AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ಸಮಸ್ಯೆ ಹಿನ್ನೆಲೆ ಹೆಚ್​ಡಿ ದೇವೇಗೌಡ ತೆರಳುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಮಾಜಿ ಪ್ರದಾನಿ ಹೆಚ್​ಡಿ ದೇವೇಗೌಡ ಅವರು ತೆರಳುತ್ತಿದ್ದ ಹೆಲಿಕಾಪ್ಟರ್ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದ್ದು, ತುರ್ತು ಭೂಸ್ಪರ್ಶ ಮಾಡಿರುವಂತಹ ಘಟನೆ ಜಿಲ್ಲೆಯ ಸಕಲೇಶಪುರದ ತಾಲೂಕು ಕ್ರೀಡಾಂಗಣದಲ್ಲಿ ನಡೆದಿದೆ. 

ತಾಂತ್ರಿಕ ಸಮಸ್ಯೆ ಹಿನ್ನೆಲೆ ಹೆಚ್​ಡಿ ದೇವೇಗೌಡ ತೆರಳುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ತುರ್ತು ಭೂಸ್ಪರ್ಶವಾದ ದೇವೇಗೌಡ ತೆರಳುತ್ತಿದ್ದ ಹೆಲಿಕಾಪ್ಟರ್
ಗಂಗಾಧರ​ ಬ. ಸಾಬೋಜಿ
|

Updated on:May 04, 2023 | 5:14 PM

Share

ಹಾಸನ: ಮಾಜಿ ಪ್ರದಾನಿ ಹೆಚ್​ಡಿ ದೇವೇಗೌಡ (HD Deve Gowda) ಅವರು ತೆರಳುತ್ತಿದ್ದ ಹೆಲಿಕಾಪ್ಟರ್ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿರುವಂತಹ ಘಟನೆ ಜಿಲ್ಲೆಯ ಸಕಲೇಶಪುರದ ತಾಲೂಕು ಕ್ರೀಡಾಂಗಣದಲ್ಲಿ ನಡೆದಿದೆ. ಮೇಲೆ ಹಾರಿದ್ದ ಹೆಲಿಕಾಪ್ಟರ್​​ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಕಾರಣ ಪೈಲೆಟ್​ ಕೆಳಗಿಳಿಸಿದ್ದಾರೆ. ಬಳಿಕ ಸಮಸ್ಯೆ ಸರಿಪಡಿಸಿ ಮತ್ತೆ ತೆರಳಲಾಗಿದೆ. ಹೆಲಿಕಾಪ್ಟರ್‌ನಲ್ಲಿ ಹೆಚ್‌ಡಿ ದೇವೇಗೌಡ, JDS ರಾಜ್ಯಾಧ್ಯಕ್ಷ ಇಬ್ರಾಹಿಂ ಜೆಡಿಎಸ್ ಅಭ್ಯರ್ಥಿ ಪ್ರಯಾಣಿಸಿದ್ದು, ಎಚ್.ಕೆ.ಕುಮಾರಸ್ವಾಮಿ ಪರ ಮತಯಾಚಿಸಿ ಸಕಲೇಶಪುರದಿಂದ ಅರಕಲಗೂಡಿಗೆ ತೆರಳುತ್ತಿದ್ದರು.

ಡಿಕೆ ಶಿವಕುಮಾರ್​ ಬಂದಿಳಿದ ಹೆಲಿಪ್ಯಾಡ್​​​ ಬಳಿ ಬೆಂಕಿ 

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಸಂಚರಿಸುತ್ತಿದ್ದ ಹೆಲಿಕಾಪ್ಟರ್​ಗೆ ಹದ್ದು ಡಿಕ್ಕಿಯಾದ ಘಟನೆ ಇನ್ನೂ ಹಸಿಯಾಗಿರುವಾಗಲೇ ಅವರು ಬಂದಿಳಿದ ಹೆಲಿಪ್ಯಾಡ್​​​ ಬಳಿ ಬೆಂಕಿ ಕಾಣಿಸಿಕೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಮತೀರ್ಥ ಬಳಿಯ ಹೆಲಿಪ್ಯಾಡ್​ನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ. ಮೈಸೂರಿನಿಂದ ಹೊನ್ನಾವರಕ್ಕೆ ಹೆಲಿಕಾಪ್ಟರ್​​ನಲ್ಲಿ ತೆರಳಿದ್ದ ಶಿವಕುಮಾರ್ ಅವರು ರಾಮತೀರ್ಥದ ಹೆಲಿಪ್ಯಾಡ್​ಗೆ ಬಂದಿಳಿದಿದ್ದರು.

ಇದನ್ನೂ ಓದಿ: Honnavar: ಡಿಕೆ ಶಿವಕುಮಾರ್​ ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದಾಗ ಹೆಲಿಪ್ಯಾಡ್​​​ನಲ್ಲಿ ಬೆಂಕಿ; ತಪ್ಪಿದ ದುರಂತ

ಈ ವೇಳೆ, ಹೆಲಿಪ್ಯಾಡ್​ನ ಬಳಿಯ ಹುಲ್ಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೆಲಿಕಾಪ್ಟರ್​ಗೆ ಸಿಗ್ನಲ್​​ ಕೊಡುವ ಸ್ಮೋಕ್​ ಕ್ಯಾಂಡಲ್​ನಿಂದ ಬೆಂಕಿ ಆವರಿಸಿದೆ ಎಂದು ಹೇಳಲಾಗುತ್ತಿದೆ. ಹುಲ್ಲಿಗೆ ಹೊತ್ತಿಕೊಂಡ ಬೆಂಕಿಯನ್ನು ಕೂಡಲೇ ಸಿಬ್ಬಂದಿ ಆರಿಸಿದ್ದು, ಸಂಭಾವ್ಯ ದುರಂತ ತಪ್ಪಿದೆ.

ಕಾಂಗ್ರೆಸ್​ ಸೋಲುವ ಸಂಕೇತವಾ?

ಮಂಗಳವಾರ ಡಿಕೆ ಶಿವಕುಮಾರ್ ಅವರು ಜಕ್ಕೂರು ವಿಮಾನ ನಿಲ್ದಾಣದಿಂದ ಮುಳಬಾಗಿಲಿಗೆ ತೆರಳುತ್ತಿದ್ದಾಗ ಹೆಲಿಕಾಪ್ಟರ್​ಗೆ ಹದ್ದು ಡಿಕ್ಕಿ ಹೊಡೆದಿತ್ತು. ಪರಿಣಾಮವಾಗಿ ಹೆಲಿಕಾಪ್ಟರ್​ ಮುಂಭಾಗದ ಗಾಜು ಪುಡಿಪುಡಿಯಾಗಿತ್ತು. ಅದೃಷ್ಟವಶಾತ್​ ಹೆಲಿಕಾಪ್ಟರ್​ನಲ್ಲಿದ್ದವರಿಗೆ ಯಾವುದೇ ಹಾನಿಯಾಗಿರಲಿಲ್ಲ. ಘಟನೆ ಬಳಿಕ ಬಜರಂಗದಳ ನಿಷೇಧಿಸುವುದಾಗಿ ಹೇಳಿದ ಒಂದೇ ಗಂಟೆಯಲ್ಲಿ ಜಟಾಯು ತಕ್ಕ ಪಾಠ ಕಲಿಸಿದ್ದಾನೆ. ಇದು ರಾಮ-ಹನುಮನ ಕೋಪ ಎನ್ನಲಾಗಿತ್ತು. ಮತ್ತೊಂದೆಡೆ ಮುಂದಿನ ಚುನಾವಣೆಯಲ್ಲಿ ಸರ್ಕಾರ ಸೋಲುವುದಕ್ಕೆ ಇದು ಸಂಕೇತ ಎನ್ನುವ ಮಾತುಗಳು ಹರಿದಾಡುತ್ತಿವೆ.

ಇದನ್ನೂ ಓದಿ: ಹನುಮಂತನಿಗೆ ಉಪದ್ರವ ಮಾಡಿದ್ದಕ್ಕೆ ಹೆಲಿಕಾಪ್ಟರ್​​ ಗ್ಲಾಸ್​ ಹೋಯ್ತು, ಮತ್ತೆ ತಂಟೆಗೆ ಬಂದ್ರೆ ಮಿಸ್ಟರ್​​ ಶಿವಕುಮಾರ್ ನೀವೂ ಪತನವಾಗಲಿದ್ದೀರಿ- ಯತ್ನಾಳ್​ ಕಿವಿಮಾತು​​

ಬಿಜೆಪಿ ಪ್ರಚಾರ ವಾಹನದ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಲ್ಲು ತೂರಾಟ ಆರೋಪ

ರಾಯಚೂರು: ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಾಗ ಮೈಸೂರು, ತುಮಕೂರು ಭಾಗದಲ್ಲಿ ಕಲ್ಲು ತೂರಾಟಗಳಾದ ಬೆನ್ನಲ್ಲೆ ಇದೀಗ ರಾಯಚೂರಿನಲ್ಲಿಯೂ ಕಲ್ಲು ತೂರಾಟವಾಗಿತ್ತು. ಜಿಲ್ಲೆಯ ಸಿಂಧನೂರು ತಾಲೂಕಿನ ಮಸ್ಕಿ ವಿಧಾನಸಭಾ ಕ್ಷೇತ್ರದ ತುರ್ವಿಹಾಳ ಪಟ್ಟಣದಲ್ಲಿ ಬಿಜೆಪಿ ಪ್ರಚಾರ ವಾಹನದ ಮೇಲೆ ಕಾಂಗ್ರೆಸ್​ ಕಾರ್ಯಕರ್ತರಿಂದ ಕಲ್ಲು ತೂರಾಟ ಆರೋಪ ಕೇಳಿಬಂದಿತ್ತು.

ಏ.28 ಬೆಳಿಗ್ಗೆಯಿಂದ ಕ್ರುಸರ್ ವಾಹನದ ಮೂಲಕ ಬಿಜೆಪಿ ಕಾರ್ಯಕರ್ತರು ಮಸ್ಕಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರ ಪ್ರಚಾರ ಮಾಡುತ್ತಿದ್ದು, ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಬೆಂಬಲಿಗರಿಂದ ಕ್ರುಸರ್ ವಾಹನದ ಗಾಜು ಒಡೆದು ಅಟ್ಟಹಾಸ ಮೆರೆದಿರುವ ಆರೋಪ ಕೇಳಿಬಂದಿತ್ತು. ತುರ್ವಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:47 pm, Thu, 4 May 23

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK