AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಸೋಲಿಸಲು ಕಾಂಗ್ರೆಸ್​​ಗೆ ಜೆಡಿಎಸ್​ ಬೆಂಬಲ ನೀಡಿತ್ತು: ಸಿಟಿ ರವಿ

ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಎಲ್ಲಾ ಪ್ರಯತ್ನವನ್ನು ಮಾಡುತ್ತೇವೆ. ನನ್ನನ್ನು ಸೋಲಿಸಲು ಕಾಂಗ್ರೆಸ್​​ಗೆ ಜೆಡಿಎಸ್​ ಬೆಂಬಲ ನೀಡಿತ್ತು. ನೇರವಾಗಿ ನನ್ನ ಸೋಲಿಸಲು ಜೆಡಿಎಸ್ ಟಾರ್ಗೆಟ್ ಮಾಡಿ ಕಾಂಗ್ರೆಸ್ ಗೆ ಬೆಂಬಲಿಸಿತ್ತು ಎಂದು ಮಾಜಿ ಶಾಸಕ ಸಿಟಿ ರವಿ ಹೇಳಿದ್ದಾರೆ.

ನನ್ನನ್ನು ಸೋಲಿಸಲು ಕಾಂಗ್ರೆಸ್​​ಗೆ ಜೆಡಿಎಸ್​ ಬೆಂಬಲ ನೀಡಿತ್ತು: ಸಿಟಿ ರವಿ
ಸಿಟಿ ರವಿ
ವಿವೇಕ ಬಿರಾದಾರ
|

Updated on: May 14, 2023 | 10:58 AM

Share

ಚಿಕ್ಕಮಗಳೂರು: ಮತದಾರರ ತೀರ್ಪನ್ನು ನಾನು ಗೌರವಿಸುತ್ತೇನೆ. ಕಾಂಗ್ರೆಸ್ಸಿಗರ (Congress) ರೀತಿ ಗೆದ್ದಾಗ ಪ್ರಜಾಪ್ರಭುತ್ವದ ತೀರ್ಪು ಅನ್ನೋದು, ಸೋತಾಗ ಇವಿಎಂ (EVM) ಮೇಲೆ ದೂರುವ ಕೆಲಸವನ್ನು ಮಾಡುವುದಿಲ್ಲ. ಜನರು ನೀಡಿದ ತೀರ್ಪನ್ನು ಗೌರವಿಸುತ್ತೇನೆ, ಸ್ವಾಗತ ಮಾಡುತ್ತೇನೆ ಎಂದು ಮಾಜಿ ಶಾಸಕ ಸಿ.ಟಿ.ರವಿ (CT Ravi) ಹೇಳಿದ್ದಾರೆ. ಸಿದ್ಧಾಂತದ ಕಾರಣಕ್ಕೆ ನಾವು ಬಿಜೆಪಿಗೆ (BJP) ಬಂದಿರುವುದು. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಪ್ರಯತ್ನವನ್ನು ಮಾಡುತ್ತೇವೆ. ಚುನಾವಣೆಯಲ್ಲಿ ನನ್ನ ಸೋಲಿಗೆ ಹಲವು ಕಾರಣಗಳಿವೆ. ಏನು ಇಲ್ಲದ ಕಾಲದಲ್ಲಿ ನಾವು ಪಕ್ಷವನ್ನು ಕಟ್ಟಿದ್ದೇವೆ ಹೆದರುವ ಪ್ರಶ್ನೆಯೇ ಇಲ್ಲ. ನಾವು ಈ ಸೋಲಿನ ಬಗ್ಗೆ ಅವಲೋಕನ ಮಾಡಿಕೊಳ್ಳುತ್ತೇವೆ ಎಂದರು.

ಚಿಕ್ಕಮಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಎಲ್ಲಾ ಪ್ರಯತ್ನವನ್ನು ಮಾಡುತ್ತೇವೆ. ನನ್ನನ್ನು ಸೋಲಿಸಲು ಕಾಂಗ್ರೆಸ್​​ಗೆ ಜೆಡಿಎಸ್​ ಬೆಂಬಲ ನೀಡಿತ್ತು. ನೇರವಾಗಿ ನನ್ನ ಸೋಲಿಸಲು ಜೆಡಿಎಸ್ ಟಾರ್ಗೆಟ್ ಮಾಡಿ ಕಾಂಗ್ರೆಸ್ ಗೆ ಬೆಂಬಲಿಸಿತ್ತು. ಹಲವು ನಾಯಕರ ಕೆಂಗಣ್ಣಿಗೆ ನಾನು ಗುರಿಯಾಗಿದ್ದೆ. ಪಕ್ಷ, ನನ್ನ ಸಿದ್ಧಾಂತದ ಕಾರಣಕ್ಕೆ ನಾನು ಹಲವರಿಗೆ ಗುರಿಯಾಗಿದ್ದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನನ್ನ ಕ್ಷೇತ್ರ ಚಿನ್ನದಂತೆ ಇತ್ತು, ಹೈಕಮಾಂಡ್ ಹೇಳಿತೆಂದು ಹೋದೆ: ಅಸಮಾಧಾನ ಹೊರಹಾಕಿದ ಸೋಮಣ್ಣ

ರಾಜ್ಯದ ಜನರಿಗೆ ನೀಡಿದ ಭರವಸೆಯನ್ನು ಕಾಂಗ್ರೆಸ್ ಈಡೇರಿಸಲಿ. ರಾಜ್ಯವನ್ನು ಅಭಿವೃದ್ಧಿ ಕಡೆ ಕಾಂಗ್ರೆಸ್ ತೆಗೆದುಕೊಂಡು ಹೋಗಲಿ. ಕಾಂಗ್ರೆಸಿನ ಹನಿಮೂನ್ ಪೀರಿಯಡ್ ಮುಗಿಯಲಿ ನಾವು ಎಚ್ಚರಿಸುವ ಕೆಲಸವನ್ನು ಮಾಡುತ್ತೇವೆ. ಕಾಂಗ್ರೆಸ್​​ನವರಿಗೆ ಎಚ್ಚರಿಸುತ್ತಾ ಜನರ ಜೊತೆಗಿದ್ದು ರಾಜಕಾರಣವನ್ನು ಮಾಡುತ್ತೇನೆ ಎಂದು ಹೇಳಿದರು.

ಎಲ್ಲ ಕಾರಣದಿಂದ ಅವರು ಇಂದು ಸಫಲರಾಗಿದ್ದಾರೆ. ನನ್ನ ತಪ್ಪುಗಳಿದ್ದರೆ ಸರಿಪಡಿಸಿಕೊಳ್ಳುವುದು ನನ್ನ ಜವಾಬ್ದಾರಿ. ಸಂಘಟನೆಯ ಲೋಪಗಳಿದ್ದರೇ, ಸಮಲೋಚನೆ ಮಾಡಿ ಸರಿಪಡಿಸುತ್ತೇವೆ. ಎಲ್ಲವೂ ನಮ್ಮ ಕೈಯಲ್ಲಿ ಬಂದಿದೆ ಅಂದುಕೊಂಡಿದ್ದಾರೆ. ಹಿಂದುತ್ವದ ವಿಷಯದಲ್ಲಿ ನಿನ್ನೆ ಕೆಲವು ಕಡೆ ಆಟೋಟೋಪ ಮೆರೆದಿದ್ದಾರೆ. ಹಿಂದುತ್ವದ ವಿಷಯದಲ್ಲಿ ಸುಮ್ಮನೆ ಕೂರುವ ಪ್ರಶ್ನೆಯೇ ಇಲ್ಲ ಎಂದು ಖಡಕ್​ ಸೂಚನೆ ನೀಡಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?