AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ ಹೊಡೆಯುತ್ತಾ ಎಂದು ಟಿಕೆಟ್​ ಆಕಾಂಕ್ಷಿ ಬಳಿ ಕೇಳಿತ್ತಾ ಪರೋಕ್ಷವಾಗಿ ಅರಸೀಕೆರೆ ಜೆಡಿಎಸ್ ಅಭ್ಯರ್ಥಿ ಹೆಸರು ಘೋಷಿಸಿದ ಹೆಚ್​ಡಿಕೆ

ಅರಸೀಕೆರೆ ಕ್ಷೇತ್ರದ ಹಾಲಿ ಶಾಸಕ ಕೆ ಎಂ ಶಿವಲಿಂಗೇಗೌಡ ಜೆಡಿಎಸ್​ ಕಾರ್ಯಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡು ಒಂದು ಕಾಲು ಹೊರಗಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಲಿಂಗೇಗೌಡ ಅವರಿಗೆ ಪರ್ಯಾಯ ಅಭ್ಯರ್ಥಿಯನ್ನು ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

ಲಕ್ ಹೊಡೆಯುತ್ತಾ ಎಂದು ಟಿಕೆಟ್​ ಆಕಾಂಕ್ಷಿ ಬಳಿ ಕೇಳಿತ್ತಾ ಪರೋಕ್ಷವಾಗಿ ಅರಸೀಕೆರೆ ಜೆಡಿಎಸ್ ಅಭ್ಯರ್ಥಿ ಹೆಸರು ಘೋಷಿಸಿದ ಹೆಚ್​ಡಿಕೆ
ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ
TV9 Web
| Edited By: |

Updated on:Feb 12, 2023 | 6:48 PM

Share

ಹಾಸನ: ಜಿಲ್ಲೆಯ ಅರಸೀಕೆರೆ ಹಾಗೂ ಹಾಸನ(Hassan) ಕ್ಷೇತ್ರಗಳ ವಿಧಾನಸಭೆ ಚುನಾವಣೆ ಟಿಕೆಟ್ ವಿಚಾರವಾಗಿ ದಳಪತಿಗಳ ಮಧ್ಯೆ ನಡೆಯುತ್ತಿರುವ ಫೈಟ್ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದೆ. ಇಂದು(ಫಬ್ರವರಿ 12) ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಹಾಸನ ಜಿಲ್ಲಾ ಪ್ರವಾಸ ಕೈಗೊಂಡು ಎಲ್ಲಾ ಗೊಂದಲಗಳಿಗೆ ತೆರೆಳೆದಿದ್ದಾರೆ. ಹಾಸನ ಟಿಕೆಟ್​ ವಿಚಾರವಾಗಿ ಕುಮಾರಸ್ವಾಮಿ ವಿರುದ್ಧ ತೊಡೆತಟ್ಟಿದ್ದ ರೇವಣ್ಣ ಕುಟುಂಬ ಶಾಂತವಾಗಿದ್ದು, ಅಂತಿಮವಾಗಿ ಕುಮಾರಸ್ವಾಮಿ ನಿರ್ಧಾರಕ್ಕೆ ಬದ್ಧವಾಗಿದೆ. ಇನ್ನು ಕುಮಾರಸ್ವಾಮಿ ಪರೋಕ್ಷವಾಗಿ ಅರಸೀಕೆರೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಇದರೊಂದಿಗೆ ಅರಸೀಕೆರೆ ಕಣದ ಟಿಕೆಟ್ ಗೊಂದಲಕ್ಕೆ ಅಂತ್ಯ ಹಾಡಿದ್ದಾರೆ. ಆದ್ರೆ, ಹಾಸನ ಟಿಕೆಟ್​ ಮಾತ್ರ ಇನ್ನೂ ನಿಗೂಢವಾಗಿ ಇಟ್ಟಿದ್ದಾರೆ.

ಇದನ್ನೂ ಓದಿ: ನನ್ನ ಮುಂದಿನ ನಡೆ ಕ್ಷೇತ್ರದ ಮತದಾರರು ತೀರ್ಮಾನಿಸುತ್ತಾರೆ: ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ

ಹೌದು…ಹಾಸನ ಹಾಗೂ ಅರಸೀಕೆರೆ ವಿಧಾನಸಭೆ ಟಿಕೆಟ್​ ಫೈಟ್ ಜೋರಾದ ಹಿನ್ನೆಲೆಯಲ್ಲಿ ಸ್ವತಃ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ ಅವರು ಇಂದು (ಫೆಬ್ರವರಿ 12) ಹಾಸನ ಜಿಲ್ಲಾ ಪ್ರವಾಸ ಕೈಗೊಂಡು, ಅರಸೀಕೆರೆಯಲ್ಲಿ ಬೃಹತ್ ಸಮಾವೇಶ ಮಾಡಿದರು. ಈ ಮೂಲಕ ಶಕ್ತಿ ಪ್ರದರ್ಶನ ಮಾಡಿ ಸ್ವಪಕ್ಷದ ಹಾಲಿ ಶಾಸಕ ಶಿವಲಿಂಗೇಗೌಡ ವಿರುದ್ಧ ಸಮರ ಸಾರಿದರು. ಅಲ್ಲದೇ ಈ ಸಮಾವೇಶದಲ್ಲಿ ಬಾಣಾವರ ಅಶೋಕ್ ಅವರನ್ನು ಪರೋಕ್ಷವಾಗಿ ಅರಸೀಕೆರೆ ಜೆಡಿಎಸ್ ಅಭ್ಯರ್ಥಿ ಎಂದು ಘೋಷಿಸಿದರು. ಸಮಾವೇಶದಲ್ಲಿ ಭಾಷಣ ಮಾಡುತ್ತಿದ್ದಾಗ ತಮ್ಮ ಪಕ್ಕದಲ್ಲಿ ನಿಂತಿದ್ದ ಅಶೋಕ್ ರತ್ತ ತಿರುಗಿ ಲಕ್ ಹೊಡೆಯುತ್ತಾ ಎಂದು ಹೇಳಿದರು. ಈ ಮೂಲಕ ಪರೋಕ್ಷವಾಗಿ ಕುಮಾರಸ್ವಾಮಿ ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಣಾವರ ಅಶೋಕ್​ಗೆ ಟಿಕೆಟ್​ ಎಂದರು. ಇದರೊಂದಿಗೆ ಹಾಲಿ ಜೆಡಿಎಸ್​ ಶಾಸಕ ಶಿವಲಿಂಗೇಗೌಡ ಅವರಿಗೆ ಶಾಕ್ ಕೊಟ್ಟು ಅರಸೀಕೆರೆ ಟಿಕೆಟ್​ ಗೊಂದಲಗಳಿಗೆ ಹೆಚ್​ಡಿಕೆ ಪೂರ್ಣವಿರಾಮ ಇಟ್ಟರು.

ಪರೋಕ್ಷವಾಗಿ ಅಶೋಕ್​ ಅರಸೀಕೆರೆ ಅಭ್ಯರ್ಥಿ ಎಂದು ಹೆಚ್​ಡಿಕೆ ಘೋಷಣೆ ಮಾಡಿದ್ದು, ಇದೀಗ ಶಿವಲಿಂಗೇಗೌಡ ಅವರು ಕಾಂಗ್ರೆಸ್ ಸೇರ್ತಾರಾ? ಅಥವಾ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತಾರಾ? ಎನ್ನುವುದೇ ಕಾದುನೋಡಬೇಕಿದೆ. ಮೂಲಗಳ ಪ್ರಕಾರ ಶಿವಲಿಂಗೇಗೌಡ ಅವರು ಕಾಂಗ್ರೆಸ್​ ಸೇರುವ ಸಾಧ್ಯತೆಗಳು ಹೆಚ್ಚಿವೆ ಎನ್ನಲಾಗಿದೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, 3 ವರ್ಷಗಳಿಂದ ಪಕ್ಷದ ಸಂಘಟನೆಯಲ್ಲಿ ಭಾಗವಹಿಸಿಲ್ಲ. ಹೀಗಾಗಿ ಅಲ್ಟರ್​ನೇಟಿವ್ ನಾವು ಮಾಡಲೇ ಬೇಕಲ್ಲ. ಪ್ರತ್ಯೇಕವಾಗಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಪಕ್ಷದ ಚಿಹ್ನೆ ಅಡಿ ಕಾರ್ಯಕ್ರಮಗಳನ್ನು ಮಾಡುತ್ತಿಲ್ಲ.ಹೀಗಾಗಿ ಹೆಸರು ಘೋಷಿಸೋ ಅವಶ್ಯಕತೆಯೇ ಇಲ್ಲ. ಈಗಾಗಲೇ ಎಲ್ಲರಿಗೂ ಗೊತ್ತಿರೋ ವಿಚಾರ ಆಗಿದೆ ಎಂದು ಸ್ಪಷ್ಟಪಡಿಸಿದರು.

Published On - 6:46 pm, Sun, 12 February 23

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!