AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲಿ ಕೂಲ್‌ ಡ್ರಿಂಕ್ಸ್‌ ವ್ಯಾಪಾರಿಗೆ ಪ್ರತಾಪ್​ ಸಿಂಹ, ಕಾಂಗ್ರೆಸ್ ಸಹಾಯ: ಹೆಚ್ಚುವರಿ ಹಣವನ್ನು ವೃದ್ಧಾಶ್ರಮಕ್ಕೆ ನೀಡಿದ ಸಮೀರ್​​

ನನಗೆ ಹೆಚ್ಚಿಗೆ 20 ಸಾವಿರ ಹಣ ಬಂದಿದೆ. ಇದರಿಂದ ನಾನು ವೃದ್ಧಾಶ್ರಮ ಹಾಗೂ ಆಸ್ಪತ್ರೆ ರೋಗಿಗಳಿಗೆ ಹಣ್ಣು‌ ಹಂಪಲ ನೀಡಲು ನಿರ್ಧರಿಸಿದ್ದೇನೆ ಎಂದು ಸಮೀರ್​ ಹೇಳಿದ್ದಾರೆ.

ಗದಗದಲ್ಲಿ ಕೂಲ್‌ ಡ್ರಿಂಕ್ಸ್‌ ವ್ಯಾಪಾರಿಗೆ ಪ್ರತಾಪ್​ ಸಿಂಹ, ಕಾಂಗ್ರೆಸ್ ಸಹಾಯ: ಹೆಚ್ಚುವರಿ ಹಣವನ್ನು ವೃದ್ಧಾಶ್ರಮಕ್ಕೆ ನೀಡಿದ ಸಮೀರ್​​
ಕೂಲ್ ಡ್ರಿಂಕ್ಸ್ ವ್ಯಾಪಾರಿ ಸಮೀರ್​
Follow us
ವಿವೇಕ ಬಿರಾದಾರ
| Updated By: Digi Tech Desk

Updated on:May 01, 2023 | 12:37 PM

ಗದಗ: ಲಕ್ಷ್ಮೇಶ್ವರದ ಕೂಲ್ ಡ್ರಿಂಕ್ಸ್ (Cool Drinks) ವ್ಯಾಪಾರಿ ಸಮೀರ್ ಅವರಿಗೆ ಸಂಸದ ಪ್ರತಾಪ್​​ ಸಿಂಹ್ (Pratap Simha)​ 35 ಸಾವಿರ ರೂ. ಹಣ ಸಹಾಯ ಮಾಡಿದ್ದು, ಇದೀಗ ಕಾಂಗ್ರೆಸ್ (Congress) ಮುಖಂಡರು ​ಕೂಡ 20 ಸಾವಿರ ರೂ. ಹಣ ನೀಡಿದ್ದಾರೆ. ಈ ವಿಚಾರವಾಗಿ ಸಮೀರ್​​ ಪ್ರತಿಕ್ರಿಯಿಸಿ ನನಗೆ ಹೆಚ್ಚಿಗೆ 20 ಸಾವಿರ ಹಣ ಬಂದಿದೆ. ಇದರಿಂದ ನಾನು ವೃದ್ಧಾಶ್ರಮ ಹಾಗೂ ಆಸ್ಪತ್ರೆ ರೋಗಿಗಳಿಗೆ ಹಣ್ಣು‌ ಹಂಪಲ ನೀಡಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.

ಗದಗ ಕೋಲ್ಡ್​​​ ಡ್ರಿಂಕ್ಸ್​ ಟಾಟಾ ಏಸ್​ ಮೇಲೆ ಮುಗಿಬಿದ್ದ ಜನ

ಏ.28 ರಂದು ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಅಮಿತ್ ಶಾ ಸಮಾವೇಶದ ವೇಳೆ ಜನರ ಗುಂಪು ತಂಪು ಪಾನೀಯ  ವಾಹನದ ಮೇಲೆ ಮುಗಿಬಿದ್ದು, ಕೂಲ್ ಡ್ರಿಂಕ್ಸ್ ಕುಡಿದಿದ್ದರು. ಇದರಿಂದ ಸಮೀರ್ ಹಸನ್ ಸಾಬ್​ಗೆ ನಷ್ಟವಾಗಿ ಕಣ್ಣೀರಿಟ್ಟಿದ್ದರು. ಈ ಸುದ್ದಿ ತಿಳಿದು ಸಂಸದ ಪ್ರತಾಪ್ ಸಿಂಹ , ನಷ್ಟ ಅನುಭವಿಸಿದ್ದ ವ್ಯಾಪಾರಿ ಸಮೀರ್​ಗೆ ಹಣ ಸಂದಾಯ ಮಾಡಿದ್ದಾರೆ. ಹಣ ಸಂದಾಯ ಮಾಡಿರುವ ಬಗ್ಗೆ ಟ್ವೀಟ್‌ನಲ್ಲಿ ಸ್ಪಷ್ಟನೆ ನೀಡಿದ್ದು, Sorry Brother ಎಂದು ಟ್ವೀಟ್‌ ಮಾಡಿದ್ದಾರೆ. ಇದರೊಂದಿಗೆ ಬಡ ವ್ಯಾಪಾರಿಗೆ ಹಣ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇನ್ನು ಇವರ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಗೆ ಕಾರಣವಾಗಿದೆ.

ಲಕ್ಷ್ಮೇಶ್ವರದಲ್ಲಿ ಅಮಿತ್ ಶಾ ಸಮಾವೇಶಕ್ಕೆ ಬದಿದ್ದ ಜನರಿಗೆ ಕಾರ್ಯಕ್ರಮದ ಆಯೋಜಕರು ನೀರಿನ ವ್ಯವಸ್ಥೆ ಮಾಡಿರಲಿಲ್ಲ. ಇದರಿಂದ ಬಿಸಿಲಿನ ಬೇಗೆಗೆ ಜನ ಬೇಸತ್ತು ಹೋಗಿದ್ದರು. ಜನರಿಗೆ ತುಂಬ ಬಾಯಾರಿಕೆ ಆಗಿದ್ದುಮ ನೀರಿಗಾಗಿ ಪರದಾಡುತ್ತಿದ್ದರು. ಅದೇ ಸಂದರ್ಭದಲ್ಲಿ ಸಮೀರ್ ಹಸನ್​ ಸಾವ್ ಎನ್ನುವಾತ ಕೂಲ್ ಡ್ರಿಂಕ್ಸ್​ ಇರುವ ವಾಹನ ಸಮಾವೇಶದ ಬಳಿ ವ್ಯಾಪಾರಕ್ಕೆ ಬಂದಿದ್ದ. ಬಿಜೆಪಿಯವರೇ ಕೂಲ್​ ಡ್ರಿಂಕ್ಸ್ ತರಿಸಿದ್ದಾರೆ ಎಂದು ಜನ ಸಮೀರ್​ ವಾಹನಕ್ಕೆ ಮುಗಿಬಿದ್ದು, ಕೂಲ್​ ಡ್ರಿಂಕ್ಸ್, ಜ್ಯೂಸ್, ನೀರಿನ ಬಾಟಲ್​ ತಗೆದುಕೊಂಡು ಹೋಗಿದ್ದರು. ಇದರಿಂದ ಸುಮಾರ್ 35 ಸಾವಿರ ರೂಪಾಯಿ ನಷ್ಟವಾಯ್ತು ಎಂದು ಸಮೀರ್​ ಕಣ್ಣೀರಿಟ್ಟಿದ್ದ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಫುಲ್​ ವೈರಲ್ ಆಗಿತ್ತು.

ಇದೀಗ ಮೈಸೂರು ಸಂಸದ ಪ್ರತಾಪ್ ಸಿಂಹ, ವ್ಯಾಪಾರಿ ಸಮೀರ್​ ಅಕೌಂಟ್​ಗೆ 35 ಸಾವಿರ ರೂಪಾಯಿ ಟ್ರಾನ್ಸ್​ಫರ್ ಮಾಡಿದ್ದರು. ಈ ಮೂಲಕ ಪ್ರತಾಪ್ ಸಿಂಹ್ ಮಾನವೀಯತೆ ಮರೆದಿದ್ದಾರೆ. ಇನ್ನು ಸಂಸದರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಇನ್ನು ಈ ಬಗ್ಗೆ ಟಿವಿ9 ವರದಿ ಬಳಿಕ ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್ ನಾಯಕರು ಹಣ ಸಹಾಯ‌ ಮಾಡಿದರು. ಹೀಗಾಗಿ ಟಿವಿ9ಗೆ ಸಮೀರ್ ಧನ್ಯವಾದ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:12 pm, Mon, 1 May 23

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್