AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ದಾಳಿ ವೇಳೆ ನಿವಾಸದಲ್ಲಿ ವೋಟರ್ ಐಡಿ ಪತ್ತೆ; ಕೆಜಿಎಫ್​ ಬಾಬು ವಿರುದ್ಧ ಎಫ್​ಐಆರ್ ದಾಖಲು

ಐಟಿ ದಾಳಿ ವೇಳೆ ಕೆಜಿಎಫ್ ಬಾಬು ನಿವಾಸದಲ್ಲಿ ಸಾವಿರಕ್ಕೂ ಹೆಚ್ಚು ವೋಟರ್ ಐಡಿಗಳು ಪತ್ತೆಯಾಗಿವೆ. ಹೀಗಾಗಿ ಕೆಜಿಎಫ್ ಬಾಬು ವಿರುದ್ಧ ಹೈಗ್ರೌಂಡ್ಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.

ಐಟಿ ದಾಳಿ ವೇಳೆ ನಿವಾಸದಲ್ಲಿ ವೋಟರ್ ಐಡಿ ಪತ್ತೆ; ಕೆಜಿಎಫ್​ ಬಾಬು ವಿರುದ್ಧ ಎಫ್​ಐಆರ್ ದಾಖಲು
ಕೆಪಿಎಫ್​ ಬಾಬು
Rakesh Nayak Manchi
|

Updated on:Apr 20, 2023 | 10:14 PM

Share

ಬೆಂಗಳೂರು: ಐಟಿ ದಾಳಿ (IT Raid) ವೇಳೆ ನಿವಾಸದಲ್ಲಿ ಸಾವಿರಕ್ಕೂ ಹೆಚ್ಚು ವೋಟರ್ ಐಡಿಗಳು ಪತ್ತೆಯಾದ ಹಿನ್ನೆಲೆ ಕೆಜಿಎಫ್ ಬಾಬು (KGF Babu) ವಿರುದ್ಧ ಹೈಗ್ರೌಂಡ್ಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ದಿನಗಣನೆ ಆರಂಭವಾಗಿರುವ ಮಧ್ಯೆಯೇ ಐಟಿ ಅಧಿಕಾರಿಗಳು ಕೂಡ ಅಲರ್ಟ್ ಆಗಿದ್ದಾರೆ. ಕೆಲ ದಿನಗಳ ಹಿಂದೆ ಮಂಗಳೂರು, ಮೈಸೂರು ಸೇರಿದಂತೆ ಕೆಲ ಕಡೆ ಕಾಂಗ್ರೆಸ್ ಮುಖಂಡರುಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿತ್ತು. ಇದರ ಬೆನ್ನಲ್ಲೇ ಬುಧವಾರದಂದು ಕೆಜಿಎಫ್ ಬಾಬು ನಿವಾಸದ ಮೇಲೆ ದಾಳಿ ನಡೆದಿತ್ತು. ಈ ವೇಳೆ 1925 ವೋಟರ್ ಐಡಿಗಳು ಪತ್ತೆಯಾಗಿದ್ದವು.

ಕೆಜಿಎಫ್​ ಬಾಬು ಮನೆ ಮೇಲಿನ ದಾಳಿ ವೇಳೆಯಲ್ಲಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ 1925 ವೋಟರ್ ಐಡಿಗಳು ಪತ್ತೆಯಾಗಿದ್ದವು. 1925 ಚೆಕ್​ಗಳ ಜೊತೆಯಲ್ಲಿ ವೋಟರ್ ಐಡಿಗಳನ್ನ ಶೇಖರಿಸಿಟ್ಟಿದ್ದರು. ವೋಟರ್​ ಐಡಿಗಳು ಅಟ್ಯಾಚ್ ಆಗಿರುವ ಹೆಚ್​ಡಿಎಫ್​ಸಿ ಬ್ಯಾಂಕ್ ಅಕೌಂಟ್​ನ 50200060873761 ನಂಬರಿನ ಚೆಕ್​ಗಳು ಪತ್ತೆಯಾಗಿವೆ. ಪ್ರತೀ ಚೆಕ್​ನಲ್ಲಿ 5000 ರೂ. ನಮೂದು ಮಾಡಲಾಗಿದೆ.

ಕೆಜಿಎಫ್ ಬಾಬು ಮನೆಯ ಮೊದಲ ಮಹಡಿಯ ಕೊಠಡಿಯೊಂದರಲ್ಲಿ ಈ ಚೆಕ್ ಹಾಗೂ ವೋಟರ್ ಐಡಿಗಳು ಪತ್ತೆಯಾಗಿವೆ. ಇನ್ನು, ಮನೆಯ ನೆಲಮಹಡಿಯಲ್ಲಿ 26 ಬ್ಯಾಗ್​ಗಳಲ್ಲಿದ್ದ ಸೀರೆ, ಚಿಕ್ಕಪೇಟೆಗೆ ಸಂಬಂಧಿಸಿದ ಮುದ್ರಣ ಪ್ರತಿಗಳು, ವ್ಯಾನ್ ಹುಸೇನ್ ಕಂಪನಿಯ 481 ಸೂಟ್​ಗಳು ಪತ್ತೆಯಾಗಿದ್ದವು. ದಾಳಿ ವೇಳೆ ಈ ಎಲ್ಲಾ ವಸ್ತುಗಳು ಪತ್ತೆಯಾಗಿರುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿರುವುದು ಸ್ಪಷ್ಟವಾಗಿದೆ. ಸದ್ಯ ಶಿವಾಜಿನಗರ ವಲಯದ ಚುನಾವಣಾ ಉಸ್ತುವಾರಿ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕೆಜಿಎಫ್ ಬಾಬು ವಿರುದ್ಧ ಜನ ಪ್ರತಿನಿಧಿ 1951 1989 ಕಾಯ್ದೆ ಅಡಿ ಕೇಸ್​ ದಾಖಲಾಗಿದೆ.

ಇದನ್ನೂ ಓದಿ: IT ED Raids In Karnataka: ಮಲ್ಪೆ ಬೀಚ್ ನಿರ್ವಹಣಾ ಗುತ್ತಿಗೆದಾರನ ಮನೆ ಮೇಲೆ ಇಡಿ ದಾಳಿ

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಮಧ್ಯೆಯೇ ಐಟಿ ಅಧಿಕಾರಿಗಳು ಕೂಡ ಅಲರ್ಟ್ ಆಗಿದ್ದಾರೆ. ಕೆಲ ದಿನಗಳ ಹಿಂದೆ ಮಂಗಳೂರು, ಮೈಸೂರು ಸೇರಿದಂತೆ ಕೆಲ ಕಡೆ ಕಾಂಗ್ರೆಸ್ ಮುಖಂಡರುಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿತ್ತು. ಈಗ ಐಟಿ ಅಧಿಕಾರಿಗಳು ಬೆಂಗಳೂರಿನಲ್ಲಿ ಕೆಜಿಎಫ್​ ಬಾಬು ಸೇರಿದಂತೆ ಹಲವು ಕಾಂಗ್ರೆಸ್​ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದರು.

ಚಿಕ್ಕಪೇಟೆ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ ಬಯಸಿ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಕೆಜಿಎಫ್ ಬಾಬು, ಕ್ಷೇತ್ರದಲ್ಲಿ ಅನೇಕ ಸಾಮಾಜ ಸೇವೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಆದರೆ ಕಾಂಗ್ರೆಸ್​ ಪಕ್ಷವು ಬಾಬುಗೆ ಟಿಕೆಟ್ ನೀಡಿಲ್ಲ. ಹಾಗಾಗಿ ​ಅವರು ಪತ್ನಿಯನ್ನು ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:13 pm, Thu, 20 April 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ