AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನ ಆರೋಗ್ಯ ಸರಿ ಇಲ್ಲದ ಕಾರಣ ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಖುದ್ದು ಅಖಾಡಕ್ಕಿಳಿದ ಹೆಚ್​ಡಿ ದೇವೇಗೌಡ

ಮಗನ ಅನಾರೋಗ್ಯದ ಹಿನ್ನೆಲೆ ತಮ್ಮ ಆರೋಗ್ಯ ಲೆಕ್ಕಿಸದೆ ಹೆಚ್​ಡಿ ದೇವೇಗೌಡ್ರು ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ. ನಿನ್ನೆ(ಏಪ್ರಿಲ್ 23) ಪದ್ಮನಾಭನಗರ, ಇಂದು ತುಮಕೂರು ಜಿಲ್ಲೆ ಶಿರಾ, ಕೊರಟಗೆರೆ, ಮಧುಗಿರಿಯಲ್ಲಿ ಹಾಗೂ ನಾಳೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಹುಣಸೂರು, ಕೆಆರ್ ನಗರದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.

ಆಯೇಷಾ ಬಾನು
ಆಯೇಷಾ ಬಾನು|

Updated on:Apr 24, 2023 | 12:19 PM

Share

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಕೆಲವೇ ದಿನಗಳು ಬಾಕಿ ಇವೆ. ಹೀಗಾಗಿ ರಾಜ್ಯ ರಾಜಕಾರಣ ರಂಗೇರಿದೆ. ಕಾಂಗ್ರೆಸ್(Congress), ಬಿಜೆಪಿಯ(BJP) ರಾಷ್ಟ್ರ ನಾಯಕರು ರಾಜ್ಯಕ್ಕೆ ಆಗಮಿಸಿ ಭರ್ಜರಿ ಪ್ರಕಾರ ನಡೆಸುತ್ತಿದ್ದಾರೆ. ಆದ್ರೆ ಮತ್ತೊಂದೆಡೆ ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ಜೆಡಿಎಸ್​ಗೆ ಭಾರೀ ಹಿನ್ನಡೆಯಾದಂತಿದೆ. ಹೀಗಾಗಿ ಖುದ್ದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ(HD Deve Gowda) ಅಖಾಡಕ್ಕಿಳಿದಿದ್ದಾರೆ. ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಪಕ್ಷಕ್ಕಾಗಿ ಪ್ರಚಾರ ಮಾಡಲು ಮುಂದಾಗಿದ್ದಾರೆ.

ಮಗನ ಅನಾರೋಗ್ಯದ ಹಿನ್ನೆಲೆ ತಮ್ಮ ಆರೋಗ್ಯ ಲೆಕ್ಕಿಸದೆ ಹೆಚ್​ಡಿ ದೇವೇಗೌಡ್ರು ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ. ನಿನ್ನೆ(ಏಪ್ರಿಲ್ 23) ಪದ್ಮನಾಭನಗರ, ಇಂದು ತುಮಕೂರು ಜಿಲ್ಲೆ ಶಿರಾ, ಕೊರಟಗೆರೆ, ಮಧುಗಿರಿಯಲ್ಲಿ ಹಾಗೂ ನಾಳೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಹುಣಸೂರು, ಕೆಆರ್ ನಗರದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ತೀವ್ರ ಜ್ವರದಿಂದ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದು ಕುಮಾರಸ್ವಾಮಿ ಅನುಪಸ್ಥಿತಿಯಲ್ಲಿ ತಾವೇ ಖುದ್ದು ಪ್ರಚಾರಕ್ಕೆ ತೆರಳುತ್ತಿದ್ದಾರೆ. ಹೆಚ್​ಡಿ ಕುಮಾರಸ್ವಾಮಿ ಪ್ರಚಾರಕ್ಕೆ ಹೋಗದಿದ್ದರೆ ಚುನಾವಣೆ ಹೊಸ್ತಿಲಲ್ಲಿ ಪಕ್ಷಕ್ಕೆ ಭಾರಿ ಹೊಡೆತ ಬೀಳಲಿದೆ. ಹೀಗಾಗಿ ನಾನೆ ಪ್ರಚಾರಕ್ಕೆ ಹೋಗುತ್ತೇನೆ ಎಂದು ಹೆಚ್​ಡಿ ದೇವೇಗೌಡ್ರು ನಿನ್ನೆಯಿಂದ ಮತ ಶಿಕಾರಿ ಆರಂಭಿಸಿದ್ದಾರೆ.

ಇದನ್ನೂ ಓದಿ: ಅನಾರೋಗ್ಯದ ನಡುವೆಯೂ ಆಸ್ಪತ್ರೆಯಿಂದಲೇ ಹೆಚ್​ಡಿ ಕುಮಾರಸ್ವಾಮಿ ಚುನಾವಣಾ ರಣತಂತ್ರ

ಈಗಾಗಲೇ ಅನಾರೋಗ್ಯದಿಂದ ಬಳಲುತ್ತಿರುವ ಗೌಡರಿಗೆ ಪ್ರಚಾರಕ್ಕೆ ಹೋಗದಂತೆ ವೈದ್ಯರು ಸಲಹೆ ನೀಡಿದ್ದಾರೆ. ಆದರೆ ಕುಮಾರಸ್ವಾಮಿಗೋಸ್ಕರ ವೈದ್ಯರ ತಂಡದೊಂದಿಗೆ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಪಕ್ಷವನ್ನ ಸ್ವತಂತ್ರವಾಗಿ ಅಧಿಕಾರಕ್ಕೆ ತರಲು ಮಗ ಕುಮಾರಸ್ವಾಮಿಗೆ ತಂದೆ ಹೆಚ್​ಡಿ ದೇವೇಗೌಡರು ಬೆನ್ನಿಗೆ ನಿಂತಿದ್ದಾರೆ.

ತುಮಕೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಮತಬೇಟೆ

ಶಿರಾ, ಮಧುಗಿರಿ, ಕೊರಟಗೆರೆ ಕ್ಷೇತ್ರದಲ್ಲಿ ಜೆಡಿಎಸ್​​ ಅಭ್ಯರ್ಥಿಗಳ ಪರ H.D.ದೇವೇಗೌಡರು ಪ್ರಚಾರ ನಡೆಸಲಿದ್ದಾರೆ. ಹೀಗಾಗಿ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಮಠಕ್ಕೆ ಹೆಚ್​ಡಿಡಿ ಭೇಟಿ ನೀಡಿದ್ದು ನಂಜಾವಧೂತಶ್ರೀ ಭೇಟಿಯಾಗಿ ಆಶೀರ್ವಾದ ಪಡೆದ್ರು. ಮಠದ ಶ್ರೀ ಓಂಕಾರೇಶ್ವರ ಸನ್ನಿದಿಯಲ್ಲಿ ಸತತ ಒಂದು ಗಂಟೆಗೂ ಅಧಿಕ ಕಾಲ‌ ಪೂಜೆಯಲ್ಲಿ ತೊಡಗಿದ್ರು. ಗುರುಗುಂಡಾ ಬ್ರಹ್ಮೇಶ್ವರ ಮಠದ ಓಂಕಾರೇಶ್ವರ ಸ್ವಾಮಿ ದೇವರ ಪೂಜೆ ವೇಳೆ ಓಂಕಾರೇಶ್ವರ ಸ್ವಾಮಿ ತಲೆ‌ ಮೇಲಿಂದ ಹೂ ಬಿದ್ದಿದೆ. ಪೂಜೆ ಬಳಿಕ ನಂಜಾವದೂತ ಸ್ವಾಮಿಜಿ ಜೊತೆ ಮಠದ ಕೊಠಡಿಯಲ್ಲಿ ಹೆಚ್​ಡಿ ದೇವೇಗೌಡ್ರು ಮಾತುಕತೆ ನಡೆಸಿದ್ದಾರೆ.

ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:18 pm, Mon, 24 April 23

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ