AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜರಾಜೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್​ ಕಾರ್ಯಕರ್ತರ ಗಲಾಟೆ: 11ಜನರ ವಿರುದ್ಧ ಕೇಸ್​ ದಾಖಲು

ರಾಜರಾಜೇಶ್ವರಿ ವಿಧಾಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಠಾಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರವಾಗಿ ಚಂದ್ರಪ್ಪ ಜಿಗಳಿ ಎಂಬುವರು ಪ್ರಕರಣ ದಾಖಲಿಸಿದ್ದಾರೆ.

ರಾಜರಾಜೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್​ ಕಾರ್ಯಕರ್ತರ ಗಲಾಟೆ: 11ಜನರ ವಿರುದ್ಧ ಕೇಸ್​ ದಾಖಲು
ಎಫ್​ಐಆರ್
ವಿವೇಕ ಬಿರಾದಾರ
|

Updated on:May 07, 2023 | 1:53 PM

Share

ಬೆಂಗಳೂರು: ರಾಜರಾಜೇಶ್ವರಿ ವಿಧಾಸಭಾ ಕ್ಷೇತ್ರದಲ್ಲಿ (Rajarajeshwari Assembly Election 2023) ಬಿಜೆಪಿ (BJP), ಕಾಂಗ್ರೆಸ್ (Congress)​ ಕಾರ್ಯಕರ್ತರ ನಡುವೆ ಗಲಾಟೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಠಾಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರವಾಗಿ ಚಂದ್ರಪ್ಪ ಜಿಗಳಿ ಎಂಬುವರು ಪ್ರಕರಣ ದಾಖಲಿಸಿದ್ದಾರೆ. ಮಾಜಿ ಕಾರ್ಪೊರೇಟರ್​ ಜಿ.ಕೆ.ವೆಂಕಟೇಶ್​ ಸೇರಿ 11 ಜನರ ವಿರುದ್ಧ ಐಪಿಸಿ ಸೆಕ್ಷನ್​ 354B, 341, 149, 392, 323ರಡಿ ಪ್ರಕರಣ ದಾಖಲಾಗಿದೆ.

ಬೆಂಗಳೂರಲ್ಲಿ ಬಿಜೆಪಿ-ಕಾಂಗ್ರೆಸ್​ ಕಾರ್ಯಕರ್ತರ ಗಲಾಟೆ

ನಿನ್ನೆ (ಮೇ.06) ರಂದು ಯಶವಂತಪುರ ವಾರ್ಡ್​ನಲ್ಲಿ ಕಾಂಗ್ರೆಸ್​ ಮಹಿಳಾ ಘಟಕ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಪ್ರಚಾರಕ್ಕೆ ಜಿ.ಕೆ.ವೆಂಕಟೇಶ್ ಮತ್ತು ಬೆಂಬಲಿಗರು ಅಡ್ಡಿಪಡಿಸಿ ಹಲ್ಲೆ ಮಾಡಿ ಕಾರ್ಯಕರ್ತೆಯರಿಗೆ ನಿಂದಿಸಿ ಚಿನ್ನದ ಸರ​, ಮೊಬೈಲ್ ಕಸಿದುಕೊಂಡಿದ್ದಾರೆಂಬ ಆರೋಪ ಕೇಳಿಬಂದಿತ್ತು. ಈ ವಿಚಾರವಾಗಿ ಕಾಂಗ್ರೆಸ್​ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾರನ್ನು ಪುರುಷ ಪೊಲೀಸ್​ ಸಿಬ್ಬಂದಿ ತಳ್ಳಾಡಿದ್ದಾರೆ ಎನ್ನಲಾಗಿತ್ತು.

ಇದನ್ನೂ ಓದಿ: ಹೇಗಿತ್ತು ಪ್ರಧಾನಿ ಮೋದಿ ಬೆಂಗಳೂರು ರೋಡ್​ ಶೋ: ಇಲ್ಲಿದೆ ಚಿತ್ರಣ

ಕುಸುಮಾರನ್ನು ಡಿಸಿಪಿ ತಳ್ಳಿದ್ದಾರೆಂದು ಕಾಂಗ್ರೆಸ್​ ಕಾರ್ಯಕರ್ತರು ಆರೋಪ ಮಾಡಿದ್ದು, ಯಶವಂತಪುರ ಠಾಣೆ ಎದುರು ಕಾಂಗ್ರೆಸ್​ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಪೊಲೀಸರು ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆಂದು ಆರೋಪಿಸಿ ಧರಣಿ ಮಾಡಲಾಗಿತ್ತು. ಕಾಂಗ್ರೆಸ್​ ಕಾರ್ಯಕರ್ತರು ಮನೆಮನೆಗೆ ತೆರಳಿ ಚೀಟಿ ಹಂಚಿಕೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದರು.

ಈ ವೇಳೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರನ್ನು ಚದುರಿಸಲು ಲಾಠಿ ಬೀಸಿದ್ದರು. ಅಭ್ಯರ್ಥಿ ಕುಸುಮಾ ಸೇರಿದಂತೆ ಎಲ್ಲರನ್ನೂ ಪೊಲೀಸರು ಚದುರಿಸಿದ್ದರು. ಪೊಲೀಸರ ಜತೆ ಸೇರಿ ಬಿಜೆಪಿ ಕಾರ್ಯಕರ್ತರು ಹಲ್ಲೆಮಾಡಿರುವುದಾಗಿ ಕಾಂಗ್ರೆಸ್​ ಆರೋಪಿಸಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:51 pm, Sun, 7 May 23

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?