AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Geetha Shivarajkumar: ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರಲಿರುವ ಗೀತಾ ಶಿವರಾಜ್​ಕುಮಾರ್​

ನಟ ಶಿವರಾಜ್​ಕುಮಾರ್​ ಪತ್ನಿ ಗೀತಾ ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಸಮ್ಮುಖದಲ್ಲಿ ಸೇರ್ಪಡೆ ಆಗಲಿದ್ದಾರೆ.

Geetha Shivarajkumar: ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರಲಿರುವ ಗೀತಾ ಶಿವರಾಜ್​ಕುಮಾರ್​
ಗೀತಾ ಶಿವರಾಜ್​ಕುಮಾರ್​, ನಟ ಶಿವರಾಜ್​ಕುಮಾರ್​
TV9 Web
| Edited By: |

Updated on:Apr 27, 2023 | 5:08 PM

Share

ಬೆಂಗಳೂರು: ನಟ ಶಿವರಾಜ್​ಕುಮಾರ್​ ಪತ್ನಿ ಗೀತಾ (Geetha Shivarajkumar) ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಸಮ್ಮುಖದಲ್ಲಿ ಸೇರ್ಪಡೆ ಆಗಲಿದ್ದಾರೆ. ಗೀತಾ ಅವರು ಮಾಜಿ ಸಿಎಂ ದಿ. ಎಸ್.ಬಂಗಾರಪ್ಪನವರ ಪುತ್ರಿ. ಈ ಹಿಂದೆ ಜೆಡಿಎಸ್​ನಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಇದೀಗ ಸೊರಬದಲ್ಲಿ ಮಧು ಬಂಗಾರಪ್ಪ ಪರ ಕಾಂಗ್ರೆಸ್ ಪಕ್ಷದ ಪರವಾಗಿ ಗೀತಾ ಶಿವರಾಜ್​ಕುಮಾರ್​ ಪ್ರಚಾರ ನಡೆಸಿದ್ದರು. ನಾಳೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಗೀತಾ ಶಿವಾರಾಜ್​ಕುಮಾರ್ ನಾಳೆ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರಂತೆ ಎಂದು ನಿರ್ಮಾಪಕ‌ ಕೆ.ಪಿ.ಶ್ರೀಕಾಂತ್​ ಅವರು ಕೂಡ ದೃಢಪಡಿಸಿದ್ದಾರೆ.

ವರನಟ ಡಾ. ರಾಜ್​​ಕುಮಾರ್​ ಕುಟುಂಬದಲ್ಲಿ ರಾಜಕೀಯ ಪ್ರವೇಶ ಮಾಡಿರುವವರಲ್ಲಿ ಗೀತಾ ಶಿವರಾಜ್​ಕುಮಾರ್​ ಮಾತ್ರ. ಮಾಜಿ ಸಿಎಂ ದಿ. ಎಸ್.ಬಂಗಾರಪ್ಪ ಮತ್ತು ಸಹೋದರ ಮಧು ಬಂಗಾರಪ್ಪ ಜೊತೆ ರಾಜಕೀಯವಾಗಿ ಗುರುತಿಸಿಕೊಂಡಿದ್ದರು. 2021ರಲ್ಲಿ ಮಧು ಬಂಗಾರಪ್ಪ ಜೆಡಿಎಸ್​ ಪಕ್ಷದಿಂದ ಹೊರಬಂದು ಬಳಿಕ ಕಾಂಗ್ರೆಸ್​ ಪಕ್ಷ ಸೇರಿದ್ದರು. ಆವಾಗಲೇ ಗೀತಾ ಶಿವರಾಜ್​ಕುಮಾರ್​​​ ಕಾಂಗ್ರೆಸ್​ ಸೇರುತ್ತಾರೆ ಎಂಬ ಮಾತು ಕೇಳಿಬಂದಿದ್ದವು.

ಇದನ್ನೂ ಓದಿ: ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರುವ ನಟ-ನಟಿಯರು, ಚಿತ್ರಗಳು ಇಲ್ಲಿವೆ

2014ರ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಮಾಜಿ ಸಿಎಂ ಬಿ.ಎಸ್​​ ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಿದ್ದ ಗೀತಾ ಶಿವರಾಜ್​ಕುಮಾರ್​ ಸೋಲು ಕಂಡಿದ್ದರು.

ಚುನಾವಣೆ ಅಖಾಡಕ್ಕೆ ಸಿನಿಮಾ ತಾರೆಯರು 

ಸಿನಿಮಾ ತಾರೆಯರು ಈ ಬಾರಿ ಚುನಾವಣೆ ಅಖಾಡಕ್ಕೆ ಇಳಿದಿದ್ದು ಕೆಲ ನಟ-ನಟಿಯರು ಬೇರೆ ಬೇರೆ ಪಕ್ಷಗಳ ಪರವಾಗಿ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ. ನಟ ಸುದೀಪ್ ಅವರು ಭರ್ಜರಿಯಾಗಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ನಟಿ ಹರ್ಷಿಕಾ ಪೂಣಚ್ಚ ಅವರು ರಾಜ್ಯ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದಾರೆ.

ಇದನ್ನೂ ಓದಿ: Karnataka Assembly Polls: ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಾಗ ಅತ್ತಿದ್ದನ್ನು ಮಿಮಿಕ್ ಮಾಡಿದ ಸಿದ್ದರಾಮಯ್ಯ

ಅದೇ ರೀತಿಯಾಗಿ ನಟಿ ಶ್ರುತಿ ಅವರು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ನಟಿ ಪ್ರೇಮಾ ಕೂಡ ಬಿಜೆಪಿ ಅಭ್ಯರ್ಥಿ ಬಿಸಿ ಪಾಟೀಲ್ ಪರ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಿಸಿ ಪಾಟೀಲ್ ಅವರಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:25 pm, Thu, 27 April 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್