AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜರಾಜೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್​ ಕಾರ್ಯಕರ್ತರ ಗಲಾಟೆ: 11ಜನರ ವಿರುದ್ಧ ಕೇಸ್​ ದಾಖಲು

ರಾಜರಾಜೇಶ್ವರಿ ವಿಧಾಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಠಾಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರವಾಗಿ ಚಂದ್ರಪ್ಪ ಜಿಗಳಿ ಎಂಬುವರು ಪ್ರಕರಣ ದಾಖಲಿಸಿದ್ದಾರೆ.

ರಾಜರಾಜೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್​ ಕಾರ್ಯಕರ್ತರ ಗಲಾಟೆ: 11ಜನರ ವಿರುದ್ಧ ಕೇಸ್​ ದಾಖಲು
ಎಫ್​ಐಆರ್
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:May 07, 2023 | 1:53 PM

Share

ಬೆಂಗಳೂರು: ರಾಜರಾಜೇಶ್ವರಿ ವಿಧಾಸಭಾ ಕ್ಷೇತ್ರದಲ್ಲಿ (Rajarajeshwari Assembly Election 2023) ಬಿಜೆಪಿ (BJP), ಕಾಂಗ್ರೆಸ್ (Congress)​ ಕಾರ್ಯಕರ್ತರ ನಡುವೆ ಗಲಾಟೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಠಾಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರವಾಗಿ ಚಂದ್ರಪ್ಪ ಜಿಗಳಿ ಎಂಬುವರು ಪ್ರಕರಣ ದಾಖಲಿಸಿದ್ದಾರೆ. ಮಾಜಿ ಕಾರ್ಪೊರೇಟರ್​ ಜಿ.ಕೆ.ವೆಂಕಟೇಶ್​ ಸೇರಿ 11 ಜನರ ವಿರುದ್ಧ ಐಪಿಸಿ ಸೆಕ್ಷನ್​ 354B, 341, 149, 392, 323ರಡಿ ಪ್ರಕರಣ ದಾಖಲಾಗಿದೆ.

ಬೆಂಗಳೂರಲ್ಲಿ ಬಿಜೆಪಿ-ಕಾಂಗ್ರೆಸ್​ ಕಾರ್ಯಕರ್ತರ ಗಲಾಟೆ

ನಿನ್ನೆ (ಮೇ.06) ರಂದು ಯಶವಂತಪುರ ವಾರ್ಡ್​ನಲ್ಲಿ ಕಾಂಗ್ರೆಸ್​ ಮಹಿಳಾ ಘಟಕ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಪ್ರಚಾರಕ್ಕೆ ಜಿ.ಕೆ.ವೆಂಕಟೇಶ್ ಮತ್ತು ಬೆಂಬಲಿಗರು ಅಡ್ಡಿಪಡಿಸಿ ಹಲ್ಲೆ ಮಾಡಿ ಕಾರ್ಯಕರ್ತೆಯರಿಗೆ ನಿಂದಿಸಿ ಚಿನ್ನದ ಸರ​, ಮೊಬೈಲ್ ಕಸಿದುಕೊಂಡಿದ್ದಾರೆಂಬ ಆರೋಪ ಕೇಳಿಬಂದಿತ್ತು. ಈ ವಿಚಾರವಾಗಿ ಕಾಂಗ್ರೆಸ್​ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾರನ್ನು ಪುರುಷ ಪೊಲೀಸ್​ ಸಿಬ್ಬಂದಿ ತಳ್ಳಾಡಿದ್ದಾರೆ ಎನ್ನಲಾಗಿತ್ತು.

ಇದನ್ನೂ ಓದಿ: ಹೇಗಿತ್ತು ಪ್ರಧಾನಿ ಮೋದಿ ಬೆಂಗಳೂರು ರೋಡ್​ ಶೋ: ಇಲ್ಲಿದೆ ಚಿತ್ರಣ

ಕುಸುಮಾರನ್ನು ಡಿಸಿಪಿ ತಳ್ಳಿದ್ದಾರೆಂದು ಕಾಂಗ್ರೆಸ್​ ಕಾರ್ಯಕರ್ತರು ಆರೋಪ ಮಾಡಿದ್ದು, ಯಶವಂತಪುರ ಠಾಣೆ ಎದುರು ಕಾಂಗ್ರೆಸ್​ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಪೊಲೀಸರು ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆಂದು ಆರೋಪಿಸಿ ಧರಣಿ ಮಾಡಲಾಗಿತ್ತು. ಕಾಂಗ್ರೆಸ್​ ಕಾರ್ಯಕರ್ತರು ಮನೆಮನೆಗೆ ತೆರಳಿ ಚೀಟಿ ಹಂಚಿಕೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದರು.

ಈ ವೇಳೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರನ್ನು ಚದುರಿಸಲು ಲಾಠಿ ಬೀಸಿದ್ದರು. ಅಭ್ಯರ್ಥಿ ಕುಸುಮಾ ಸೇರಿದಂತೆ ಎಲ್ಲರನ್ನೂ ಪೊಲೀಸರು ಚದುರಿಸಿದ್ದರು. ಪೊಲೀಸರ ಜತೆ ಸೇರಿ ಬಿಜೆಪಿ ಕಾರ್ಯಕರ್ತರು ಹಲ್ಲೆಮಾಡಿರುವುದಾಗಿ ಕಾಂಗ್ರೆಸ್​ ಆರೋಪಿಸಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:51 pm, Sun, 7 May 23

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು