AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆ ಕ್ಷಣದಲ್ಲಿ ಬಿಜೆಪಿಯಿಂದ ಮತ್ತೊಂದು ರಣತಂತ್ರ: ಹೊಳೆನರಸೀಪುರದಲ್ಲಿ ರೇವಣ್ಣ ವಿರುದ್ಧ ಪ್ರೀತಂಗೌಡ ಸ್ಪರ್ಧೆ?

ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನವಾಗಿ. ಈ ಕೊನೆ ಕ್ಷಣದಲ್ಲಿ ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಬಿಜೆಪಿ ಮತ್ತೊಂದು ರಣತಂತ್ರ ರೂಪಿಸಿದೆ. ಹೆಚ್​ಡಿ ರೇವಣ್ಣ ಠಕ್ಕರ್​ ನೀಡಲು ಬಿಜೆಪಿ ಮೆಗಾ ಪ್ಲಾನ್ ಮಾಡಿದೆ ಎಂದು ತಿಳಿದುಬಂದಿದೆ.

ಕೊನೆ ಕ್ಷಣದಲ್ಲಿ ಬಿಜೆಪಿಯಿಂದ ಮತ್ತೊಂದು ರಣತಂತ್ರ: ಹೊಳೆನರಸೀಪುರದಲ್ಲಿ ರೇವಣ್ಣ ವಿರುದ್ಧ ಪ್ರೀತಂಗೌಡ ಸ್ಪರ್ಧೆ?
ರಮೇಶ್ ಬಿ. ಜವಳಗೇರಾ
|

Updated on:Apr 20, 2023 | 12:11 PM

Share

ಮುಖ್ಯಾಂಶಗಳು

  • ಹಾಸನ ರೇವಣ್ಣ ಕುಟುಂಬ ಕ್ಕೆ ಬಿಗ್ ಶಾಕ್ ನೀಡ್ತಾರಾ ಪ್ರೀತಂಗೌಡ?
  • ಹೊಳೆನರಸೀಪುರದಿಂದ ಕಣಕ್ಕಿಳಿಯಲು ಸಜ್ಜಾದ್ರಾ ಪ್ರೀತಂಗೌಡ?
  • ಹೊಳೆನರಸೀಪುರದಲ್ಲಿ ನಾಮಿನೇಷನ್ ಮಾಡಬೇಕು ಎಂದು ಪ್ರಚಾರ ಕಾರ್ಯಕ್ರಮ ಬಿಟ್ಟು ತೆರಳಿದ ಪ್ರೀತಂಗೌಡ

ಹಾಸನ: ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಕೆಲ ಅಚ್ಚರಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಹಾಗೇ ಅಚ್ಚರಕರ ಪ್ರಯೋಗಳನ್ನು ಮಾಡುತ್ತಿದೆ. ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ವಿ.ಸೋಮಣ್ಣ ಹಾಗೂ ಕನಕಪುರದಲ್ಲಿ ಡಿಕೆ ಶಿವಕುಮಾರ್​ ವಿರುದ್ಧ ಆರ್.ಅಶೋಕ್​ ಅವರನ್ನು ಕಣಕ್ಕಿಸಿದೆ. ಇದೀಗ ಕೊನೆ ಕ್ಷಣದಲ್ಲಿ ಬಿಜೆಪಿ ಮತ್ತೊಂದು ರಣತಂತ್ರ ಹೆಣೆದಿದೆ. ಅದೇನೆಂದರೆ ಹಾಸನದ ಹೊಳೆನರಸೀಪುರ ಕ್ಷೇತ್ರದಲ್ಲಿ ಹೆಚ್​ಡಿ ರೇವಣ್ಣ ವಿರುದ್ಧ ಶಾಸಕ ಪ್ರೀತಂಗೌಡ ಅವರನ್ನು ಸ್ಪರ್ಧೆಗಿಳಿಸಿದೆ ಎನ್ನುವ ಸುದ್ದಿ ಕೇಳಿ ಬಂದಿದೆ. ಈಗಾಗಲೇ ಪ್ರೀತಂಗೌಡ ಹಾಸನದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಿನ್ನೆ (ಏಪ್ರಿಲ್ 19) ನಾಮಪತ್ರ ಸಲ್ಲಿಸಿದ್ದಾರೆ. ಇಂದು ಹೊಳೆನರಸೀಪುರ ಕ್ಷೇತ್ರಕ್ಕೂ ಸಹ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಕ್ಕೆ ಪೂರಕವೆಂಬಂತೆ ಚುನಾವಣಾ ಪ್ರಚಾರವನ್ನು ಬೇಗ ಮುಗಿಸಿ ಹೊಳೆನರಸೀಪುರದಲ್ಲಿ ನಾಮಿನೇಷನ್ ಮಾಡಬೇಕು ಎನ್ನುವ ಮಾತುಗಳನ್ನಾಡುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.

ಇದನ್ನೂ ಓದಿ: Karnataka Assembly Election: ಸ್ವರೂಪ್ ಕೂಡ ನನ್ನ ಮಗ: ಮುನಿಸು ಬದಿಗಿಟ್ಟು ಜೆಡಿಎಸ್ ಅಭ್ಯರ್ಥಿ ಬೆನ್ನಿಗೆ ನಿಂತ ದೊಡ್ಡಗೌಡರ ಸೊಸೆ

ಹೌದು….ಹಾಸನದ ಗುಡ್ಡೇನಹಳ್ಳಿ ಬಡಾವಣೆಯಲ್ಲಿ ಇಂದು(ಏಪ್ರಿಲ್ 20) ಬೆಳಗ್ಗೆ ಪ್ರಚಾರದ ವೇಳೆ ಕಾರ್ಯಕರ್ತ ರ ಜೊತೆ ಮಾತನಾಡಿದ ಪ್ರೀತಂಗೌಡ, ಹೊಳೆನರಸೀಪುರದಲ್ಲಿ ನಾಮಿನೇಷನ್ ಮಾಡಬೇಕು ಹಾಗಾಗಿ ಬೇಗ ಮುಗಿಸಿ ಎನ್ನುವ ಮಾತುಗಳನ್ನಾಡಿದ್ದಾರೆ. ಅಲ್ಲದೇ ಪ್ರಚಾರ ಕಾರ್ಯಕ್ರಮದಿಂದ ತರಾತುರಿಯಲ್ಲಿ ನಿರ್ಗಮಿಸಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರೀತಂಗೌಡ, ನಮ್ಮ ಪಕ್ಷದ ವರಿಷ್ಠರು ರಣತಂತ್ರ ಮಾಡಿದಾರೆ. ಆ ತಂತ್ರ ಏನೆಂದು 10.30ಕ್ಕೆ(ಇಂದು ಬೆಳಗ್ಗೆ) ಹೇಳುತ್ತೇನೆ. ನಾಮಪತ್ರ ಸಲ್ಲಿಸುವುದು ಖಚಿತ. ಕಾದು ನೋಡಿ ಎಂದು ಹೇಳುವ ಮೂಲಕ ವಿಷಯವನ್ನು ನಿಗೂಢವಾಗಿ ಕಾಪಾಡಿಕೊಳ್ಳುತ್ತಲೇ ಮತ್ತಷ್ಟು ಕುತೂಹಲ ಹೆಚ್ಚಿಸಿದ್ದಾರೆ.

ಈಗಾಗಲೇ ಬಿಜೆಪಿ ಮೊದಲ ಪಟ್ಟಿಯಲ್ಲಿ ದೇವರಾಜೇಗೌಡ ಅವರ ಹೆಸರನ್ನು ಹೊಳೆನರಸೀಪುರ ಕ್ಷೇತ್ರಕ್ಕೆ ಪ್ರಕಟಿಸಿತ್ತು. ಆದ್ರೆ, ಅದೇನಾಯ್ತೋ ಏನೋ ಹಾಸನ ಜಿಲ್ಲಾ ರಾಜಕೀಯದಲ್ಲಿ ದಿಢೀರ್ ಮಹತ್ವ ರಾಜಕೀಯ ಬೆಳವಣಿಗೆ ನಡೆದಿದ್ದು, ಅಂತಿಮವಾಗಿ ರೇವಣ್ಣ ವಿರುದ್ಧ ಪ್ರತೀಂಗೌಡ ಅವರನ್ನು ಕಣಕ್ಕಿಳಿಸುವ ತಂತ್ರಗಳು ನಡೆದಿವೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:29 am, Thu, 20 April 23

Follow Us
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್