AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​​ನವರಿಗೆ ಧೈರ್ಯ​ ಇದ್ದರೆ ಲಿಂಗಾಯತ ಸಿಎಂ ಘೋಷಿಸಲಿ: ಜಿಎಂ ಸಿದ್ದೇಶ್ವರ್​​ ಸವಾಲು

ಕಾಂಗ್ರೆಸ್​​ನವರಿಗೆ ಧೈರ್ಯ​ ಇದ್ದರೆ ಲಿಂಗಾಯತ ಸಿಎಂ ಘೋಷಿಸಿ ಚುನಾವಣೆಗೆ ಹೋಗಲಿ‌ ಎಂದು ಸಂಸದ ಜಿ.ಎಂ.ಸಿದ್ದೇಶ್ವರ್​ ಸವಾಲು ಹಾಕಿದ್ದಾರೆ.

ಕಾಂಗ್ರೆಸ್​​ನವರಿಗೆ ಧೈರ್ಯ​ ಇದ್ದರೆ ಲಿಂಗಾಯತ ಸಿಎಂ ಘೋಷಿಸಲಿ: ಜಿಎಂ ಸಿದ್ದೇಶ್ವರ್​​ ಸವಾಲು
ಸಂಸದ ಜಿ.ಎಂ.ಸಿದ್ದೇಶ್ವರ್
ಗಂಗಾಧರ​ ಬ. ಸಾಬೋಜಿ
|

Updated on:Apr 20, 2023 | 8:00 PM

Share

ದಾವಣಗೆರೆ: ಕಾಂಗ್ರೆಸ್​​ನವರಿಗೆ (Congress) ಧೈರ್ಯ​ ಇದ್ದರೆ ಲಿಂಗಾಯತ ಸಿಎಂ ಘೋಷಿಸಲಿ ಎಂದು ಸಂಸದ ಜಿ.ಎಂ.ಸಿದ್ದೇಶ್ವರ್ (GM Siddeshwar)​ ಸವಾಲು ಹಾಕಿದ್ದಾರೆ. ಜಿಲ್ಲೆಯ ಹೊನ್ನಾಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಸಿಎಂ ಎಂದು ಘೋಷಣೆ ಮಾಡಿ ಚುನಾವಣೆಗೆ ಹೋಗಲಿ‌. ಈ ಹಿಂದೆ ಯಡಿಯೂರಪ್ಪರನ್ನ ಸಿಎಂ ಎಂದು ಘೋಷಣೆ ಮಾಡಿದ್ದರು. ಈಗಲೂ ಲಿಂಗಾಯತ ಮುಖ್ಯಮಂತ್ರಿ ಬಗ್ಗೆ ಒಮ್ಮತವಾಗಿ ಹೇಳಲಾಗಿದೆ. ಕಾಂಗ್ರೆಸ್​ನವರು​ ಮುಸ್ಲಿಂ ಸಿಎಂ ಎಂದು ಘೋಷಣೆ ಮಾಡಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ. ಮುಸ್ಲಿಂ ಸಮುದಾಯ ಬಹಳ ವರ್ಷಗಳಿಂದ ಅವರಿಗೆ ಓಟ್ ಹಾಕಿಕೊಂಡು ಬರುತ್ತಿದ್ದಾರೆ. 24ರ ನಂತರ ದಾವಣಗೆರೆಯಲ್ಲಿ ರಾಷ್ಟ್ರೀಯ ನಾಯಕರ ಪ್ರವಾಸ ಇದೆ. 22 ರಂದು ಮುಸ್ಲಿಂರ ಹಬ್ಬ ಇರುವುದರಿಂದ ಮುಂದೂಡಲಾಗಿದೆ ಎಂದು ತಿಳಿಸಿದರು.

ರಾಹುಲ್ ಗಾಂಧಿಗೆ ಧಮ್ ಇದ್ದರೆ ಲಿಂಗಾಯತ ನಾಯಕರನ್ನ ಸಿಎಂ ಅಭ್ಯರ್ಥಿಯನ್ನಾಗಿ ಘೋಷಿಸಲಿ: ಸಿಎಂ ಬೊಮ್ಮಾಯಿ

ಲಿಂಗಾಯತ ನಾಯಕರನ್ನು ಬಿಜೆಪಿ ಕಡೆಗಣಿಸಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಬೀದರ್​ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ರಾಹುಲ್ ಗಾಂಧಿಗೆ ಧಮ್ ಇದ್ದರೆ ಲಿಂಗಾಯತ ನಾಯಕರನ್ನ ಸಿಎಂ ಅಭ್ಯರ್ಥಿಯನ್ನಾಗಿ ಘೋಷಿಸಲಿ ಎನ್ನುವ ಮೂಲಕ ತಿರುಗೇಟು ನೀಡಿದ್ದಾರೆ. ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಮ್ಮಲ್ಲಿ ಯಾವುದೇ ಡ್ಯಾಮೇಜ್ ಆಗಿಲ್ಲ, ಕಂಟ್ರೋಲ್‌ ಮಾಡೋದೆನಿದೆ. ಎಲ್ಲಾ ಸಮುದಾಯಕ್ಕೆ ನ್ಯಾಯ ಕೊಡುವಂತ ಕೆಲಸ ನಮ್ಮ ಸರ್ಕಾರ ಮಾಡಿದೆ. ಲಿಂಗಾಯತ ಸೇರಿದಂತೆ ಎಲ್ಲಾ ಸಮುದಾಯಗಳಿಗೂ ಮಾನ್ಯತೆ ನೀಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಿಂಗಾಯತರನ್ನು ಹಿಡಿಟ್ಟುಕೊಳ್ಳಲು ರಣತಂತ್ರ, ಯಡಿಯೂರಪ್ಪರನ್ನ ಮುಂದೆ ಬಿಟ್ಟ ಬಿಜೆಪಿ

ಲಿಂಗಾಯತ ಸಮಾಜವನ್ನ ಒಡೆಯುವಂತ ಕೆಲಸ ಕಾಂಗ್ರೆಸ್ ಮಾಡಿದೆ. ಕಾಂಗ್ರೆಸ್ 50 ವರ್ಷದಿಂದ ಲಿಂಗಾಯತರನ್ನ ಸಿಎಂ ಮಾಡಿಲ್ಲ. ಕಾಂಗ್ರೆಸ್‌ನಲ್ಲಿ ಎಸ್.ನಿಜಲಿಂಗಪ್ಪ ಹೊರತುಪಡಿಸಿದರೇ ಲಿಂಗಾಯತ ಸಿಎಂ ಯಾರೂ ಕೂಡ ಆಗಿಲ್ಲ. ಇದರ ಜೊತೆ ಕಾಂಗ್ರೆಸ್​ ವಿರೇಂದ್ರ ಪಾಟೀಲ್​ರನ್ನ ಎಷ್ಟು ಹೀನಾಯವಾಗಿ ನಡೆಸಿಕೊಂಡಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಕಿಡಿಕಾರಿದ್ದಾರೆ.

ಯಡಿಯೂರಪ್ಪರನ್ನು ಮುಂದೆ ಬಿಟ್ಟ ಬಿಜೆಪಿ

ಲಿಂಗಾಯತ ಸಮುದಾಯದಲ್ಲಿ ವ್ಯತಿರಿಕ್ತ ಭಾವನೆ ಸೃಷ್ಟಿಯಾಗದಂತೆ ತಡೆಯುವುದು, ಮಠಾಧಿಪತಿಗಳ ಸಂಪರ್ಕದ ಮೂಲಕ ಡ್ಯಾಮೇಜ್ ಕಂಟ್ರೋಲ್, ಲಿಂಗಾಯತ ಸಮುದಾಯದ ಯುವ ವೇದಿಕೆಗಳ ಮೂಲಕ ಡ್ಯಾಮೇಜ್ ಕಂಟ್ರೋಲ್, ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿಗೆ ಪಕ್ಷ ಸಾಕಷ್ಟು ಕೊಟ್ಟಿದೆ ಎಂದು ಸಮುದಾಯದೊಳಗೆ ಬಿಂಬಿಸಲಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Karnataka Polls: ಲಿಂಗಾಯತ ವಿರೋಧ ಎದುರಿಸಲು ಬಿಜೆಪಿಗೆ ಯಡಿಯೂರಪ್ಪ ಗುರಾಣಿ; ಬೆಳಗಾವಿ ಬಂಡಾಯ ತಣಿಸಿದ ಸಂತೋಷ್ ತಂತ್ರ

ಪಕ್ಷದಿಂದ ಇಬ್ಬರಿಗೂ ಯಾವುದೇ ಅನ್ಯಾಯ ಆಗಿಲ್ಲ ಎಂದು ಸಮುದಾಯದ ಮುಖಂಡರಿಂದಲೇ ಹೇಳಿಸುವುದು ಸೇರಿದಂತೆ ಹಲವು ಈ ರೀತಿಯ ವಿಚಾರಗಳ ಬಗ್ಗೆ ಈಗಾಗಲೇ ಬಿಜೆಪಿ ಯೋಜನೆ ರೂಪಿಸಿದ್ದು, ಮೊದಲ ಹಂತವಾಗಿ ಇಂದು ನಡೆಯುವ ಸಭೆಯಲ್ಲಿ ಈ ಅಂಶಗಳ ಚರ್ಚೆ ಮಾಡಲು ಯಡಿಯೂರಪ್ಪನವರಿಗೆ ಹೈಕಮಾಂಡ್​ ಸೂಚನೆ ನೀಡಿದೆ ಎನ್ನಲಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:00 pm, Thu, 20 April 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ