AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್​ ಅಧ್ಯಕ್ಷ ಶ್ರೀನಿವಾಸ್ ವಿರುದ್ಧ ಎಫ್​ಐಆರ್ ದಾಖಲು

ರಾಷ್ಟ್ರೀಯ ಯುವ ಕಾಂಗ್ರೆಸ್​ ಅಧ್ಯಕ್ಷ ಶ್ರೀನಿವಾಸ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ

ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್​ ಅಧ್ಯಕ್ಷ ಶ್ರೀನಿವಾಸ್ ವಿರುದ್ಧ ಎಫ್​ಐಆರ್ ದಾಖಲು
ರಾಷ್ಟ್ರೀಯ ಯುವ ಕಾಂಗ್ರೆಸ್​ ಅಧ್ಯಕ್ಷ ಶ್ರೀನಿವಾಸ್
ಆಯೇಷಾ ಬಾನು
ಆಯೇಷಾ ಬಾನು|

Updated on:Apr 24, 2023 | 9:13 AM

Share

ಮುಖ್ಯಾಂಶಗಳು

  • ರಾಷ್ಟ್ರೀಯ ಯುವ ಕಾಂಗ್ರೆಸ್​ ಅಧ್ಯಕ್ಷ ಶ್ರೀನಿವಾಸ್ ವಿರುದ್ಧ ಎಫ್ಐಆರ್
  • ಚುನಾವಣಾ ಅಧಿಕಾರಿಗಳ ಕೆಲಸಕ್ಕೆ ಅಡ್ಡಿ ಹಿನ್ನೆಲೆ ಕೇಸ್
  • ಕಿರುಕುಳ ಆರೋಪ ಎದುರಿಸುತ್ತಿರುವ ಶ್ರೀನಿವಾಸ್

ಬೆಂಗಳೂರು: ಚುನಾವಣಾ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಹಿನ್ನೆಲೆ ರಾಷ್ಟ್ರೀಯ ಯುವ ಕಾಂಗ್ರೆಸ್​ ಅಧ್ಯಕ್ಷ ಶ್ರೀನಿವಾಸ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಏಪ್ರಿಲ್ 23 ರಂದು ರ್ಯಾಡಿಸನ್ ಬ್ಲೂ ಹೋಟೆಲ್​ನಲ್ಲಿ ಶ್ರೀನಿವಾಸ್ ಅವರು ಸಭೆ ನಡೆದುತ್ತಿದ್ದ ವೇಳೆ ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು ಚುನಾವಣಾ ಅಧಿಕಾರಿಗಳ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ. ದಾಳಿ ವೇಳೆ ಸಹಕರಿಸದೇ ಎಸ್​ಟಿಎಫ್ ಅಧಿಕಾರಿಗಳ ವಿರುದ್ಧ ವಾಗ್ವಾದ ಮಾಡಿದ್ದಾರೆ. ಹೀಗಾಗಿ ಅಧಿಕಾರಿಗಳು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಿರುಕುಳ ಆರೋಪ ಎದುರಿಸುತ್ತಿರುವ ಶ್ರೀನಿವಾಸ್

ನಿನ್ನೆ ಅಷ್ಟೇ ಕಾಂಗ್ರೆಸ್​ ಪಕ್ಷದ ಯುವ ಘಟಕದ ರಾಷ್ಟ್ರಾಧ್ಯಕ್ಷ ಬಿ.ವಿ. ಶ್ರೀನಿವಾಸ್ ಅವರ ನಿವಾಸವನ್ನು ಹುಡುಕಿಕೊಂಡು ಅಸ್ಸಾಂ ಪೊಲೀಸರು ಬೆಂಗಳೂರಿಗೆ ಆಗಮಿಸಿದ್ದರು. ಶ್ರೀನಿವಾಸ್ ಪೊಲೀಸರ ಕೈಗೆ ಸಿಗದ ಕಾರಣ ಮನೆ ಬಾಗಿಲಿಗೆ ನೋಟಿಸ್​ ಅಂಟಿಸಿ ತೆರಳಿದ್ರು. ಇದರ ನಡುವೆ ಈಗ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಶ್ರೀನಿವಾಸ್ ಕಿರುಕುಳ ನೀಡಿದ್ದಾರೆ ಎಂದು ಅಸ್ಸಾಂ ಯುವ ಕಾಂಗ್ರೆಸ್ ಅಧ್ಯಕ್ಷೆ ಅಂಕಿತಾ ಆರೋಪ ಮಾಡಿದ್ದು ಈ ಕುರಿತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ನಾನು ಸೋತರೆ ಊರು ಬಿಡಿಸ್ತಾರೆ, ನನ್ನ ಕೈ ಬಿಡಬೇಡಿ; ಭಾವನಾತ್ಮಕವಾಗಿ ಮತಭೇಟೆಗಿಳಿದ ಪ್ರೀತಂಗೌಡ

ಈ ಕುರಿತು ಸರಣಿ ಟ್ವೀಟ್ ಮಾಡಿದ್ದ ಅವರು, ಶ್ರೀನಿವಾಸ್ ಬಿವಿ ಅವರು ಸತತವಾಗಿ ನನಗೆ ಕಿರುಕುಳ ನೀಡಿದ್ದಾರೆ. ಲಿಂಗ ತಾರತಮ್ಯ ಮಾಡಿದ್ದಾರೆ, ಹೆಣ್ಣು ಎಂಬ ಕಾರಣಕ್ಕೆ ನನಗೆ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಅಂಕಿತಾ ದೂರಿದ್ದಾರೆ. ನೀವು ಓಡ್ಕಾ ಕುಡಿಯುತ್ತೀರಾ ಎಂದು ವ್ಯಂಗ್ಯವಾಗಿ ಪ್ರಶ್ನೆಗಳನ್ನು ಕೇಳಿದ್ದಾಗಿ ಹೇಳಿಕೊಂಡಿದ್ದರು.

ಗುವಾಹಟಿಯ ಐಪಿಎಸ್ ಅಧಿಕಾರಿ ಪ್ರತೀಕ್ ಖುದ್ದು ಆಗಮಿಸಿದ್ದಾರೆ. ಅಸ್ಸಾಂನ ಪೊಲೀಸರು ಬಸವೇಶ್ವರನಗರದಲ್ಲಿರುವ ನಿವಾಸಕ್ಕೆ ಬೆಂಗಳೂರು ನಗರ ಪೊಲೀಸರ ಸಹಾಯದಿಂದ ಬಂಧಿಸಲು ಆಗಮಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:07 am, Mon, 24 April 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ