AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar: ಚುನಾವಣೆ ಹೊಸ್ತಿಲಲ್ಲೇ ಡಿಕೆ ಶಿವಕುಮಾರ್​ಗೆ ಎದುರಾಯ್ತು ಸಂಕಷ್ಟ!

ಕರ್ನಾಟಕ ವಿಧಾನಸಭೆ ಚುನಾವಣೆ ರಂಗೇರಿದೆ. ಇದರ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಸಂಕಷ್ಟ ಎದುರಾಗಿದೆ.

DK Shivakumar: ಚುನಾವಣೆ ಹೊಸ್ತಿಲಲ್ಲೇ ಡಿಕೆ ಶಿವಕುಮಾರ್​ಗೆ ಎದುರಾಯ್ತು ಸಂಕಷ್ಟ!
ಡಿಕೆ ಶಿವಕುಮಾರ್
ರಮೇಶ್ ಬಿ. ಜವಳಗೇರಾ
|

Updated on:Apr 04, 2023 | 9:53 AM

Share

ಮುಖ್ಯಾಂಶಗಳು

  • ಕೆಪಿಸಿಸಿ ಅದ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ದ ದಾಖಲಾಯ್ತು ಎಫ್.ಐ.ಆರ್
  • ಜನರತ್ತ 500 ಮುಖ ಬೆಲೆಯ ನೋಟುಗಳನ್ನ ಎಸೆದಿದ್ದ ಡಿ.ಕೆ ಶಿವಕುಮಾರ್
  • ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ 1860 u/s 17 E ಆಕ್ಟ್ ಪ್ರಕಾರ ಎಫ್ ಐ ಆರ್

ಮಂಡ್ಯ: ಪ್ರಜಾಧ್ವನಿ ಯಾತ್ರೆ (congress praja dhwani yatra) ವೇಳೆ ಕಲಾವಿದರ ಮೇಲೆ 500 ರೂಪಾಯಿ ನೋಟಿನ ಕಂತೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK SHivakumar)​ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಡಿಕೆ ಶಿವಕುಮಾರ್​​ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ (Mandya Rural Police Station) ಠಾಣೆಯಲ್ಲಿ ಐಪಿಸಿ ಸೆಕ್ಷನ್ 1860 u/s 17 E ಆರ್​ಪಿ ಆಕ್ಟ್ ಪ್ರಕಾರ ಎಫ್​ಐಆರ್​ ದಾಖಲಾಗಿದೆ. ಟಿವಿ9 ವರದಿ ಬಳಿಕ ಚುನಾವಣಾ ಸೆಕ್ಟರ್ ಅಧಿಕಾರಿಯಿಂದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಲಾಗಿತ್ತು. ಪ್ರಕರಣದ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದ್ದು, ಅದರಂತೆ ಮಂಡ್ಯ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Prajadhvani Yatre: ದೇವರು ಹೊತ್ತು ಕುಣಿಯುತ್ತಿದ್ದ ಜನರ ಮೇಲೆ ಹಣ ಎಸೆದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಮಾರ್ಚ್ 28ರಂದು ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ಬೇವಿನಹಳ್ಳಿ ಗ್ರಾಮದಲ್ಲಿ ಪ್ರಜಾಧ್ವನಿ ಯಾತ್ರೆ ಕೈಗೊಂಡಿದ್ದರು. ಆ ವೇಳೆ ಬಸ್​ ಮೇಲಿಂದ ಕಲಾವಿದರತ್ತ 500 ರೂ. ನೋಟುಗಳನ್ನು ಎಸೆದಿದ್ದರು. ಬಳಿಕ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಸೆಕ್ಟರ್ ಆಫೀಸರ್​ ದೂರು ನೀಡಿದ್ದರು. ಇದೀಗ ನ್ಯಾಯಾಲಯದ ಆದೇಶದಂತೆ ನಿನ್ನೆ(ಏಪ್ರಿಲ್ 03) ಡಿಕೆ ಶಿವಕುಮಾರ್​ ವಿರುದ್ದ ಎಫ್‌ಐ‌ಆರ್ ದಾಖಲಾಗಿದ್ದು, ಈ ಬಾರಿಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅವರಿಗೆ ಮೊದಲ ಸಂಕಷ್ಟ ಎದುರಾಗಿದೆ.

ಕರ್ನಾಟಕ ಅಸೆಂಬ್ಲಿ ಚುನಾವಣೆ ಕುರಿತಾದ ತಾಜಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:51 am, Tue, 4 April 23

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ