AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾತೆ ಕ್ಯಾತೆ ಶುರು: ತಮ್ಮ ಸಮುದಾಯದ ಶಾಸಕರ ಪರ ಸ್ವಾಮೀಜಿಗಳ ಬ್ಯಾಟಿಂಗ್

ನೂತನ ಸಂಪುಟದಲ್ಲಿ ಸೇರಿಕೊಳ್ಳಲು ಈಗಾಗಲೆ ಸಾಂಭ್ಯವ್ಯ ಶಾಸಕರ ಪಟ್ಟಿ ಸಿದ್ದವಾಗಿದೆ. ತಮ್ಮ ಸಮುದಾಯದ ನಾಯಕರಿಗೆ ಕ್ಯಾಬಿನೆಟ್​​ನಲ್ಲಿ ಸ್ಥಾನ ನೀಡಿ ಎಂದು ಸ್ವಾಮೀಜಿಗಳು ಆಗ್ರಹ ಮಾಡುತ್ತಿದ್ದಾರೆ.

ಖಾತೆ ಕ್ಯಾತೆ ಶುರು: ತಮ್ಮ ಸಮುದಾಯದ ಶಾಸಕರ ಪರ ಸ್ವಾಮೀಜಿಗಳ ಬ್ಯಾಟಿಂಗ್
ಭಗೀರಥ ಮಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:May 19, 2023 | 11:22 AM

Share

ಚಿತ್ರದುರ್ಗ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramiah) ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ​​ ಪದಗ್ರಹಣ ಮಾಡಲಿದ್ದಾರೆ. ಇವರೊಂದಿಗೆ ಕೆಲ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದು, ಈ ಸಂಬಂಧ ಶಾಸಕರ ಲಾಬಿ ಜೋರಾಗಿಯೇ ನಡೆಯುತ್ತದೆ. ಸಂಪುಟ ರಚನೆ ವಿಚಾರವಾಗಿ ಇಂದು (ಮೇ.19) ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ದೆಹಲಿಗೆ ತೆರಳಿ ಹೈಕಮಾಂಡ್​ ನಾಯಕರನ್ನು ಭೇಟಿಯಾಗಲಿದ್ದಾರೆ. ಈ ಸಂಪುಟದಲ್ಲಿ ಸೇರಿಕೊಳ್ಳಲು ಈಗಾಗಲೆ ಸಾಂಭ್ಯವ್ಯ ಶಾಸಕರ ಪಟ್ಟಿ ಸಿದ್ದವಾಗಿದೆ. ತಮ್ಮ ಸಮುದಾಯದ ನಾಯಕರಿಗೆ ಕ್ಯಾಬಿನೆಟ್​​ನಲ್ಲಿ ಸ್ಥಾನ ನೀಡಿ ಎಂದು ಸ್ವಮೀಜಿಯವರು ರೆಕ್ಮೆಂಡ್​ ಮಾಡುತ್ತಿದ್ದಾರೆ.

ಉಪ್ಪಾರ ಸಮಾಜದ ಶಾಸಕರಿಗೆ ಮಂತ್ರಿ ಸ್ಥಾನ ನೀಡುವಂತೆ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿರುವ ಭಗೀರಥ ಮಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಆಗ್ರಹಿಸಿದ್ದಾರೆ. ಚಾಮರಾಜನಗರ ಶಾಸಕ, ಹಿಂದುಳಿದ ಸಮುದಾಯದ ಪುಟ್ಟರಂಗಶೆಟ್ಟಿ ಅವರಿಗೆ ಸಂಪುಟ ದರ್ಜೆ, ಉತ್ತಮ‌ ಖಾತೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಅಲ್ಲದೆ ನಿರ್ಲಕ್ಷಿಸಿದರೆ ಜನ ಮುಂದಿನ ತೀರ್ಮಾನ ಮಾಡುತ್ತಾರೆಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ರಾಜಸ್ಥಾನ ಮಾದರಿ ಅಳವಡಿಸಿದ ಕಾಂಗ್ರೆಸ್; ಎದುರಾಗಬಹುದೇ ಹೊಸ ಸಂಕಷ್ಟ?

ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಬೋವಿ ಸಮಾಜದ ಸ್ವಾಮೀಜಿ ಭೇಟಿ

ನಿಯೋಜಿತ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಬೋವಿ ಸಮಾಜದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಬೋವಿ ಸಮುದಾಯದ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ.

ನಮ್ಮ ಸಮುದಾಯದಿಂದ 3 ಜನ ಶಾಸಕರಿದ್ದಾರೆ. ಹೀಗಾಗಿ ಸಚಿವ ಸ್ಥಾನ ಕೊಡುವಂತೆ ಕೇಳಿದ್ದೇನೆ. ಬಸವಣ್ಣನವರ ಪಾಲನೆ ಸಂಪುಟದಲ್ಲಿ ಹಾಗಬೇಕು. ಸಾಮಾಜಿಕ ನ್ಯಾಯದಡಿ ನಮ್ಮ ಸಮುದಾಯಕ್ಕೂ ಮಂತ್ರಿಗಿರಿ ಕೊಡಬೇಕು. ಸಾಮಾಜಿಕ ನ್ಯಾಯದಡಿ ಕೊಡುತ್ತೇವೆ ಅಂತಾ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಚಿವ ಸ್ಥಾನ ಕೊಡುವ ವಿಶ್ವಾಸವಿದೆ. ನಮ್ಮ ಸಮುದಾಯದ ಪರವಾಗಿ ಸ್ವಾಮೀಜಿಗಳು ಕೇಳುವುದು ತಪ್ಪಿಲ್ಲ ಎಂದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:56 am, Fri, 19 May 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ