಹೀರಾತಿನಲ್ಲಿ ಬಿಜೆಪಿ ಅಥವಾ ನರೇಂದ್ರ ಮೋದಿ ವಿರುದ್ಧ ಯಾವುದೇ ಬರಹಗಳಾಗಲೀ ಘೋಷಣೆಗಳಾಗಲೀ ಇಲ್ಲ ಎಂದು ಬೂಮ್​​ಲೈವ್ ಫ್ಯಾಕ್ಟ್ ಚೆಕ್ ಮಾಡಿದೆ.

37 ಸೆಕೆಂಡ್‌ಗಳ ಮೂಲ ಜಾಹೀರಾತಿನ ಕೊನೆಯಲ್ಲಿ ವೈರಲ್ ವಿಡಿಯೊದಲ್ಲಿರುವಂತೆ ಮೋದಿ ಹಠಾವೋ ಎಂಬ ಟ್ಯಾಗ್‌ಲೈನ್ ಇಲ್ಲ. ಅದರ ಬದಲು ಹಣವನ್ನು ಉಳಿಸಲು CEAT ಟೈರ್‌ಗಳನ್ನು ಖರೀದಿಸಿ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: Fact Check: ಬಿಜೆಪಿಗೆ ವೋಟ್ ಇಲ್ಲ ಎಂದ ಅನಿವಾಸಿ ಭಾರತೀಯರು; ವಿಡಿಯೊ ಅಭಿಯಾನ ಕರ್ನಾಟಕ ಚುನಾವಣೆಗೆ ಸಂಬಂಧಿಸಿದ್ದಲ್ಲ

ಈ ಜಾಹೀರಾತು ವಿಡಿಯೊವನ್ನು ಜೂನ್ 8, 2017 ರಂದು ಯೂಟ್ಯೂಬ್‌ನಲ್ಲಿ ಸಿಯಟ್ ಟೈರ್ಸ್ ಅಪ್‌ಲೋಡ್ ಮಾಡಿದೆ.

ಎಡಿಟ್ ಮಾಡಿದ ಈ ವಿಡಿಯೊವನ್ನು ಕರ್ನಾಟಕ ಚುನಾವಣೆಯ ಹ್ಯಾಷ್ ಟ್ಯಾಗ್ ಬಳಸಿ ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಲಾಗುತ್ತಿದೆ. ಮೂಲ ಜಾಹೀರಾತಿಗೂ ಚುನಾವಣೆಗೂ ಯಾವುದೇ ಸಂಬಂಧ ಇಲ್ಲ.

ಮತ್ತಷ್ಟು ಫ್ಯಾಕ್ಟ್ ಚೆಕ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ:ಡಾ. ರಾಕೇ
ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ:ಡಾ. ರಾಕೇ