AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಬಿಸಿಬಿಸಿ ಚರ್ಚೆ; ಸಿಎಂ ಯಾರಾಗುತ್ತಾರೆ ಎನ್ನುವುದರ ಬಗ್ಗೆ ಪರಮೇಶ್ವರ್ ಹೇಳಿದ್ದೇನು?

ಸದಾಶಿವನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಭೇಟಿ ನೀಡಿದ ಜಿ.ಪರಮೇಶ್ವರ್ ಸುಮಾರು ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿ ಹಿಂದಿರುಗಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಬಿಸಿಬಿಸಿ ಚರ್ಚೆ; ಸಿಎಂ ಯಾರಾಗುತ್ತಾರೆ ಎನ್ನುವುದರ ಬಗ್ಗೆ ಪರಮೇಶ್ವರ್ ಹೇಳಿದ್ದೇನು?
ಡಾ ಜಿ ಪರಮೇಶ್ವರ
ಆಯೇಷಾ ಬಾನು
|

Updated on:May 12, 2023 | 12:05 PM

Share

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಮೇ 10ರಂದು ಮತದಾನ(Voting) ಪ್ರಕ್ರಿಯೆ ಮುಗಿದಿದ್ದು ಮೇ 13ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಇನ್ನು ಮತದಾನದ ದಿನದಂದು ಅನೌನ್ಸ್ ಆದ ಎಕ್ಸಿಟ್ ಪೋಲ್ ಫಲಿತಾಂಶ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಎಕ್ಸಿಟ್ ಪೋಲ್ ಫಲಿತಾಂಶದಲ್ಲಿ ಕಾಂಗ್ರೆಸ್ ಬಹುಮತ ಬಂದಿದ್ದು ಕಾಂಗ್ರೆಸ್ ಪಾಳೆಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಅವರನ್ನು ಮಾಜಿ ಡಿಸಿಎಂ ಜಿ.ಪರಮೇಶ್ವರ್(Dr G Parameshwar) ಭೇಟಿ ಮಾಡಿ ಚರ್ಚೆ ತಂತ್ರಕಾರಿಕೆ ಹೆಣೆಯಲಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ.

ಸದಾಶಿವನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಭೇಟಿ ನೀಡಿದ ಜಿ.ಪರಮೇಶ್ವರ್ ಸುಮಾರು ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿ ಹಿಂದಿರುಗಿದ್ದಾರೆ. ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಪರಮೇಶ್ವರ್, ರಾಜ್ಯದಲ್ಲಿ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ. ಈ ಚುನಾವಣೆಯಲ್ಲಿ ಕನಿಷ್ಠ 130 ಸ್ಥಾನಗಳನ್ನ ನಾವು ಗೆಲ್ಲುತ್ತೇವೆ. ಇದನ್ನು ನಾನು ಖಚಿತವಾಗಿಯೇ ಹೇಳುತ್ತಿದ್ದೇವೆ. ಜಿಲ್ಲಾವಾರು ಮಾಹಿತಿ ಪಡೆದುಕೊಂಡಿದ್ದೇವೆ. ನಮ್ಮ ಸ್ವಂತ ಬಲದ ಮೇಲೆ ಸರ್ಕಾರ ರಚಿಸುತ್ತೇವೆ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ಹೈಕಮಾಂಡ್​ ತೀರ್ಮಾನ ಮಾಡುತ್ತೆ ಎಂದರು.

ಇದನ್ನೂ ಓದಿ: ‘ಮೈತ್ರಿಗೆ ನಾವು ಸಿದ್ಧ’ ಆದ್ರೆ ಕೆಲವು ಷರತ್ತುಗಳಿಗೆ ಒಪ್ಪಬೇಕು; ನಿಲುವು ಸ್ಪಷ್ಟಪಡಿಸಿದ ಹೆಚ್​ಡಿ ಕುಮಾರಸ್ವಾಮಿ

ಇನ್ನು ಇದೇ ವೇಳೆ ಕಪ್ ನಮ್ಮದೇ ಎಂಬ ಆರ್.ಅಶೋಕ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಜಿ.ಪರಮೇಶ್ವರ್, ಕಪ್ ಎಲ್ಲವೂ ಅವರದ್ದೇ ಆದರೂ ಸರ್ಕಾರ ಮಾತ್ರ ನಮ್ಮದು ಎಂದರು. ಹಾಗೂ ಖರ್ಗೆಯವರ ಜೊತೆ ರಾಜಕೀಯ ಮಾತಾಡಿಲ್ಲ. ವೈಯಕ್ತಿಕವಾಗಿ ಮಾತುಕತೆ ಮಾಡಿದ್ದೇವೆ. ಸಿಎಂ ಆಯ್ಕೆ ಬಗ್ಗೆ ನಾನು ಮಾತಾಡುವುದಿಲ್ಲ. ಪದೇ ಪದೇ ನಾವು ಹೇಳಿಕೆ ಕೊಡುವುದರಿಂದ ಗೊಂದಲ ಸೃಷ್ಟಿ ಆಗುತ್ತದೆ. ಹೈಕಮಾಂಡ್, ಯಾರು ಸಿಎಂ ಆಗಬೇಕು ಎಂದು ತೀರ್ಮಾನ ಮಾಡ್ತಾರೆ. ಸಿಎಂ ಆಯ್ಕೆಗೆ ನಮ್ಮಲ್ಲಿ ಯಾವುದೇ ಹೊಸ ಪದ್ದತಿ ಇಲ್ಲ. ಯಾವಾಗಲೂ ಮಾಡುವ ಪ್ರಕಾರವೇ ಆಯ್ಕೆ ಮಾಡ್ತೇವೆ ಎಂದರು.

ನನಗೆ ಜವಾಬ್ದಾರಿ ಕೊಟ್ಟ ದಿನದಿಂದ ನಾನೂ ಮಲಗಿಲ್ಲ, ಮಲಗುವುದಕ್ಕೂ ಬಿಟ್ಟಿಲ್ಲ ಎಂದ ಡಿಕೆಶಿವಕುಮಾರ್

ಬೆಂಗಳೂರು: ‘ನಾನು ಪಕ್ಷಕ್ಕೆ ಶ್ರಮ ಪಟ್ಟಿದ್ದೀನಿ, ರೆಸಾರ್ಟ್​ ರಾಜಕಾರಣ ಮುಗಿದಿದೆ. ನನಗೆ ಜವಾಬ್ದಾರಿ ಕೊಟ್ಟ ದಿನದಿಂದ ನಾನೂ ಮಲಗಿಲ್ಲ, ಮಲಗುವುದಕ್ಕೂ ಬಿಟ್ಟಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ದಿನೇಶ್ ಗುಂಡೂರಾವ್(Dinesh Gundu Rao) ಆಗಲ್ಲವೆಂದು ಬಿಟ್ಟಾಗ ನನಗೆ ಜವಾಬ್ದಾರಿ ಕೊಟ್ಟರು. ನೈತಿಕ ಹೊಣೆ ಹೊತ್ತು ಎಲ್ಲರೂ ರಾಜೀನಾಮೆ ಕೊಟ್ಟಿದ್ರು, ಆಗ ನನಗೆ ಸೋನಿಯ ಗಾಂಧಿಯವರು ಜವಾಬ್ದಾರಿ ಕೊಟ್ಟರು. ಈಗ ಹಿರಿಯರು ಕಿರಿಯರು ಎಲ್ಲರೂ ನಮಗೆ ಈಗ ಸಹಕಾರ ಕೊಡ್ತಾರೆ, ಉತ್ತಮವಾದ ಸರ್ಕಾರ ಕೊಡ್ತೀವಿ ಎಂದರು. ಎಕ್ಸಿಟ್ ಪೋಲ್ ಸರ್ವೇ ಕುರಿತು ಮಾತನಾಡಿದ ಅವರು ‘ ಈ ಬಗ್ಗೆ ನಂಬಿಕೆ ಇಲ್ಲ, ನನ್ನ ನಂಬಿಕೆ 141 ಸೀಟು, ಎಕ್ಸಿಟ್ ಪೋಲ್ ಸ್ಯಾಂಪಲ್ ಸಂಖ್ಯೆ ಕಡಿಮೆ ಇದ್ದು, ನಮ್ಮ ಸ್ಯಾಂಪಲ್ ಸಂಖ್ಯೆ ಜಾಸ್ತಿ ಇದೆ. ಇನ್ನೂ ಹೆಚ್ಚಿನ ಸಂಖ್ಯೆ ಬರಲಿದ್ದು, ನಿಚ್ಚಳವಾದ ಬಹುಮತ ಕಾಂಗ್ರೆಸ್​ಗೆ ಬರುತ್ತದೆ. ಇದು ನನ್ನ ಅಚಲವಾದ ನಂಬಿಕೆ. ಬಿಜೆಪಿಯವರು ಎಷ್ಟೇ ದುಡ್ಡು ಸುರಿದಿರಬಹುದು. ಬಿಜೆಪಿಯ ಎಷ್ಟೇ ದೊಡ್ಡ ನಾಯಕರು ಬಂದು ಪ್ರಚಾರ ಮಾಡಿರಬಹುದು. ಆದರೆ, ‘ಬ್ಯಾಲೇಟ್ ಈಸ್ ಸ್ಟ್ರಾಂಗರ್ ದೇನ್ ಬುಲೆಟ್’ ಯಾವ ರೀತಿ ಆಡಳಿತ ದುರುಪಯೋಗ ಮಾಡಿಕೊಂಡರು ಎನ್ನೋದು ದೊಡ್ಡ ಕಥೆ ಎಂದರು.

ರಾಜ್ಯದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:45 am, Fri, 12 May 23

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!