AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar: ಚುನಾವಣೆ ಹೊಸ್ತಿಲಲ್ಲೇ ಡಿಕೆ ಶಿವಕುಮಾರ್​ಗೆ ಎದುರಾಯ್ತು ಸಂಕಷ್ಟ!

ಕರ್ನಾಟಕ ವಿಧಾನಸಭೆ ಚುನಾವಣೆ ರಂಗೇರಿದೆ. ಇದರ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಸಂಕಷ್ಟ ಎದುರಾಗಿದೆ.

DK Shivakumar: ಚುನಾವಣೆ ಹೊಸ್ತಿಲಲ್ಲೇ ಡಿಕೆ ಶಿವಕುಮಾರ್​ಗೆ ಎದುರಾಯ್ತು ಸಂಕಷ್ಟ!
ಡಿಕೆ ಶಿವಕುಮಾರ್
ರಮೇಶ್ ಬಿ. ಜವಳಗೇರಾ
|

Updated on:Apr 04, 2023 | 9:53 AM

Share

ಮುಖ್ಯಾಂಶಗಳು

  • ಕೆಪಿಸಿಸಿ ಅದ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ದ ದಾಖಲಾಯ್ತು ಎಫ್.ಐ.ಆರ್
  • ಜನರತ್ತ 500 ಮುಖ ಬೆಲೆಯ ನೋಟುಗಳನ್ನ ಎಸೆದಿದ್ದ ಡಿ.ಕೆ ಶಿವಕುಮಾರ್
  • ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ 1860 u/s 17 E ಆಕ್ಟ್ ಪ್ರಕಾರ ಎಫ್ ಐ ಆರ್

ಮಂಡ್ಯ: ಪ್ರಜಾಧ್ವನಿ ಯಾತ್ರೆ (congress praja dhwani yatra) ವೇಳೆ ಕಲಾವಿದರ ಮೇಲೆ 500 ರೂಪಾಯಿ ನೋಟಿನ ಕಂತೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK SHivakumar)​ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಡಿಕೆ ಶಿವಕುಮಾರ್​​ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ (Mandya Rural Police Station) ಠಾಣೆಯಲ್ಲಿ ಐಪಿಸಿ ಸೆಕ್ಷನ್ 1860 u/s 17 E ಆರ್​ಪಿ ಆಕ್ಟ್ ಪ್ರಕಾರ ಎಫ್​ಐಆರ್​ ದಾಖಲಾಗಿದೆ. ಟಿವಿ9 ವರದಿ ಬಳಿಕ ಚುನಾವಣಾ ಸೆಕ್ಟರ್ ಅಧಿಕಾರಿಯಿಂದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಲಾಗಿತ್ತು. ಪ್ರಕರಣದ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದ್ದು, ಅದರಂತೆ ಮಂಡ್ಯ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Prajadhvani Yatre: ದೇವರು ಹೊತ್ತು ಕುಣಿಯುತ್ತಿದ್ದ ಜನರ ಮೇಲೆ ಹಣ ಎಸೆದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಮಾರ್ಚ್ 28ರಂದು ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ಬೇವಿನಹಳ್ಳಿ ಗ್ರಾಮದಲ್ಲಿ ಪ್ರಜಾಧ್ವನಿ ಯಾತ್ರೆ ಕೈಗೊಂಡಿದ್ದರು. ಆ ವೇಳೆ ಬಸ್​ ಮೇಲಿಂದ ಕಲಾವಿದರತ್ತ 500 ರೂ. ನೋಟುಗಳನ್ನು ಎಸೆದಿದ್ದರು. ಬಳಿಕ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಸೆಕ್ಟರ್ ಆಫೀಸರ್​ ದೂರು ನೀಡಿದ್ದರು. ಇದೀಗ ನ್ಯಾಯಾಲಯದ ಆದೇಶದಂತೆ ನಿನ್ನೆ(ಏಪ್ರಿಲ್ 03) ಡಿಕೆ ಶಿವಕುಮಾರ್​ ವಿರುದ್ದ ಎಫ್‌ಐ‌ಆರ್ ದಾಖಲಾಗಿದ್ದು, ಈ ಬಾರಿಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅವರಿಗೆ ಮೊದಲ ಸಂಕಷ್ಟ ಎದುರಾಗಿದೆ.

ಕರ್ನಾಟಕ ಅಸೆಂಬ್ಲಿ ಚುನಾವಣೆ ಕುರಿತಾದ ತಾಜಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:51 am, Tue, 4 April 23

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’