AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನು ಕಡಿಮೆ ಮಾಡಿದ್ದೆವು ಎಂಬ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಜಗದೀಶ್ ಶೆಟ್ಟರ್​ಗೆ ಬಿಜೆಪಿ ಪಕ್ಷ ಎಲ್ಲವನ್ನು ನೀಡಿತ್ತು. ಆದರೂ ಅವರು ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ ಜಗದೀಶ್ ಶೆಟ್ಟರ್​ ತಿರುಗೇಟು ನೀಡಿದ್ದಾರೆ.

ಏನು ಕಡಿಮೆ ಮಾಡಿದ್ದೆವು ಎಂಬ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್, ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)
ಗಂಗಾಧರ​ ಬ. ಸಾಬೋಜಿ
|

Updated on:Apr 16, 2023 | 4:49 PM

Share

ಹುಬ್ಬಳ್ಳಿ: ಜಗದೀಶ್ ಶೆಟ್ಟರ್(Jagadish Shettar)​ಗೆ ಬಿಜೆಪಿ ಪಕ್ಷ ಎಲ್ಲವನ್ನು ನೀಡಿತ್ತು. ಆದರೂ ಅವರು ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ ಜಗದೀಶ್ ಶೆಟ್ಟರ್​ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2012ರಲ್ಲಿ ಬಿಜೆಪಿ ಒಡೆದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕೆಜೆಪಿ ಕಟ್ಟಿದ್ದರು. ನನ್ನನ್ನು ಪ್ರಶ್ನಿಸಿದ್ದಕ್ಕೆ ಕೇಳುತ್ತಿದ್ದೇನೆ. ಹುಬ್ಬಳ್ಳಿ-ಧಾರವಾಡದಲ್ಲಿ ನಾನೇ ಬೆಳೆಸಿದ ಹುಡುಗರು ಇದ್ದಾರೆ. ಅವರನ್ನು ಎಷ್ಟು ದಿನ ಅಂತಾ ಹಿಡಿದಿಟ್ಟುಕೊಳ್ಳಲು ಆಗುತ್ತದೆ. ದೈಹಿಕವಾಗಿ ಬಿಜೆಪಿಯಲ್ಲಿದ್ದರೂ ಮಾನಸಿಕವಾಗಿ ನನ್ನ ಜತೆಗಿದ್ದಾರೆ. ಇದುವರೆಗೆ ಬೇರೆ ಪಕ್ಷಗಳ ನಾಯಕರು ನನ್ನನ್ನು ಸಂಪರ್ಕಿಸಿಲ್ಲ. ನಾನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು. ಇಂದು ಸಂಜೆ ಬೆಂಗಳೂರಿಗೆ ತೆರಳಿದ ನಂತರ ನನ್ನ ಮುಂದಿನ ನಡೆ ಬಗ್ಗೆ ತಿಳಿಸುವೆ ಎಂದು ಹೇಳಿದರು.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕ್ಷೇತ್ರದ ಟಿಕೆಟ್ ಮಾತ್ರ ಕೇಳಿದ್ದೆ. ಆದರೆ ರಾಜ್ಯಸಭೆಗೆ ಕಳಿಸುವುದಾಗಿ ಬಿಜೆಪಿ ನಾಯಕರು ಹೇಳಿದ್ದಾರೆ. ಯಾಕೆ ಮೂಲೆಗೆ ಕೂರಿಸಲು ಯತ್ನಿಸುತ್ತಿದ್ದೀರಿ ಎಂದು ಪ್ರಶ್ನಿಸಿದೆ. ನಾನು ಕೇಳುತ್ತಿರುವುದು ಒಂದು ಟಿಕೆಟ್​ ಎಂದರೂ ಒಪ್ಪಲೇ ಇಲ್ಲ. ಅನಿವಾರ್ಯವಾಗಿ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದರು.

ಇದನ್ನೂ ಓದಿ: ಪಕ್ಷ ಬಿಟ್ಟು ಹೋದವರ ವಿರುದ್ಧ ಯಡಿಯೂರಪ್ಪ ಗುಟುರು: ಮುಂದೆ ಇವರ ಬಂಡವಾಳ ಬಯಲು ಮಾಡ್ತೇವೆ, ಸವದಿ, ಶೆಟ್ಟರ್ ವಿರುದ್ಧ ವಾಗ್ದಾಳಿ

ನನಗೆ ಅಪಮಾನ ಆಗಿದೆ

ಎರಡು ಬಾರಿ ನನಗೆ ಅವಕಾಶ ಸಿಕ್ಕಾಗಲೂ ಪ್ರಮಾಣಿಕ ಕೆಲಸ ಮಾಡಿದ್ದೇನೆ. ಯಾಕೆ ನನಗೆ ಅವಕಾಶ ಕೊಟ್ರು, ಅನ್ನೋದನ್ನ ನಾನು ಡಿಟೇಲ್ ಮಾತಾಡುತ್ತೆನೆ. ಪಕ್ಷ ನನಗೆ ಎಲ್ಲ ಅವಕಾಶ ಕೊಟ್ಟಿದೆ ಅದಕ್ಕೆ ಅಭಿನಂದನೆ. ಇದಕ್ಕೆ ಪ್ರತಿಯಾಗಿ ನಾನು ಪಕ್ಷ ಕಟ್ಟಿದ್ದೇನೆ. ಯಡಿಯೂರಪ್ಪ ನಮ್ಮ ನಾಯಕರು. ಪಕ್ಷದ ಸ್ಥಾನ ಮಾನ ತೆಗೆದುಕೊಂಡ ನೀವು ಪಕ್ಷ ಒಡೆದು‌ ಕೆಜಿಪಿ ಕಟ್ಟಿದ್ರಿ ಯಾಕೆ. ಇವತ್ತು ನನ್ನ ಬಗ್ಗೆ ಮಾತಾಡ್ತಾರೆ ಎಂದು ಕಿಡಿಕಾರಿದರು. ನನಗೆ ಅಪಮಾನ ಆಗಿದೆ ನಾನು ಅದರ ಬಗ್ಗೆ ಮಾತಾಡುತ್ತೇನೆ. ನನಗೆ ಯಾವುದೇ ಭರವಸೆ ಇಲ್ಲ. ಅದಕ್ಕೆ ಹಂತ ಹಂತವಾಗಿ ನನ್ನ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡ ಕೇಂದ್ರದ ಬಿಜೆಪಿ ಅಭ್ಯರ್ಥಿ ಗೆಲ್ಲಿಸಬೇಕು: ಬಿಜೆಪಿ ಮುಖಂಡರಿಗೆ ಪ್ರಲ್ಹಾದ್ ಜೋಶಿ ಮನವಿ

ಜಗದೀಶ್ ಶೆಟ್ಟರ್ ವಿರುದ್ಧ ಯಡಿಯೂರಪ್ಪ ಕಿಡಿ 

ಜಗದೀಶ್ ಶೆಟ್ಟರ್ ಬಿಜೆಪಿ ತೊರೆದ ಬೆನ್ನಲ್ಲೆ ಬಿಎಸ್ ಯಡಿಯೂರಪ್ಪ ಸುದ್ದಿಗೋಷ್ಠಿ ಮಾಡಿದ್ದು, ನನಗೆ, ಜಗದೀಶ್ ಶೆಟ್ಟರ್​ಗೆ, ಲಕ್ಷ್ಮಣ ಸವದಿಗೆ ಪಕ್ಷ ಹಲವು ಅವಕಾಶ ನೀಡಿದೆ. ಜನಸಂಘದ ಕಾಲದಿಂದಲೂ ಜಗದೀಶ್​ ಶೆಟ್ಟರ್​ ಬಿಜೆಪಿಯಲ್ಲಿದ್ದರು. ಶೆಟ್ಟರ್​ರನ್ನು ಶಾಸಕ, ಸಚಿವ, ವಿಪಕ್ಷ ನಾಯಕ, ಸಿಎಂ ಮಾಡಿದ್ದೆವು. ಜಗದೀಶ್​ ಶೆಟ್ಟರ್​ಗೆ ನಾನು, ಅನಂತಕುಮಾರ್​ ಕಾವಲಾಗಿದ್ದೆವು.

ನನ್ನ ಜತೆ ಹೆಜ್ಜೆಹಾಕುವ ಜವಾಬ್ದಾರಿ ಜಗದೀಶ್ ಶೆಟ್ಟರ್​ಗೆ ಇತ್ತು. ಪಕ್ಷದ ಸಹಕಾರ ಇಲ್ಲದಿದ್ದರೆ ವ್ಯಕ್ತಿ ಎತ್ತರಕ್ಕೆ ಬೆಳೆಯಲು ಆಗಲ್ಲ. ಮಾಜಿ ಸಿಎಂ ಜಗದೀಶ್​ ಶೆಟ್ಟರ್​ಗೆ ಏನು ಕಡಿಮೆ ಮಾಡಿದ್ದೆವು. ಶೆಟ್ಟರ್ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ, ಇದಕ್ಕೆ ಕ್ಷಮೆಯೇ ಇಲ್ಲ ಎಂದು  ಯಡಿಯೂರಪ್ಪ ಅಸಮಾಧಾನ ಹೊರ ಹಾಕಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:49 pm, Sun, 16 April 23

Follow Us
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ