AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾತೆ ಕ್ಯಾತೆ ಶುರು: ತಮ್ಮ ಸಮುದಾಯದ ಶಾಸಕರ ಪರ ಸ್ವಾಮೀಜಿಗಳ ಬ್ಯಾಟಿಂಗ್

ನೂತನ ಸಂಪುಟದಲ್ಲಿ ಸೇರಿಕೊಳ್ಳಲು ಈಗಾಗಲೆ ಸಾಂಭ್ಯವ್ಯ ಶಾಸಕರ ಪಟ್ಟಿ ಸಿದ್ದವಾಗಿದೆ. ತಮ್ಮ ಸಮುದಾಯದ ನಾಯಕರಿಗೆ ಕ್ಯಾಬಿನೆಟ್​​ನಲ್ಲಿ ಸ್ಥಾನ ನೀಡಿ ಎಂದು ಸ್ವಾಮೀಜಿಗಳು ಆಗ್ರಹ ಮಾಡುತ್ತಿದ್ದಾರೆ.

ಖಾತೆ ಕ್ಯಾತೆ ಶುರು: ತಮ್ಮ ಸಮುದಾಯದ ಶಾಸಕರ ಪರ ಸ್ವಾಮೀಜಿಗಳ ಬ್ಯಾಟಿಂಗ್
ಭಗೀರಥ ಮಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ
Follow us
ವಿವೇಕ ಬಿರಾದಾರ
|

Updated on:May 19, 2023 | 11:22 AM

ಚಿತ್ರದುರ್ಗ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramiah) ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ​​ ಪದಗ್ರಹಣ ಮಾಡಲಿದ್ದಾರೆ. ಇವರೊಂದಿಗೆ ಕೆಲ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದು, ಈ ಸಂಬಂಧ ಶಾಸಕರ ಲಾಬಿ ಜೋರಾಗಿಯೇ ನಡೆಯುತ್ತದೆ. ಸಂಪುಟ ರಚನೆ ವಿಚಾರವಾಗಿ ಇಂದು (ಮೇ.19) ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ದೆಹಲಿಗೆ ತೆರಳಿ ಹೈಕಮಾಂಡ್​ ನಾಯಕರನ್ನು ಭೇಟಿಯಾಗಲಿದ್ದಾರೆ. ಈ ಸಂಪುಟದಲ್ಲಿ ಸೇರಿಕೊಳ್ಳಲು ಈಗಾಗಲೆ ಸಾಂಭ್ಯವ್ಯ ಶಾಸಕರ ಪಟ್ಟಿ ಸಿದ್ದವಾಗಿದೆ. ತಮ್ಮ ಸಮುದಾಯದ ನಾಯಕರಿಗೆ ಕ್ಯಾಬಿನೆಟ್​​ನಲ್ಲಿ ಸ್ಥಾನ ನೀಡಿ ಎಂದು ಸ್ವಮೀಜಿಯವರು ರೆಕ್ಮೆಂಡ್​ ಮಾಡುತ್ತಿದ್ದಾರೆ.

ಉಪ್ಪಾರ ಸಮಾಜದ ಶಾಸಕರಿಗೆ ಮಂತ್ರಿ ಸ್ಥಾನ ನೀಡುವಂತೆ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿರುವ ಭಗೀರಥ ಮಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಆಗ್ರಹಿಸಿದ್ದಾರೆ. ಚಾಮರಾಜನಗರ ಶಾಸಕ, ಹಿಂದುಳಿದ ಸಮುದಾಯದ ಪುಟ್ಟರಂಗಶೆಟ್ಟಿ ಅವರಿಗೆ ಸಂಪುಟ ದರ್ಜೆ, ಉತ್ತಮ‌ ಖಾತೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಅಲ್ಲದೆ ನಿರ್ಲಕ್ಷಿಸಿದರೆ ಜನ ಮುಂದಿನ ತೀರ್ಮಾನ ಮಾಡುತ್ತಾರೆಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ರಾಜಸ್ಥಾನ ಮಾದರಿ ಅಳವಡಿಸಿದ ಕಾಂಗ್ರೆಸ್; ಎದುರಾಗಬಹುದೇ ಹೊಸ ಸಂಕಷ್ಟ?

ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಬೋವಿ ಸಮಾಜದ ಸ್ವಾಮೀಜಿ ಭೇಟಿ

ನಿಯೋಜಿತ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಬೋವಿ ಸಮಾಜದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಬೋವಿ ಸಮುದಾಯದ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ.

ನಮ್ಮ ಸಮುದಾಯದಿಂದ 3 ಜನ ಶಾಸಕರಿದ್ದಾರೆ. ಹೀಗಾಗಿ ಸಚಿವ ಸ್ಥಾನ ಕೊಡುವಂತೆ ಕೇಳಿದ್ದೇನೆ. ಬಸವಣ್ಣನವರ ಪಾಲನೆ ಸಂಪುಟದಲ್ಲಿ ಹಾಗಬೇಕು. ಸಾಮಾಜಿಕ ನ್ಯಾಯದಡಿ ನಮ್ಮ ಸಮುದಾಯಕ್ಕೂ ಮಂತ್ರಿಗಿರಿ ಕೊಡಬೇಕು. ಸಾಮಾಜಿಕ ನ್ಯಾಯದಡಿ ಕೊಡುತ್ತೇವೆ ಅಂತಾ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಚಿವ ಸ್ಥಾನ ಕೊಡುವ ವಿಶ್ವಾಸವಿದೆ. ನಮ್ಮ ಸಮುದಾಯದ ಪರವಾಗಿ ಸ್ವಾಮೀಜಿಗಳು ಕೇಳುವುದು ತಪ್ಪಿಲ್ಲ ಎಂದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:56 am, Fri, 19 May 23

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ