AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಬೆನ್ನಲ್ಲೇ ಪಕ್ಷ ತೊರೆಯುತ್ತಿರುವ ಸಾಲು-ಸಾಲು ಜೆಡಿಎಸ್ ಮುಖಂಡರು

ಎಸ್ ಆರ್ ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಸಾಲು-ಸಾಲು ಮುಖಂಡರು, ಕಾರ್ಯಕರ್ತರು ಜೆಡಿಎಸ್ ಪಕ್ಷ ತೊರೆಯುತ್ತಿದ್ದಾರೆ.

ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಬೆನ್ನಲ್ಲೇ ಪಕ್ಷ ತೊರೆಯುತ್ತಿರುವ ಸಾಲು-ಸಾಲು ಜೆಡಿಎಸ್ ಮುಖಂಡರು
ರಮೇಶ್ ಬಿ. ಜವಳಗೇರಾ
|

Updated on: Mar 26, 2023 | 9:14 AM

Share

ಮುಖ್ಯಾಂಶಗಳು

  • ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಎಸ್ ಆರ್ ಶ್ರೀನಿವಾಸ್
  • ಗುಬ್ಬಿ JDS ಉಚ್ಚಾಟಿತ ಶಾಸಕ ಎಸ್​.ಆರ್​.ಶ್ರೀನಿವಾಸ್
  • ಎಸ್ ಆರ್ ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಬೆನ್ನಲ್ಲೇ ಗುಬ್ಬಿ ಜೆಡಿಎಸ್​ನಲ್ಲಿ ರಾಜೀನಾಮೆ ಪರ್ವ

ತುಮಕೂರು: ಈಗಾಗಲೇ ಕಾಂಗ್ರೆಸ್​ನಲ್ಲಿ ಗುರುತಿಸಿಕೊಂಡು ಪಕ್ಷದಿಂದ ಉಚ್ಚಾಟನೆಗೊಂಡಿರುವ ಗುಬ್ಬಿ ಕ್ಷೇತ್ರದ ಜೆಡಿಎಸ್​ ಶಾಸಕ ಎಸ್ ಆರ್ ಶ್ರೀನಿವಾಸ್ (Gubbi MLA SR Srinivas) ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ನಾಳೆ ಅಂದರೆ ಮಾರ್ಚ್ 27ರಂದು ಸೋಮವಾರ ಜೆಡಿಎಸ್​ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶ್ರೀನಿವಾಸ್(SR Srinivas) ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ರಾಜೀನಾಮೆ ಬಳಿಕ ಶ್ರೀನಿವಾಸ್ ಅಧಿಕೃತವಾಗಿ ಕಾಂಗ್ರೆಸ್ ‌ಸೇರ್ಪಡೆಯಾಗಲಿದ್ದಾರೆ. ಇನ್ನು ಎಸ್ ಆರ್ ಶ್ರೀನಿವಾಸ್ ಪಕ್ಷ ಸೇರ್ಪಡೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ​ ಗುಬ್ಬಿ ಕ್ಷೇತ್ರದ ಟಿಕೆಟ್ ಪ್ರಕಟಿಸಿಲ್ಲ. ಆದ್ರೆ, ಗುಬ್ಬಿಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಪಕ್ಕಾ ಆಗಿದೆ.

ಇನ್ನು ಈ ಬಗ್ಗೆ ತುಮಕೂರು ಜಿಲ್ಲೆ ಗುಬ್ಬಿಯಲ್ಲಿ ಮಾತನಾಡಿರುವ ಜೆಡಿಎಸ್‌ ಉಚ್ಛಾಟಿತ ಶಾಸಕ ಶ್ರೀನಿವಾಸ್, ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಇಂದೇ ರಾಜೀನಾಮೆ ಕೊಡಬೇಕಿತ್ತು, ಆದ್ರೆ ಸ್ಪೀಕರ್​ ಇರಲಿಲ್ಲ. ಸದ್ಯಕ್ಕೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ. ಬೇರೆ ಶಾಸಕರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಗುಬ್ಬಿ ಜೆಡಿಎಸ್​ನಲ್ಲಿ ರಾಜೀನಾಮೆ ಪರ್ವ

ಇನ್ನು ಶ್ರೀನಿವಾಸ್ ಅವರು ಅಧಿಕೃತವಾಗಿ ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಗುಬ್ಬಿ ಜೆಡಿಎಸ್​ನಲ್ಲಿ ರಾಜೀನಾಮೆ ಪರ್ವ ಶುರುವಾಗಿದೆ. ಜಿ.ಹೊಸಹಳ್ಳಿ ಗ್ರಾಮದಲ್ಲಿ ಸಾಲು ಸಾಲು ಜೆಡಿಎಸ್ ಕಾರ್ಯಕರ್ತ ರಾಜೀನಾಮೆ ನೀಡಿದ್ದಾರೆ. 300ಕ್ಕೂ ಹೆಚ್ಚು JDS ಮುಖಂಡರು, ಕಾರ್ಯಕರ್ತ, ಜೆಡಿಎಸ್​​​ ಬೂತ್ ಕಮಿಟಿ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಜೆಡಿಎಸ್​ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಕಚೇರಿಗೆ ರವಾನಿಸಿದ್ದಾರೆ. ಇನ್ನು ಕ್ಷೇತ್ರದಲ್ಲಿ ಹಲವು ಮುಖಂಡರು ಜೆಡಿಎಸ್​ಗೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಬಂಡಾಯದ ಎಚ್ಚರಿಕೆ :

ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಗೊಂಡು ಚುನಾವಣೆಗೆ ಸ್ಪರ್ಧಿಸುವುದಕ್ಕೆ ಗುಬ್ಬಿ ತಾಲೂಕು ಕಾಂಗ್ರೆಸ್ ಘಟಕದಿಂದ ವಿರೋಧ ವ್ಯಕ್ತವಾಗಿದೆ. ಅಲ್ಲದೆ ಒಂದು ವೇಳೆ ಶ್ರೀನಿವಾಸ್ ಚುನಾವಣೆಗೆ ಸ್ಪರ್ಧಿಸಿದ್ದೇ ಆದರೆ ಅವರನ್ನು ಸೋಲಿಸುವ ಪಣತೊಟ್ಟಂತಿದೆ. ಈ ಮೂಲಕ ಶ್ರೀನಿವಾಸ್ ಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ ಬಂಡಾಯ ಫಿಕ್ಸ್ ಎನ್ನುವ ಎಚ್ಚರಿಕೆಯ ಸಂದೇಶವನ್ನು ಕೂಡಾ ರವಾನಿಸಿದ್ದಾರೆ. ಮಾನವೂ ಇಲ್ಲದ ಮೌಲ್ಯವೂ ಇಲ್ಲದ ಹತ್ತು ಮುಖದ ರಾಜಕಾರಣಿ. ಮುಖವಾಡ ಕಳಚೋಣ ಬನ್ನಿ ಎಂದು ಈ ಪೋಸ್ಟರ್ ಮೂಲಕ ಸಂದೇಶ ಸಾರಿದ್ದರು. ಪ್ರಸನ್ನ ಕುಮಾರ್ ಹಾಗೂ ಹೊನ್ನಗಿರಿ ಗೌಡ ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

Follow Us
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ