AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ದಾಳಿ ವೇಳೆ ನಿವಾಸದಲ್ಲಿ ವೋಟರ್ ಐಡಿ ಪತ್ತೆ; ಕೆಜಿಎಫ್​ ಬಾಬು ವಿರುದ್ಧ ಎಫ್​ಐಆರ್ ದಾಖಲು

ಐಟಿ ದಾಳಿ ವೇಳೆ ಕೆಜಿಎಫ್ ಬಾಬು ನಿವಾಸದಲ್ಲಿ ಸಾವಿರಕ್ಕೂ ಹೆಚ್ಚು ವೋಟರ್ ಐಡಿಗಳು ಪತ್ತೆಯಾಗಿವೆ. ಹೀಗಾಗಿ ಕೆಜಿಎಫ್ ಬಾಬು ವಿರುದ್ಧ ಹೈಗ್ರೌಂಡ್ಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.

ಐಟಿ ದಾಳಿ ವೇಳೆ ನಿವಾಸದಲ್ಲಿ ವೋಟರ್ ಐಡಿ ಪತ್ತೆ; ಕೆಜಿಎಫ್​ ಬಾಬು ವಿರುದ್ಧ ಎಫ್​ಐಆರ್ ದಾಖಲು
ಕೆಪಿಎಫ್​ ಬಾಬು
Rakesh Nayak Manchi
|

Updated on:Apr 20, 2023 | 10:14 PM

Share

ಬೆಂಗಳೂರು: ಐಟಿ ದಾಳಿ (IT Raid) ವೇಳೆ ನಿವಾಸದಲ್ಲಿ ಸಾವಿರಕ್ಕೂ ಹೆಚ್ಚು ವೋಟರ್ ಐಡಿಗಳು ಪತ್ತೆಯಾದ ಹಿನ್ನೆಲೆ ಕೆಜಿಎಫ್ ಬಾಬು (KGF Babu) ವಿರುದ್ಧ ಹೈಗ್ರೌಂಡ್ಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ದಿನಗಣನೆ ಆರಂಭವಾಗಿರುವ ಮಧ್ಯೆಯೇ ಐಟಿ ಅಧಿಕಾರಿಗಳು ಕೂಡ ಅಲರ್ಟ್ ಆಗಿದ್ದಾರೆ. ಕೆಲ ದಿನಗಳ ಹಿಂದೆ ಮಂಗಳೂರು, ಮೈಸೂರು ಸೇರಿದಂತೆ ಕೆಲ ಕಡೆ ಕಾಂಗ್ರೆಸ್ ಮುಖಂಡರುಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿತ್ತು. ಇದರ ಬೆನ್ನಲ್ಲೇ ಬುಧವಾರದಂದು ಕೆಜಿಎಫ್ ಬಾಬು ನಿವಾಸದ ಮೇಲೆ ದಾಳಿ ನಡೆದಿತ್ತು. ಈ ವೇಳೆ 1925 ವೋಟರ್ ಐಡಿಗಳು ಪತ್ತೆಯಾಗಿದ್ದವು.

ಕೆಜಿಎಫ್​ ಬಾಬು ಮನೆ ಮೇಲಿನ ದಾಳಿ ವೇಳೆಯಲ್ಲಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ 1925 ವೋಟರ್ ಐಡಿಗಳು ಪತ್ತೆಯಾಗಿದ್ದವು. 1925 ಚೆಕ್​ಗಳ ಜೊತೆಯಲ್ಲಿ ವೋಟರ್ ಐಡಿಗಳನ್ನ ಶೇಖರಿಸಿಟ್ಟಿದ್ದರು. ವೋಟರ್​ ಐಡಿಗಳು ಅಟ್ಯಾಚ್ ಆಗಿರುವ ಹೆಚ್​ಡಿಎಫ್​ಸಿ ಬ್ಯಾಂಕ್ ಅಕೌಂಟ್​ನ 50200060873761 ನಂಬರಿನ ಚೆಕ್​ಗಳು ಪತ್ತೆಯಾಗಿವೆ. ಪ್ರತೀ ಚೆಕ್​ನಲ್ಲಿ 5000 ರೂ. ನಮೂದು ಮಾಡಲಾಗಿದೆ.

ಕೆಜಿಎಫ್ ಬಾಬು ಮನೆಯ ಮೊದಲ ಮಹಡಿಯ ಕೊಠಡಿಯೊಂದರಲ್ಲಿ ಈ ಚೆಕ್ ಹಾಗೂ ವೋಟರ್ ಐಡಿಗಳು ಪತ್ತೆಯಾಗಿವೆ. ಇನ್ನು, ಮನೆಯ ನೆಲಮಹಡಿಯಲ್ಲಿ 26 ಬ್ಯಾಗ್​ಗಳಲ್ಲಿದ್ದ ಸೀರೆ, ಚಿಕ್ಕಪೇಟೆಗೆ ಸಂಬಂಧಿಸಿದ ಮುದ್ರಣ ಪ್ರತಿಗಳು, ವ್ಯಾನ್ ಹುಸೇನ್ ಕಂಪನಿಯ 481 ಸೂಟ್​ಗಳು ಪತ್ತೆಯಾಗಿದ್ದವು. ದಾಳಿ ವೇಳೆ ಈ ಎಲ್ಲಾ ವಸ್ತುಗಳು ಪತ್ತೆಯಾಗಿರುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿರುವುದು ಸ್ಪಷ್ಟವಾಗಿದೆ. ಸದ್ಯ ಶಿವಾಜಿನಗರ ವಲಯದ ಚುನಾವಣಾ ಉಸ್ತುವಾರಿ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕೆಜಿಎಫ್ ಬಾಬು ವಿರುದ್ಧ ಜನ ಪ್ರತಿನಿಧಿ 1951 1989 ಕಾಯ್ದೆ ಅಡಿ ಕೇಸ್​ ದಾಖಲಾಗಿದೆ.

ಇದನ್ನೂ ಓದಿ: IT ED Raids In Karnataka: ಮಲ್ಪೆ ಬೀಚ್ ನಿರ್ವಹಣಾ ಗುತ್ತಿಗೆದಾರನ ಮನೆ ಮೇಲೆ ಇಡಿ ದಾಳಿ

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಮಧ್ಯೆಯೇ ಐಟಿ ಅಧಿಕಾರಿಗಳು ಕೂಡ ಅಲರ್ಟ್ ಆಗಿದ್ದಾರೆ. ಕೆಲ ದಿನಗಳ ಹಿಂದೆ ಮಂಗಳೂರು, ಮೈಸೂರು ಸೇರಿದಂತೆ ಕೆಲ ಕಡೆ ಕಾಂಗ್ರೆಸ್ ಮುಖಂಡರುಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿತ್ತು. ಈಗ ಐಟಿ ಅಧಿಕಾರಿಗಳು ಬೆಂಗಳೂರಿನಲ್ಲಿ ಕೆಜಿಎಫ್​ ಬಾಬು ಸೇರಿದಂತೆ ಹಲವು ಕಾಂಗ್ರೆಸ್​ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದರು.

ಚಿಕ್ಕಪೇಟೆ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ ಬಯಸಿ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಕೆಜಿಎಫ್ ಬಾಬು, ಕ್ಷೇತ್ರದಲ್ಲಿ ಅನೇಕ ಸಾಮಾಜ ಸೇವೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಆದರೆ ಕಾಂಗ್ರೆಸ್​ ಪಕ್ಷವು ಬಾಬುಗೆ ಟಿಕೆಟ್ ನೀಡಿಲ್ಲ. ಹಾಗಾಗಿ ​ಅವರು ಪತ್ನಿಯನ್ನು ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:13 pm, Thu, 20 April 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ