AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yadgir: ಯಾದಗಿರಿಯಲ್ಲಿ ಬಿಜೆಪಿ ಕಾಂಗ್ರೆಸ್ ಮುಖಂಡರ ನಡುವೆ ದೊಣ್ಣೆ ಫೈಟ್

ಕರ್ನಾಟಕ ವಿಧಾನಸಭೆಗೆ ಇಂದು ಮತದಾನ ನಡೆದಿದ್ದು, ಕೆಲವೆಡೆ ಅಹಿತಕರ ಘಟನೆಗಳು ನಡೆದಿವೆ. ಯಾದಗಿರಿ ಜಿಲ್ಲೆಯ ಶಹಾಪುರ‌ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಗಲಾಟೆಯಾಗಿದೆ.

Yadgir: ಯಾದಗಿರಿಯಲ್ಲಿ ಬಿಜೆಪಿ ಕಾಂಗ್ರೆಸ್ ಮುಖಂಡರ ನಡುವೆ ದೊಣ್ಣೆ ಫೈಟ್
ಯಾದಗಿರಿ ಜಿಲ್ಲೆಯ ಶಹಾಪುರ‌ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಗಲಾಟೆ
Rakesh Nayak Manchi
|

Updated on: May 10, 2023 | 9:52 PM

Share

ಯಾದಗಿರಿ: ಕರ್ನಾಟಕ ವಿಧಾನಸಭೆಗೆ (Karnataka Assembly Elections) ಇಂದು ಮತದಾನ (Voting) ನಡೆದಿದ್ದು, ಕೆಲವೆಡೆ ಅಹಿತಕರ ಘಟನೆಗಳು ನಡೆದಿವೆ. ಯಾದಗಿರಿ (Yadgir) ಜಿಲ್ಲೆಯ ಶಹಾಪುರ‌ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಗಲಾಟೆಯಾಗಿದೆ (BJP Congress Fight). ಇನ್ನೇನು ಮತದಾನ ಪ್ರಕ್ರಿಯೆ ಮುಗಿಯುವ ಹಂತಕ್ಕೆ ತಲುಪಿತು ಎಂದಾದಾಗ ಶಹಾಪುರ‌ ಕ್ಷೇತ್ರದ ಕೆಂಭಾವಿಯಲ್ಲಿ ಬಿಜೆಪಿ ಮುಖಂಡರಿಂದ ಕಾಂಗ್ರೆಸ್ ಮುಖಂಡರ‌‌ ಮೇಲೆ‌ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕೈಯಲ್ಲಿ ದೊಣ್ಣೆಗಳನ್ನ ಹಿಡಿದುಕೊಂಡು‌ ಬಂದು ಬಿಜೆಪಿ ಮುಖಂಡರು ಹಲ್ಲೆ ಮಾಡಿದ್ದಾಗಿ ಆರೋಪಿಸಲಾಗಿದ್ದು, ಘಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಆದಿತ್ಯ ಪಾಟೀಲ್, ರಾಘವೇಂದ್ರ ಹಾಗೂ ವಿನೋಧ ಎಂಬವರು ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ.

ಮತಗಟ್ಟೆ ಸಮೀಪದಲ್ಲೇ ಬಿಜೆಪಿ ಮುಖಂಡರು ಮತದಾರರ ಬಳಿ ಬಿಜೆಪಿಗೆ ಮತ ಹಾಕುವಂತೆ ಹೇಳಿದ್ದಾರೆ. ಈ ವಿಚಾರ ತಿಳಿದ ಕಾಂಗ್ರೆಸ್ ಮುಖಂಡರು ಪ್ರಶ್ನಿಸಿದ್ದಾರೆ. ಇದೇ ಕಾರಣಕ್ಕೆ ಶಹಾಪುರ‌ ಬಿಜೆಪಿ ಅಭ್ಯರ್ಥಿ ಅಮೀನರೆಡ್ಡಿ ಯಾಳಗಿ ಬೆಂಬಲಿಗರು ಶಹಾಪುರ‌ ಕಾಂಗ್ರೆಸ್ ಅಭ್ಯರ್ಥಿ ಶರಣಬಸಪ್ಪಗೌಡ ದರ್ಶನಾಪುರ ಬೆಂಬಲಿಗರ‌ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಮತದಾನಕ್ಕೆ ಹೋಗುತ್ತಿದ್ದಾಗ ಆನೆ ದಾಳಿ, ವ್ಯಕ್ತಿ ಸಾವು; ಇಂದು ಮತದಾನದ ನಂತರ ಸಾವನ್ನಪ್ಪಿದವರು ಎಷ್ಟು ಗೊತ್ತಾ?

ಹಲ್ಲೆ ವೇಳೆ ಬಿಜೆಪಿ ಕಾರ್ಯಕರ್ತರು ಕೈಯಲ್ಲಿ ‌ದೊಣ್ಣೆಗಳನ್ನ ಹಿಡಿದು ಜೋರಾಗಿ ಕೂಗು ಹಾಕಿದ್ದು, ಈ ವೇಳೆ ಪ್ಯಾರಾ ಮಿಲಿಟರಿ ಫೋರ್ಸ್ ಸ್ಥಳಕ್ಕೆ ಆಗಮಿಸಿ ವಾತವರಣ ತಿಳಿಗೊಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಯಾದಗಿರಿ ಎಸ್​ಪಿ ಡಾ.ಸಿ.ಬಿ.ವೇದಮೂರ್ತಿ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಸದ್ಯ ಇಂದು ಮತ್ತು ನಾಳೆ ಕೆಂಭಾವಿ ಹಾಗೂ ಸುರಪುರ ಪಟ್ಟಣದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಇಂದು ಸಂಜೆ 6 ಗಂಟೆಯಿಂದ ನಾಡಿದ್ದು ಬೆಳಿಗ್ಗೆ 6 ಗಂಟೆಯವರೆಗೆ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಘಟನೆ ಬಗ್ಗೆ ಮಾಹಿತಿ ನೀಡಿದ ಎಸ್​ಪಿ ಡಾ.ಸಿ.ಬಿ.ವೇದಮೂರ್ತಿ, ಇಂದು ದಿನ ರಾತ್ರಿ ಪಟ್ರೋಲಿಂಗ್ ಹಾಗೂ ಗಸ್ತು ಮಾಡಲಾಗುವುದು. 5 ಕ್ಕಿಂತ ಹೆಚ್ಚು ಜನ ಜನರು ಸೇರಬಾರದು. ಎಲ್ಲರೂ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ