ಸಿಂಹಾಸನ ಗೆಲ್ಲಲು ಅಖಾಡಕ್ಕಿಳಿದ ದಳಪತಿಗಳು: ಹಾಸನ ಕ್ಷೇತ್ರದಲ್ಲಿಂದು ದೇವೇಗೌಡ ಕುಟುಂಬದ ಶಕ್ತಿ ಪ್ರದರ್ಶನ

ಹಾಸನ ಅಖಾಡದಲ್ಲಿ ದಳ ಪಾಳೆಯ ಒಗ್ಗಟ್ಟು ಪ್ರದರ್ಶನ ಮಾಡಿದೆ. ಟಿಕೆಟ್​​ಗಾಗಿ ಸ್ವರೂಪ್​ ಜೊತೆ ಜಟಾಪಟಿ ನಡೆಸುತ್ತಿದ್ದ ಭವಾನಿ ರೇವಣ್ಣ ಕಂಪ್ಲೀಟ್ ವರಸೆ ಬದಲಾಯಿಸಿ ಸ್ವರೂಪ್ ಪರ ನಿಂತಿದ್ದಾರೆ.

ಸಿಂಹಾಸನ ಗೆಲ್ಲಲು ಅಖಾಡಕ್ಕಿಳಿದ ದಳಪತಿಗಳು: ಹಾಸನ ಕ್ಷೇತ್ರದಲ್ಲಿಂದು ದೇವೇಗೌಡ ಕುಟುಂಬದ ಶಕ್ತಿ ಪ್ರದರ್ಶನ
ಹಾಸನ ಕ್ಷೇತ್ರದಲ್ಲಿಂದು ದೇವೇಗೌಡ ಕುಟುಂಬದ ಶಕ್ತಿ ಪ್ರದರ್ಶನ
Follow us
|

Updated on:Apr 20, 2023 | 7:29 AM

ಹಾಸನ: ಕರ್ನಾಟಕ ವಿಧಾನಸಭಾ ಚುನಾವಣೆ(Karnataka Assembly Elections 2023) ಹಾಸನ ಜೆಡಿಎಸ್ ಟಿಕೆಟ್(Hassan JDS Ticket) ಗೊಂದಲದ ಗೂಡಾಗಿತ್ತು. ಈ ಟಿಕೆಟ್​ಗಾಗಿ ಹೆಚ್​ಡಿ ದೇವೇಗೌಡರ(HD Deve Gowda) ಕುಟುಂಬದಲ್ಲಿ ಬಿರುಕು ಬಿಟ್ಟಿತ್ತು. ತಮ್ಮ ಹೆಂಡತಿ ಭವಾನಿ ರೇವಣ್ಣರನ್ನು ಸ್ಪರ್ಧೆಗೆ ಇಳಿಸಬೇಕು ಎಂದು ಹೆಚ್​ಡಿ ರೇವಣ್ಣ ಪಟ್ಟು ಹಿಡಿದಿದ್ದರು. ಆದ್ರೆ ಹೆಚ್​ಡಿ ಕುಮಾರಸ್ವಾಮಿ ಅವರು ಸ್ವರೂಪ್ ಮೇಲೆ ಒಲವು ತೋರಿಸಿದ್ದರು. ಹೀಗಾಗಿ ಇಬ್ಬರು ಸ್ಪರ್ಧಿಗಳ ನಡುವೆ ಜಟಾಪಟಿ ನಡೆಯುತ್ತಿತ್ತು. ಸದ್ಯ ಈಗ ಹಾಸನ ಜೆಡಿಎಸ್ ಟಿಕೆಟ್​​ನ್ನು ಸ್ವರೂಪ್​ ಅವರಿಗೆ ನೀಡಲಾಗಿದ್ದು ಎಲ್ಲಾ ಕೋಪವನ್ನು ಬಿಟ್ಟು ಹೆಚ್​ಡಿ ರೇವಣ್ಣ ಹಾಗೂ ಭವಾನಿಯವರು ಸ್ವರೂಪ್ ಪರ ಪ್ರಚಾರ ಮಾಡಲು ಅಖಾಡಕ್ಕೆ ಇಳಿದಿದ್ದಾರೆ. ಇಂದು ಸ್ವರೂಪ್ ನಾಮಪತ್ರ ಸಲ್ಲಿಸಲಿದ್ದು ಕ್ಷೇತ್ರದಲ್ಲಿಂದು ಗೌಡರ ಕುಟುಂಬದ ಶಕ್ತಿ ಪ್ರದರ್ಶನವಾಗಲಿದೆ.

ಹಾಸನ ಅಖಾಡದಲ್ಲಿ ದಳ ಪಾಳೆಯ ಒಗ್ಗಟ್ಟು ಪ್ರದರ್ಶನ ಮಾಡಿದೆ. ಟಿಕೆಟ್​​ಗಾಗಿ ಸ್ವರೂಪ್​ ಜೊತೆ ಜಟಾಪಟಿ ನಡೆಸುತ್ತಿದ್ದ ಭವಾನಿ ರೇವಣ್ಣ ಕಂಪ್ಲೀಟ್ ವರಸೆ ಬದಲಾಯಿಸಿ ಸ್ವರೂಪ್ ಪರ ನಿಂತಿದ್ದಾರೆ. ನಿನ್ನೆ(ಏಪ್ರಿಲ್ 19) ಹಾಸನದಲ್ಲಿ ನಡೆದ ಜೆಡಿಎಸ್​ ಸಭೆಯಲ್ಲಿ ಅಭ್ಯರ್ಥಿ ಸ್ವರೂಪ್ ಪರ ಭವಾನಿ ಪ್ರಚಾರ ಮಾಡಿದ್ರು. ಭವಾನಿ ಅವರು ಮಾತಿಗೆ ನಿಲ್ಲುತ್ತಿದ್ದಂತೆ ಪಕ್ಕದಲ್ಲೇ ನಿಂತ ಸ್ವರೂಪ್​, ಕಾಲಿಗೆ ಬಿದ್ದು ಆರ್ಶಿವಾದ ಪಡೆದಿದ್ರು. ಸದ್ಯ ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು ಸ್ವರೂಪ್ ನಾಮಪತ್ರ ಸಲ್ಲಿಸಲಿದ್ದಾರೆ. ಜೊತೆಗೆ ಕ್ಷೇತ್ರದಲ್ಲಿಂದು ಗೌಡರ ಕುಟುಂಬದ ಶಕ್ತಿ ಪ್ರದರ್ಶನವಾಗಲಿದೆ. ಅಭ್ಯರ್ಥಿ ಸ್ವರೂಪ್ ಗೆಲ್ಲಿಸಲು ಗೌಡರ ಇಡೀ ಕುಟುಂಬ ಅಖಾಡಕ್ಕಿಳಿಯಲಿದೆ.

ಇದನ್ನೂ ಓದಿ: Karnataka Assembly Polls; ಸ್ವರೂಪ್ ಕೂಡ ನನ್ನ ಮಗ, ಅವನನ್ನು ಹಾಸನ ಮತದಾರರು ಗೆಲ್ಲಿಸಲೇಬೇಕು: ಭವಾನಿ ರೇವಣ್ಣ

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ನೇತೃತ್ವದಲ್ಲಿ ಇಂದು ರೋಡ್ ಶೋ‌ ಮೂಲಕ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ನಾಮ ಪತ್ರ ಸಲ್ಲಿಸಲಿದ್ದಾರೆ. ರೋಡ್ ಶೋ‌ನಲ್ಲಿ ಹೆಚ್​ಡಿ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ, ಶಾಸಕ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ಭವಾನಿ ರೇವಣ್ಣ ಭಾಗಿಯಾಗಿ ಒಗ್ಗಟ್ಟಿನ ಪ್ರದರ್ಶನ ಮಾಡಲಿದ್ದಾರೆ. ಈ ಮೂಲಕ ಬಿಜೆಪಿಗೆ ಸೆಡ್ಡು ಹೊಡೆಯಲು ದಳಪತಿಗಳು ಸಜ್ಜಾಗಿದ್ದಾರೆ. ಸಾವಿರಾರು ಜನ ಸೇರಿಸಿ ಬಿಜೆಪಿ ಶಾಸಕ ಪ್ರೀತಂ ಗೌಡ ವಿರುದ್ಧ ರಣ ಕಹಳೆ ಮೊಳಗಿಸಲಿದ್ದಾರೆ.

ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:21 am, Thu, 20 April 23

ತಾಜಾ ಸುದ್ದಿ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ