AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯವರು ವಿಷಜಂತುಗಳು ಎಂದ ಮಾಜಿ ಸಚಿವೆ, ನಟಿ ಉಮಾಶ್ರೀ ವಿರುದ್ಧ ಎಫ್​ಐಆರ್

ಬಿಜೆಪಿಯವರು ವಿಷಜಂತುಗಳು ಎಂದು ಹೇಳಿದ್ದ ಮಾಜಿ ಸಚಿವೆ, ನಟಿ ಉಮಾಶ್ರೀ ವಿರುದ್ಧ ರಾಯಚೂರು ಜಿಲ್ಲೆ ಮಸ್ಕಿ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.

ಬಿಜೆಪಿಯವರು ವಿಷಜಂತುಗಳು ಎಂದ ಮಾಜಿ ಸಚಿವೆ, ನಟಿ ಉಮಾಶ್ರೀ ವಿರುದ್ಧ ಎಫ್​ಐಆರ್
ಮಾಜಿ ಸಚಿವೆ, ನಟಿ ಉಮಾಶ್ರೀ
ಆಯೇಷಾ ಬಾನು
|

Updated on: May 07, 2023 | 12:31 PM

Share

ರಾಯಚೂರು: ಬಿಜೆಪಿಯವರು ವಿಷಜಂತುಗಳು ಎಂದು ಹೇಳಿದ್ದ ಮಾಜಿ ಸಚಿವೆ, ನಟಿ ಉಮಾಶ್ರೀ(Umashree) ವಿರುದ್ಧ ರಾಯಚೂರು ಜಿಲ್ಲೆ ಮಸ್ಕಿ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್(FIR) ದಾಖಲಾಗಿದೆ. ಏ.28ರಂದು‌ ಮಸ್ಕಿ ಪಟ್ಟಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಅಧ್ಯಕ್ಷತೆಯಲ್ಲಿ ನಡೆದಿದ್ದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಉಮಾಶ್ರೀಯವರು ಬಿಜೆಪಿ ಮುಖಂಡರು ವಿಷ ಜಂತುಗಳೆಂದು ಕಿಡಿಕಾರಿದ್ದರು. ಬಿಜೆಪಿ ಮುಖಂಡರು ಧರ್ಮವನ್ನು ಒಡೆದು, ಕೋಮುವಾದ ಸೃಷ್ಟಿಸಿ ಬೆಂಕಿ ಹಚ್ಚುವಂಥವರು ಅನ್ನೋ‌ ಆರೋಪ ಮಾಡಿದ್ದರು. ಇದೇ ವಿಚಾರಗಳ ಆಧಾರದಲ್ಲಿ ಮಾಜಿ ಸಚಿವೆ ಉಮಾಶ್ರೀ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಡಿಕೆ ಶಿವಕುಮಾರ್​ಗೆ ನೋಟಿಸ್ ಜಾರಿ

ಇನ್ನು ಮತ್ತೊಂದೆಡೆ ಕಾಂಗ್ರೆಸ್ ಪಕ್ಷದ ಜಾಹಿರಾತನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು ನೀತಿ ಸಂಹಿತೆ ಉಲ್ಲಂಘನೆ ದೂರಿನ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಗೆ ನೋಟಿಸ್ ಜಾರಿಗೊಳಿಸಿದೆ. ಕಾಂಗ್ರೆಸ್ ಮಾಡಿರುವ ನಿರ್ದಿಷ್ಟ ಆರೋಪಗಳ ಕುರಿತಾಗಿ ಸಾಕ್ಷ್ಯಾಧಾರ ಹಾಜರುಪಡಿಸುವಂತೆ ಚುನಾವಣಾ ಆಯೋಗ ತಾಕೀತು ಮಾಡಿದೆ.

ಇದನ್ನೂ ಓದಿ: KSTDC: ಮತದಾನ ದಿನದಂದು ‘ಮಯೂರ’ ಹೋಟೆಲ್‌ಗಳಲ್ಲಿ ತಂಗಲು 50% ವಿಶೇಷ ರಿಯಾಯಿತಿ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಮೂರೇ ದಿನ ಬಾಕಿ ಉಳಿದಿದೆ. ಈ ನಡುವೆ ಆಡಳಿತ ಪಕ್ಷ ಬಿಜೆಪಿ ವಿರುದ್ಧ ಕಾಂಗ್ರೆಸ್ ನೀಡಿರುವ ಜಾಹಿರಾತು ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದೆ. ಅಲ್ಲದೇ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಕೂಡಾ ಜಾಹಿರಾತನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಜಾ ಪ್ರಾತಿನಿಧ್ಯ ಕಾಯ್ದೆ ಸೆಕ್ಷನ್ 123(4), ಐಪಿಸಿ ಸೆಕ್ಷನ್ 171 ಜಿ ಅಡಿ ಅಪರಾಧವಾಗಿದೆ. ಕಾಂಗ್ರೆಸ್ ಪಕ್ಷದ ಜಾಹೀರಾತಿನಲ್ಲಿನ ನಿರ್ದಿಷ್ಟ ಭ್ರಷ್ಟಾಚಾರ ಆರೋಪಗಳು ಚುನಾವಣೆ ಪ್ರಕ್ರಿಯೆ ಮೇಲೂ ಪರಿಣಾಮ ಬೀರಬಹುದಾದ ಕಾರಣ ಭ್ರಷ್ಟಾಚಾರ ಆರೋಪಗಳಿಗೆ ಸಾಕ್ಷ್ಯಾಧಾರ ಒದಗಿಸುವಂತೆ ಚುನಾವಣಾ ಆಯೋಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗೆ ನೋಟಿಸ್ ಜಾರಿಗೊಳಿಸಿದೆ.

ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್