AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚೋದನಕಾರಿ ಹೇಳಿಕೆ ಆರೋಪ: ಸಂಸದೆ ಸುಮಲತಾ ಆಪ್ತನ ವಿರುದ್ಧ FIR ದಾಖಲು

ಪ್ರಚೋದನಕಾರಿ ಭಾಷಣ ಹಿನ್ನೆಲೆ ಸಂಸದೆ ಸುಮಲತಾ ಆಪ್ತನ ವಿರುದ್ಧ FIR ದಾಖಲು ಮಾಡಲಾಗಿದೆ. ಏ. 29ರಂದು ಬಹಿರಂಗ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ಪ್ರಚೋದನಕಾರಿ ಹೇಳಿಕೆ ಆರೋಪ ಮಾಡಲಾಗಿದೆ.

ಪ್ರಚೋದನಕಾರಿ ಹೇಳಿಕೆ ಆರೋಪ: ಸಂಸದೆ ಸುಮಲತಾ ಆಪ್ತನ ವಿರುದ್ಧ FIR ದಾಖಲು
ಸಂಸದೆ ಸುಮಲತಾ
Follow us
ಗಂಗಾಧರ​ ಬ. ಸಾಬೋಜಿ
|

Updated on:May 01, 2023 | 5:13 PM

ಮಂಡ್ಯ: ಪ್ರಚೋದನಕಾರಿ ಭಾಷಣ ಹಿನ್ನೆಲೆ ಸಂಸದೆ ಸುಮಲತಾ (Sumalatha) ಆಪ್ತನ ವಿರುದ್ಧ FIR ದಾಖಲು ಮಾಡಲಾಗಿದೆ. ಏ. 29ರಂದು ಬಹಿರಂಗ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ಪ್ರಚೋದನಕಾರಿ ಹೇಳಿಕೆ ಆರೋಪ ಮಾಡಲಾಗಿದೆ. ಹಾಗಾಗಿ ಚುನಾವಣಾಧಿಕಾರಿ ರವೀಂದ್ರ ದೂರಿನಡಿ ಪೊಲೀಸರು ಕೇಸ್ ದಾಖಲಿಸಿಕೊಂಡು FIR ದಾಖಲು ಮಾಡಿದ್ದಾರೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲು ಮಾಡಲಾಗಿದೆ. ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ತೆರವುಗೊಳಿಸುವಂತೆ ರಕ್ಷಣಾ ಸಚಿವರಿಗೆ ಮನವಿ ಮಾಡಿದ್ದರು. ಮಸೀದಿ ಸ್ಥಳದಲ್ಲಿ ಆಂಜನೇಯ ದೇವಸ್ಥಾನದ ನಿರ್ಮಾಣಕ್ಕೆ ಸಹಕರಿಸಿ ಎಂದಿದ್ದರು.

ಮುನಿರಾಜು ಪರ ಸುಮಲತಾ ಮತಯಾಚನೆ 

ಸಂಸದೆ ಸುಮಲತಾ ಅಂಬರೀಷ್​ರಿಂದ ಮತ ಶಿಕಾರಿ ಮುಂದುವರೆದಿದ್ದು, ಮಳವಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರಾಜು ಪರ ಇಂದು ಪ್ರಚಾರ ಮಾಡಿದರು. ಬಿಜೆಪಿ ಅಭ್ಯರ್ಥಿ ಮುನಿರಾಜು ಪರ ಮತಯಾಚಿಸಿದರು. ಸಂಸದೆಗೆ ಅಭ್ಯರ್ಥಿ ಮುನಿರಾಜು ಹಾಗೂ ಸ್ಥಳೀಯ ಮುಖಂಡರು ಸಾಥ್ ಕೊಟ್ಟರು. ಬಳಿಕ ಮಾತನಾಡಿದ ಅವರು, ನಾನು ಮಳವಳ್ಳಿಯ ಹುಚ್ಚೇಗೌಡರ ಸೊಸೆ ಎಂದು ಮಾತು ಪ್ರಾರಂಭಿಸಿದರು.

ಇದನ್ನೂ ಓದಿ: ಬಿಜೆಪಿ ನಾಯಕರು ಬೋಗಸ್ ಭರವಸೆಗಳನ್ನು ಕೊಡುತ್ತಾರೆ: ಬಿಜೆಪಿ ಪ್ರಣಾಳಿಕೆ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯ

ದಳಪತಿಗಳ ವಿರುದ್ದ ಸುಮಲತಾ ವಾಗ್ದಾಳಿ

ಹುಚ್ಚೇಗೌಡ ದಿವಂಗತ ಅಂಬರೀಷ್​ರ ತಂದೆ. ಮಹಿಳಾ ಮತಗಳಿಗೆ ಗಾಳ ಹಾಕಿದ ಸಂಸದೆ ಸುಮಲತಾ, ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದೆ. ಸೋಲ್ತಿನೊ ಗೆಲ್ತಿನೊ ನನಿಗೆ ಗೊತ್ತಿರಲಿಲ್ಲ ಮುಂದಿನ ಜೀವನದ ಬಗ್ಗೆ ತಿಳಿದಿರಲಿಲ್ಲ. ನೀವು ಆಶೀರ್ವಾದ ಮಾಡಿ ಗೆಲ್ಲಿಸಿದ್ದೀರಾ ಅದಕ್ಕೆ ನಾ ರುಣಿ. ಕಳೆದ ನಾಲ್ಕು ವರ್ಷಗಳಿಂದಲೂ ನನಿಗೆ ತೊಂದರೆ ನೀಡುತ್ತಲೇ ಇದ್ದಾರೆ. ಎಷ್ಟೋ ಬಾರಿ ಮನೆಯಲ್ಲಿ ಕುಳಿತು ಕಣ್ಣೀರಾಗಿದ್ದು ಉಂಟು ಎಂದರು.

ಬಹಳ ಸಲ ನನ್ನ ಮಗ ಕೇಳಿದ್ದ ಅಮ್ಮ ನಿನಗೆ ಇದೆಲ್ಲಾ ಬೇಕಿತ್ತಾ ಎಂದು. ನಮಗೆ ರಾಜಕೀಯ ಬೇಕಾ ಅಂತ ನಾನು ಅಂಬರೀಷ್​ರವರ ಹೆಸರನ್ನ ಉಳಿಸಬೇಕೆಂಬ ಛಲದಿಂದ ಬಂದಿರುವೆ ಎಂದು ಪರೋಕ್ಷವಾಗಿ ಪದೇ ಪದೇ ದಳಪತಿಗಳ ವಿರುದ್ದ ಸುಮಲತಾ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: BJP Manifesto: ಬಿಜೆಪಿ ಚುನಾವಣಾ ಪ್ರಣಾಳಿಕೆಗೆ ಮೆಚ್ಚುಗೆ ಸೂಚಿಸಿದ ಪ್ರಧಾನಿ ಮೋದಿ, ಕನ್ನಡದಲ್ಲೇ ಟ್ವೀಟ್

ಡಾ.ಕೆ ಅನ್ನಧಾನಿ ವಿರುದ್ದ ನೇರಾ ನೇರ ವಾಗ್ದಾಳಿ

ಮಳವಳ್ಳಿ ಜೆಡಿಎಸ್ ಶಾಸಕ ಡಾ.ಕೆ ಅನ್ನಧಾನಿ ವಿರುದ್ದ ನೇರಾ ನೇರ ವಾಗ್ದಾಳಿ ಮಾಡಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿ ಪಡಿಸುವ ರಾಜಕಾರಣಿ ನಮಿಗೆ ಅವಶ್ಯಕತೆಯಿಲ್ಲ ಎಂದರು. ಇನ್ನು ಕಾಂಗ್ರೆಸ್​ನ ಉಚಿತ ಯೋಜನೆ ಕುರಿತು ಪ್ರತಿಕ್ರಿಯಿಸಿದ್ದು, ಉಚಿತ ಯೋಜನೆ ಅಂತೀರಾ ಅದನ್ನ ಹೇಗೆ ಪೂರೈಸುತ್ತೀರಿ? ಸರ್ಕಾರಿ ನೌಕರರಿಗೆ ಹೇಗೆ ವೇತನ ನೀಡ್ತೀರಾ? ಮಳೆ ಬಂದು ಅತಿವೃಷ್ಠಿಯಾದ್ರೆ ಪರಿಹಾರ ಎಲ್ಲಿಂದ ತಂದು ಕೊಡುತ್ತೀರಾ ಎಂದು ಪ್ರಶ್ನೆಗಳ ಸುರಿಮಳೆಗೈದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:13 pm, Mon, 1 May 23

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್