AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಬಿಜೆಪಿಗೆ ವೋಟ್ ಇಲ್ಲ ಎಂದ ಅನಿವಾಸಿ ಭಾರತೀಯರು; ವಿಡಿಯೊ ಅಭಿಯಾನ ಕರ್ನಾಟಕ ಚುನಾವಣೆಗೆ ಸಂಬಂಧಿಸಿದ್ದಲ್ಲ

ವೈರಲ್ ಆಗುತ್ತಿರುವ ವಿಡಿಯೊಗಳು ಮತ್ತು ಫೋಟೋಗಳು ಎರಡು ವರ್ಷಗಳಿಗಿಂತಲೂ ಹಳೆಯವು. ಫಲಕವನ್ನು ಸೂಕ್ಷ್ಮವಾಗಿ ಗಮನಿಸಿದರೆ ಅದರಲ್ಲಿ ಬಾಂಗ್ಲಾ ಭಾಷೆಯಲ್ಲಿ ಬರೆದಿರುವುದು ಕಾಣಿಸುತ್ತದೆ.

Fact Check: ಬಿಜೆಪಿಗೆ ವೋಟ್ ಇಲ್ಲ ಎಂದ ಅನಿವಾಸಿ ಭಾರತೀಯರು; ವಿಡಿಯೊ ಅಭಿಯಾನ ಕರ್ನಾಟಕ ಚುನಾವಣೆಗೆ ಸಂಬಂಧಿಸಿದ್ದಲ್ಲ
ವೈರಲ್ ಆಗಿರುವ ವಿಡಿಯೊ
ರಶ್ಮಿ ಕಲ್ಲಕಟ್ಟ
|

Updated on:Apr 26, 2023 | 7:23 PM

Share

ಕರ್ನಾಟಕ ವಿಧಾನಸಭೆ ಚುನಾವಣೆ 2023ಕ್ಕೆ (Karnataka Assembly Election 2023) ಮುಂಚಿತವಾಗಿ ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ವಿರುದ್ಧ ಅನಿವಾಸಿ ಭಾರತೀಯರು (NRI) ಬಿಜೆಪಿಗೆ ಮತವಿಲ್ಲ (No Vote to BJP) ಎಂದು ಬೋರ್ಡ್ ಹಿಡಿದಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. 45 ಸೆಕೆಂಡುಗಳ ಈ ವಿಡಿಯೊದಲ್ಲಿ ಇಂಗ್ಲೆಂಡ್, ಫಿನ್‌ಲ್ಯಾಂಡ್, ಜರ್ಮನಿ ಮತ್ತು ಯುಎಸ್‌ನ ಕೆಲವು ಭಾಗಗಳಲ್ಲಿ ನೆಲೆಸಿರುವ ಭಾರತೀಯರು ಫಲಕ ಹಿಡಿದು ಬಿಜೆಪಿ ವಿರುದ್ಧ ಪ್ರಚಾರ ಮಾಡುತ್ತಿರುವುದನ್ನು ಕಾಣಬಹುದು.  ಈ ವಿಡಿಯೊವನ್ನು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಮತ್ತು ಕಾಂಗ್ರೆಸ್ ನಾಯಕರು KarnatakaElections2023 ಹ್ಯಾಶ್‌ಟ್ಯಾಗ್‌ನೊಂದಿಗೆ ಹಂಚಿಕೊಂಡಿದ್ದಾರೆ.

ಆದಾಗ್ಯೂ, ಟೈಮ್ಸ್ ನೌ ಈ ವಿಡಿಯೊದ ಫ್ಯಾಕ್ಟ್ ಚೆಕ್ ಮಾಡಿದಾಗ ಇದು ಹಳೆಯ ವಿಡಿಯೊ, ಇದು ಕರ್ನಾಟಕ ಚುನಾವಣೆಗೆ ಸಂಬಂಧಿಸಿದ್ದಲ್ಲ ಎಂಬುದು ತಿಳಿದು ಬಂದಿದೆ.

ಫ್ಯಾಕ್ಟ್ ಚೆಕ್

ವೈರಲ್ ಆಗುತ್ತಿರುವ ವಿಡಿಯೊಗಳು ಮತ್ತು ಫೋಟೋಗಳು ಎರಡು ವರ್ಷಗಳಿಗಿಂತಲೂ ಹಳೆಯವು. ಫಲಕವನ್ನು ಸೂಕ್ಷ್ಮವಾಗಿ ಗಮನಿಸಿದರೆ ಅದರಲ್ಲಿ ಬಾಂಗ್ಲಾ ಭಾಷೆಯಲ್ಲಿ ಬರೆದಿರುವುದು ಕಾಣಿಸುತ್ತದೆ. ಬಂಗಾಳದಲ್ಲಿ ಯಾವುದೇ ವಿಭಜನೆ ಇಲ್ಲ ಎಂಬುದು ಇದರಲ್ಲಿ ಬರೆದಿದೆ. ಇದನ್ನು ನೋಡಿದರೆ ವಿಡಿಯೊ 2021 ರಲ್ಲಿ ನಡೆದ ಬಂಗಾಳ ಚುನಾವಣೆಗೆ ಸಂಬಂಧಿಸಿದ್ದು ಎಂಬುದು ಸ್ಪಷ್ಟ.

‘ಬಿಜೆಪಿಗೆ ಮತ ನೀಡಬೇಡಿ’ ಅಭಿಯಾನ

2021 ರಲ್ಲಿ ಬಂಗಾಳ ಚುನಾವಣೆಗೆ ಮುಂಚಿತವಾಗಿ, ಬಿಜೆಪಿ ವಿರುದ್ಧ ಪ್ರತಿಭಟನಾ ರ್ಯಾಲಿಯಲ್ಲಿ ಟಿಎಂಸಿ  ಕಾರ್ಯಕರ್ತರು ಬಿಜೆಪಿಗೆ ಮತ ನೀಡಬೇಡಿ ಎಂಬ ಘೋಷಣೆಗಳನ್ನು ಕೂಗಿದ್ದರು. ಪ್ರಮುಖ ದಿನಪತ್ರಿಕೆ ದಿ ಹಿಂದೂ ನಡೆಸಿದ ವಿಶ್ಲೇಷಣೆಯು “ಬಿಜೆಪಿಗೆ ಮತ ನೀಡುವುದಿಲ್ಲ” ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಲು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಗೆ ದೊಡ್ಡ ರೀತಿಯಲ್ಲಿ ಸಹಾಯ ಮಾಡಿದೆ ಎಂದು ಹೇಳಿಕೊಂಡಿದೆ. ಪಶ್ಚಿಮ ಬಂಗಾಳ ವಿಧಾನಸಭೆಗೆ ಎಂಟು ಹಂತಗಳಲ್ಲಿ ಚುನಾವಣೆಗಳು ನಡೆದಿತ್ತು.

ಇದನ್ನೂ ಓದಿ:ತಮಿಳುನಾಡು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದ ಡಿಎಂಕೆ ಫೈಲ್ಸ್ ; ಇದರಲ್ಲೇನಿದೆ?

ಮಮತಾಗೆ ಮತ ನೀಡುವುದಿಲ್ಲ

‘ಮಮತಾಗೆ ಮತ ಹಾಕಬೇಡಿ’ ಎಂಬ ಘೋಷಣೆ ಇರುವ ಬಿಳಿ ಟಿ-ಶರ್ಟ್ ಧರಿಸಿ, ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಪಶ್ಚಿಮ ಮೇದಿನಿಪುರ ಜಿಲ್ಲೆಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಫೋಟೊ ವೈರಲ್ ಆಗಿತ್ತು. ಪಂಚಾಯತ್ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಮತ ಚಲಾಯಿಸಿ ಆದರೆ ತೃಣಮೂಲ ಕಾಂಗ್ರೆಸ್ ಗೆ ಮತ ಹಾಕಬೇಡಿ ಎಂದಿದ್ದರು ಅವರು.

2021 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ‘ಬಿಜೆಪಿಗೆ ಮತ ನೀಡಬೇಡಿ’ ಅಭಿಯಾನವನ್ನು ಟೀಕಿಸಿದ ಸುವೇಂದು, ಮುರ್ಷಿದಾಬಾದ್ ಜಿಲ್ಲೆಯ ಸಾಗರ್ದಿಘಿ ಉಪಚುನಾವಣೆಯಲ್ಲಿ ‘ಮಮತಾಗೆ ಮತ ನೀಡಬೇಡಿ’ ಘೋಷಣೆ ಕೂಗಿದ್ದರು. ಕಳೆದ ತಿಂಗಳು ನಡೆದ ಉಪಚುನಾವಣೆಯಲ್ಲಿ ಎಡರಂಗದ ಬೆಂಬಲದೊಂದಿಗೆ ಕಾಂಗ್ರೆಸ್ ಗೆದ್ದು ತೃಣಮೂಲಕ್ಕೆ ಭಾರಿ ಹಿನ್ನಡೆಯಾಗಿತ್ತು.

ಮತ್ತಷ್ಟು ಫ್ಯಾಕ್ಟ್​​ಚೆಕ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:21 pm, Wed, 26 April 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ