AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಬೆನ್ನಲ್ಲೇ ಪಕ್ಷ ತೊರೆಯುತ್ತಿರುವ ಸಾಲು-ಸಾಲು ಜೆಡಿಎಸ್ ಮುಖಂಡರು

ಎಸ್ ಆರ್ ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಸಾಲು-ಸಾಲು ಮುಖಂಡರು, ಕಾರ್ಯಕರ್ತರು ಜೆಡಿಎಸ್ ಪಕ್ಷ ತೊರೆಯುತ್ತಿದ್ದಾರೆ.

ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಬೆನ್ನಲ್ಲೇ ಪಕ್ಷ ತೊರೆಯುತ್ತಿರುವ ಸಾಲು-ಸಾಲು ಜೆಡಿಎಸ್ ಮುಖಂಡರು
ರಮೇಶ್ ಬಿ. ಜವಳಗೇರಾ
|

Updated on: Mar 26, 2023 | 9:14 AM

Share

ತುಮಕೂರು: ಈಗಾಗಲೇ ಕಾಂಗ್ರೆಸ್​ನಲ್ಲಿ ಗುರುತಿಸಿಕೊಂಡು ಪಕ್ಷದಿಂದ ಉಚ್ಚಾಟನೆಗೊಂಡಿರುವ ಗುಬ್ಬಿ ಕ್ಷೇತ್ರದ ಜೆಡಿಎಸ್​ ಶಾಸಕ ಎಸ್ ಆರ್ ಶ್ರೀನಿವಾಸ್ (Gubbi MLA SR Srinivas) ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ನಾಳೆ ಅಂದರೆ ಮಾರ್ಚ್ 27ರಂದು ಸೋಮವಾರ ಜೆಡಿಎಸ್​ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶ್ರೀನಿವಾಸ್(SR Srinivas) ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ರಾಜೀನಾಮೆ ಬಳಿಕ ಶ್ರೀನಿವಾಸ್ ಅಧಿಕೃತವಾಗಿ ಕಾಂಗ್ರೆಸ್ ‌ಸೇರ್ಪಡೆಯಾಗಲಿದ್ದಾರೆ. ಇನ್ನು ಎಸ್ ಆರ್ ಶ್ರೀನಿವಾಸ್ ಪಕ್ಷ ಸೇರ್ಪಡೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ​ ಗುಬ್ಬಿ ಕ್ಷೇತ್ರದ ಟಿಕೆಟ್ ಪ್ರಕಟಿಸಿಲ್ಲ. ಆದ್ರೆ, ಗುಬ್ಬಿಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಪಕ್ಕಾ ಆಗಿದೆ.

ಇನ್ನು ಈ ಬಗ್ಗೆ ತುಮಕೂರು ಜಿಲ್ಲೆ ಗುಬ್ಬಿಯಲ್ಲಿ ಮಾತನಾಡಿರುವ ಜೆಡಿಎಸ್‌ ಉಚ್ಛಾಟಿತ ಶಾಸಕ ಶ್ರೀನಿವಾಸ್, ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಇಂದೇ ರಾಜೀನಾಮೆ ಕೊಡಬೇಕಿತ್ತು, ಆದ್ರೆ ಸ್ಪೀಕರ್​ ಇರಲಿಲ್ಲ. ಸದ್ಯಕ್ಕೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ. ಬೇರೆ ಶಾಸಕರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಗುಬ್ಬಿ ಜೆಡಿಎಸ್​ನಲ್ಲಿ ರಾಜೀನಾಮೆ ಪರ್ವ

ಇನ್ನು ಶ್ರೀನಿವಾಸ್ ಅವರು ಅಧಿಕೃತವಾಗಿ ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಗುಬ್ಬಿ ಜೆಡಿಎಸ್​ನಲ್ಲಿ ರಾಜೀನಾಮೆ ಪರ್ವ ಶುರುವಾಗಿದೆ. ಜಿ.ಹೊಸಹಳ್ಳಿ ಗ್ರಾಮದಲ್ಲಿ ಸಾಲು ಸಾಲು ಜೆಡಿಎಸ್ ಕಾರ್ಯಕರ್ತ ರಾಜೀನಾಮೆ ನೀಡಿದ್ದಾರೆ. 300ಕ್ಕೂ ಹೆಚ್ಚು JDS ಮುಖಂಡರು, ಕಾರ್ಯಕರ್ತ, ಜೆಡಿಎಸ್​​​ ಬೂತ್ ಕಮಿಟಿ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಜೆಡಿಎಸ್​ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಕಚೇರಿಗೆ ರವಾನಿಸಿದ್ದಾರೆ. ಇನ್ನು ಕ್ಷೇತ್ರದಲ್ಲಿ ಹಲವು ಮುಖಂಡರು ಜೆಡಿಎಸ್​ಗೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಬಂಡಾಯದ ಎಚ್ಚರಿಕೆ :

ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಗೊಂಡು ಚುನಾವಣೆಗೆ ಸ್ಪರ್ಧಿಸುವುದಕ್ಕೆ ಗುಬ್ಬಿ ತಾಲೂಕು ಕಾಂಗ್ರೆಸ್ ಘಟಕದಿಂದ ವಿರೋಧ ವ್ಯಕ್ತವಾಗಿದೆ. ಅಲ್ಲದೆ ಒಂದು ವೇಳೆ ಶ್ರೀನಿವಾಸ್ ಚುನಾವಣೆಗೆ ಸ್ಪರ್ಧಿಸಿದ್ದೇ ಆದರೆ ಅವರನ್ನು ಸೋಲಿಸುವ ಪಣತೊಟ್ಟಂತಿದೆ. ಈ ಮೂಲಕ ಶ್ರೀನಿವಾಸ್ ಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ ಬಂಡಾಯ ಫಿಕ್ಸ್ ಎನ್ನುವ ಎಚ್ಚರಿಕೆಯ ಸಂದೇಶವನ್ನು ಕೂಡಾ ರವಾನಿಸಿದ್ದಾರೆ. ಮಾನವೂ ಇಲ್ಲದ ಮೌಲ್ಯವೂ ಇಲ್ಲದ ಹತ್ತು ಮುಖದ ರಾಜಕಾರಣಿ. ಮುಖವಾಡ ಕಳಚೋಣ ಬನ್ನಿ ಎಂದು ಈ ಪೋಸ್ಟರ್ ಮೂಲಕ ಸಂದೇಶ ಸಾರಿದ್ದರು. ಪ್ರಸನ್ನ ಕುಮಾರ್ ಹಾಗೂ ಹೊನ್ನಗಿರಿ ಗೌಡ ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ