AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan Election Results 2023: ಹಾಸನದಲ್ಲಿ ಜೆಡಿಎಸ್​​ನ ಸ್ವರೂಪ್ ಭರ್ಜರಿ ಗೆಲುವು; ಪ್ರೀತಂ ಗೌಡಗೆ ಮುಖಭಂಗ

ಜೆಡಿಎಸ್ ಮತ್ತು ಕಾಂಗ್ರೆಸ್​ನ ಭದ್ರಕೋಟೆಯಾಗಿದ್ದ ಹಾಸನ ಕ್ಷೇತ್ರದಲ್ಲಿ  ಕಮಲ ಅರಳಿಸಿದ್ದೇ ಪ್ರೀತಂ ಗೌಡ. ಗೆದ್ದೇ ಗೆಲ್ಲುವೆ ಎಂಬ ನಿರೀಕ್ಷೆಯೂ ಅವರಿಗಿತ್ತು. ಆದರೆ ಚುನಾವಣಾ ಫಲಿತಾಂಶ ಪ್ರಕಟವಾದಾಗ ನಡೆದದ್ದೇ ಬೇರೆ. ಇಲ್ಲಿ ಸ್ವರೂಪ್  ಸುಮಾರು ಎಂಟು ಸಾವಿರ ಮತಗಳ ಅಂತರದಿಂದ ಗೆದ್ದಿದ್ದಾರೆ.

Hassan Election Results 2023: ಹಾಸನದಲ್ಲಿ ಜೆಡಿಎಸ್​​ನ ಸ್ವರೂಪ್ ಭರ್ಜರಿ ಗೆಲುವು; ಪ್ರೀತಂ ಗೌಡಗೆ ಮುಖಭಂಗ
ಸ್ವರೂಪ್
TV9 Web
| Edited By: |

Updated on:May 13, 2023 | 11:57 AM

Share

ಹಾಸನದಲ್ಲಿ ಜೆಡಿಎಸ್​​ನ (JDS) ಸ್ವರೂಪ್  (Swaroop) ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ  ದೇವೇಗೌಡರ  ಕುಟುಂಬಕ್ಕೆ ಚಾಲೆಂಜ್ ಹಾಕಿದ್ದ ಪ್ರೀತಂಗೌಡಗೆ (Preetham Gowda) ಮುಖಭಂಗ ಆಗಿದೆ. ಜೆಡಿಎಸ್ ಮತ್ತು ಕಾಂಗ್ರೆಸ್​ನ ಭದ್ರಕೋಟೆಯಾಗಿದ್ದ ಹಾಸನ ಕ್ಷೇತ್ರದಲ್ಲಿ  ಕಮಲ ಅರಳಿಸಿದ್ದೇ ಪ್ರೀತಂ ಗೌಡ. ಗೆದ್ದೇ ಗೆಲ್ಲುವೆ ಎಂಬ ನಿರೀಕ್ಷೆಯೂ ಅವರಿಗಿತ್ತು. ಆದರೆ ಚುನಾವಣಾ ಫಲಿತಾಂಶ ಪ್ರಕಟವಾದಾಗ ನಡೆದದ್ದೇ ಬೇರೆ. ಇಲ್ಲಿ ಸ್ವರೂಪ್  ಸುಮಾರು ಎಂಟು ಸಾವಿರ ಮತಗಳ ಅಂತರದಿಂದ ಗೆದ್ದಿದ್ದಾರೆ.

ಜೆಡಿಎಸ್​​ನಿಂದ  ಭವಾನಿ ರೇವಣ್ಣ ನಿಲ್ಲಲು ಬಯಸಿದ್ದರಾದರೂ ಎಚ್.ಪಿ. ಸ್ವರೂಪ್ ಅವರಿಗೆ ಟಿಕೆಟ್ ಕೊಡಲಾಗಿದೆ. ಮಾಜಿ ಜೆಡಿಎಸ್ ಶಾಸಕ ಎಚ್.ಎಸ್. ಪ್ರಕಾಶ್ ಅವರ ಮಗ ಸ್ವರೂಪ್. ಬಿಜೆಪಿಯ ಪ್ರೀತಂ ಗೌಡ ಅವರು ದೇವೇಗೌಡರ ಬಗ್ಗೆ ಹಗುರವಾಗಿ ಮಾತನಾಡಿದ್ದರು. ಇತ್ತ ದೇವೇಗೌಡರ ಕುಟುಂಬ  ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಗೆ ಬೆಂಬಲವಾಗಿ ನಿಂತಿದ್ದರಿಂದ  ಇಲ್ಲಿ ಜೆಡಿಎಸ್ ಗೆಲುವಿನ ನಗೆ ಬೀರಿದೆ.

ಹಾಸನ ವಿಧಾನಸಭಾ ಕ್ಷೇತ್ರದ ಚುನಾವಣೆ 2023 ಫಲಿತಾಂಶ

ಜೆಡಿಎಸ್: ಎಚ್.ಎ. ಸ್ವರೂಪ್- ಗೆಲುವು

ಬಿಜೆಪಿ: ಪ್ರೀತಂ ಗೌಡ

ಕಾಂಗ್ರೆಸ್: ರಂಗಸ್ವಾಮಿ

ಹಾಸನ ಕ್ಷೇತ್ರದ ಹಿಂದಿನ ಚುನಾವಣಾ ಇತಿಹಾಸ ನೋಡುವುದಾದರೆ 1957ರಿಂದ ಈಚೆ 2018ರವರೆಗೆ 14 ಚುನಾವಣೆಗಳು ಈ ಕ್ಷೇತ್ರದಲ್ಲಿ ನಡೆದಿವೆ. ಜೆಡಿಎಸ್ ಹಾಗೂ ಅದಕ್ಕೂ ಹಿಂದಿನ ಜನತಾ ಪಕ್ಷ ಅತಿ ಹೆಚ್ಚು ಬಾರಿ ಗೆದ್ದಿವೆ. ಕಾಂಗ್ರೆಸ್ 2 ಬಾರಿ ಗೆದ್ದಿದೆ. ಬಿಜೆಪಿ ಅಭ್ಯರ್ಥಿಗಳೂ ಎರಡು ಬಾರಿ ಗೆದ್ದಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಅಪ್ಡೇಟ್​  ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 11:25 am, Sat, 13 May 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್