AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚೋದನಕಾರಿ ಹೇಳಿಕೆ ಆರೋಪ: ಸಂಸದೆ ಸುಮಲತಾ ಆಪ್ತನ ವಿರುದ್ಧ FIR ದಾಖಲು

ಪ್ರಚೋದನಕಾರಿ ಭಾಷಣ ಹಿನ್ನೆಲೆ ಸಂಸದೆ ಸುಮಲತಾ ಆಪ್ತನ ವಿರುದ್ಧ FIR ದಾಖಲು ಮಾಡಲಾಗಿದೆ. ಏ. 29ರಂದು ಬಹಿರಂಗ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ಪ್ರಚೋದನಕಾರಿ ಹೇಳಿಕೆ ಆರೋಪ ಮಾಡಲಾಗಿದೆ.

ಪ್ರಚೋದನಕಾರಿ ಹೇಳಿಕೆ ಆರೋಪ: ಸಂಸದೆ ಸುಮಲತಾ ಆಪ್ತನ ವಿರುದ್ಧ FIR ದಾಖಲು
ಸಂಸದೆ ಸುಮಲತಾ
ಗಂಗಾಧರ​ ಬ. ಸಾಬೋಜಿ
|

Updated on:May 01, 2023 | 5:13 PM

Share

ಮಂಡ್ಯ: ಪ್ರಚೋದನಕಾರಿ ಭಾಷಣ ಹಿನ್ನೆಲೆ ಸಂಸದೆ ಸುಮಲತಾ (Sumalatha) ಆಪ್ತನ ವಿರುದ್ಧ FIR ದಾಖಲು ಮಾಡಲಾಗಿದೆ. ಏ. 29ರಂದು ಬಹಿರಂಗ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ಪ್ರಚೋದನಕಾರಿ ಹೇಳಿಕೆ ಆರೋಪ ಮಾಡಲಾಗಿದೆ. ಹಾಗಾಗಿ ಚುನಾವಣಾಧಿಕಾರಿ ರವೀಂದ್ರ ದೂರಿನಡಿ ಪೊಲೀಸರು ಕೇಸ್ ದಾಖಲಿಸಿಕೊಂಡು FIR ದಾಖಲು ಮಾಡಿದ್ದಾರೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲು ಮಾಡಲಾಗಿದೆ. ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ತೆರವುಗೊಳಿಸುವಂತೆ ರಕ್ಷಣಾ ಸಚಿವರಿಗೆ ಮನವಿ ಮಾಡಿದ್ದರು. ಮಸೀದಿ ಸ್ಥಳದಲ್ಲಿ ಆಂಜನೇಯ ದೇವಸ್ಥಾನದ ನಿರ್ಮಾಣಕ್ಕೆ ಸಹಕರಿಸಿ ಎಂದಿದ್ದರು.

ಮುನಿರಾಜು ಪರ ಸುಮಲತಾ ಮತಯಾಚನೆ 

ಸಂಸದೆ ಸುಮಲತಾ ಅಂಬರೀಷ್​ರಿಂದ ಮತ ಶಿಕಾರಿ ಮುಂದುವರೆದಿದ್ದು, ಮಳವಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರಾಜು ಪರ ಇಂದು ಪ್ರಚಾರ ಮಾಡಿದರು. ಬಿಜೆಪಿ ಅಭ್ಯರ್ಥಿ ಮುನಿರಾಜು ಪರ ಮತಯಾಚಿಸಿದರು. ಸಂಸದೆಗೆ ಅಭ್ಯರ್ಥಿ ಮುನಿರಾಜು ಹಾಗೂ ಸ್ಥಳೀಯ ಮುಖಂಡರು ಸಾಥ್ ಕೊಟ್ಟರು. ಬಳಿಕ ಮಾತನಾಡಿದ ಅವರು, ನಾನು ಮಳವಳ್ಳಿಯ ಹುಚ್ಚೇಗೌಡರ ಸೊಸೆ ಎಂದು ಮಾತು ಪ್ರಾರಂಭಿಸಿದರು.

ಇದನ್ನೂ ಓದಿ: ಬಿಜೆಪಿ ನಾಯಕರು ಬೋಗಸ್ ಭರವಸೆಗಳನ್ನು ಕೊಡುತ್ತಾರೆ: ಬಿಜೆಪಿ ಪ್ರಣಾಳಿಕೆ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯ

ದಳಪತಿಗಳ ವಿರುದ್ದ ಸುಮಲತಾ ವಾಗ್ದಾಳಿ

ಹುಚ್ಚೇಗೌಡ ದಿವಂಗತ ಅಂಬರೀಷ್​ರ ತಂದೆ. ಮಹಿಳಾ ಮತಗಳಿಗೆ ಗಾಳ ಹಾಕಿದ ಸಂಸದೆ ಸುಮಲತಾ, ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದೆ. ಸೋಲ್ತಿನೊ ಗೆಲ್ತಿನೊ ನನಿಗೆ ಗೊತ್ತಿರಲಿಲ್ಲ ಮುಂದಿನ ಜೀವನದ ಬಗ್ಗೆ ತಿಳಿದಿರಲಿಲ್ಲ. ನೀವು ಆಶೀರ್ವಾದ ಮಾಡಿ ಗೆಲ್ಲಿಸಿದ್ದೀರಾ ಅದಕ್ಕೆ ನಾ ರುಣಿ. ಕಳೆದ ನಾಲ್ಕು ವರ್ಷಗಳಿಂದಲೂ ನನಿಗೆ ತೊಂದರೆ ನೀಡುತ್ತಲೇ ಇದ್ದಾರೆ. ಎಷ್ಟೋ ಬಾರಿ ಮನೆಯಲ್ಲಿ ಕುಳಿತು ಕಣ್ಣೀರಾಗಿದ್ದು ಉಂಟು ಎಂದರು.

ಬಹಳ ಸಲ ನನ್ನ ಮಗ ಕೇಳಿದ್ದ ಅಮ್ಮ ನಿನಗೆ ಇದೆಲ್ಲಾ ಬೇಕಿತ್ತಾ ಎಂದು. ನಮಗೆ ರಾಜಕೀಯ ಬೇಕಾ ಅಂತ ನಾನು ಅಂಬರೀಷ್​ರವರ ಹೆಸರನ್ನ ಉಳಿಸಬೇಕೆಂಬ ಛಲದಿಂದ ಬಂದಿರುವೆ ಎಂದು ಪರೋಕ್ಷವಾಗಿ ಪದೇ ಪದೇ ದಳಪತಿಗಳ ವಿರುದ್ದ ಸುಮಲತಾ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: BJP Manifesto: ಬಿಜೆಪಿ ಚುನಾವಣಾ ಪ್ರಣಾಳಿಕೆಗೆ ಮೆಚ್ಚುಗೆ ಸೂಚಿಸಿದ ಪ್ರಧಾನಿ ಮೋದಿ, ಕನ್ನಡದಲ್ಲೇ ಟ್ವೀಟ್

ಡಾ.ಕೆ ಅನ್ನಧಾನಿ ವಿರುದ್ದ ನೇರಾ ನೇರ ವಾಗ್ದಾಳಿ

ಮಳವಳ್ಳಿ ಜೆಡಿಎಸ್ ಶಾಸಕ ಡಾ.ಕೆ ಅನ್ನಧಾನಿ ವಿರುದ್ದ ನೇರಾ ನೇರ ವಾಗ್ದಾಳಿ ಮಾಡಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿ ಪಡಿಸುವ ರಾಜಕಾರಣಿ ನಮಿಗೆ ಅವಶ್ಯಕತೆಯಿಲ್ಲ ಎಂದರು. ಇನ್ನು ಕಾಂಗ್ರೆಸ್​ನ ಉಚಿತ ಯೋಜನೆ ಕುರಿತು ಪ್ರತಿಕ್ರಿಯಿಸಿದ್ದು, ಉಚಿತ ಯೋಜನೆ ಅಂತೀರಾ ಅದನ್ನ ಹೇಗೆ ಪೂರೈಸುತ್ತೀರಿ? ಸರ್ಕಾರಿ ನೌಕರರಿಗೆ ಹೇಗೆ ವೇತನ ನೀಡ್ತೀರಾ? ಮಳೆ ಬಂದು ಅತಿವೃಷ್ಠಿಯಾದ್ರೆ ಪರಿಹಾರ ಎಲ್ಲಿಂದ ತಂದು ಕೊಡುತ್ತೀರಾ ಎಂದು ಪ್ರಶ್ನೆಗಳ ಸುರಿಮಳೆಗೈದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:13 pm, Mon, 1 May 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?