AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡವರ ಪರ ಇರೋದು ಒಬ್ಬರೇ ರಾಜಕಾರಣಿ ಅದು ಹೆಚ್​ಡಿ ಕುಮಾರಸ್ವಾಮಿ ಎಂದ ಮಾಜಿ ಪ್ರಧಾನಿ ದೇವೇಗೌಡ

ಬಡವರ ಪರ ಇರೋದು ಒಬ್ಬರೇ ರಾಜಕಾರಣಿ ಅದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದರು.

ಬಡವರ ಪರ ಇರೋದು ಒಬ್ಬರೇ ರಾಜಕಾರಣಿ ಅದು ಹೆಚ್​ಡಿ ಕುಮಾರಸ್ವಾಮಿ ಎಂದ ಮಾಜಿ ಪ್ರಧಾನಿ ದೇವೇಗೌಡ
ಹೆಚ್​ಡಿ ಕುಮಾರಸ್ವಾಮಿ, ಹೆಚ್.ಡಿ ದೇವೇಗೌಡ
ಗಂಗಾಧರ​ ಬ. ಸಾಬೋಜಿ
|

Updated on:Apr 30, 2023 | 8:58 PM

Share

ರಾಮನಗರ: ಬಡವರ ಪರ ಇರೋದು ಒಬ್ಬರೇ ರಾಜಕಾರಣಿ ಅದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ (Hd Kumaraswamy) ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದರು. ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಇಗ್ಗಲೂರು ಗ್ರಾಮದಲ್ಲಿ ಮಾತನಾಡಿದ ಅವರು, ಹೆಚ್​.ಡಿ ಕುಮಾರಸ್ವಾಮಿ ರಾಜ್ಯ ಪ್ರವಾಸ ಮಾಡ್ತಿದ್ದಾರೆ, ಚನ್ನಪಟ್ಟಣಕ್ಕೆ ಬರಲು ಆಗಿಲ್ಲ. ಹೆಚ್​ಡಿಕೆ ಪರವಾಗಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು. ಮೇ 10ರಂದು ಕುಮಾರಸ್ವಾಮಿ ಗೆಲ್ಲಿಸಿ, ಮೇ 13ಕ್ಕೆ ಸಿಎಂ ಆಗುತ್ತಾರೆ. ಹಾಗಾಗಿ ಎಲ್ಲರೂ ಹೆಚ್​.ಡಿ.ಕುಮಾರಸ್ವಾಮಿ ಪರ ಕೆಲಸ ಮಾಡಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಹಿಂದೆ ಎಂದೂ‌ ಇಷ್ಟು ಜನವನ್ನು ಈ ಕ್ಷೇತ್ರದಲ್ಲಿ ನೋಡಿಲ್ಲ

ಊರಿ ಬಿಸಿಲಲ್ಲೂ ಜನಸ್ಸಾಗರವಿದೆ. ನಾನೇ ಹಿಂದೆ ಇಷ್ಟು ಉರಿಬಿಸಿಲಿನಲ್ಲಿ ಇಷ್ಟು ಜನ ನೋಡಿರಲಿಲ್ಲ. ಮುಂದೆನೂ ಈ ರೀತಿಯ‌ ಸಭೆ ನೋಡಲು ಸಾಧ್ಯವಿಲ್ಲ. ನಿಮ್ಮ ಮುಂದೆ ಕೈಜೋಡಿಸಿ ಮನವಿ ಮಾಡುತ್ತೇನೆ. ಕುಮಾರಸ್ವಾಮಿ ಮೇ 13 ಕ್ಕೆ ಸಿಎಂ ಆಗುತ್ತಾರೆ. ಅಂದು ರಾಜಗೋಪಾಲ್ ರೆಡ್ಡಿ ಶಾಸಕರಾಗಬೇಕು. ಯಾವ ಜಾತಿಗೂ ದ್ರೋಹ ಮಾಡಿಲ್ಲ. ಮಹಿಳೆಯರಿಗೆ ಮೀಸಲಾತಿ ಕೊಟ್ಟಿದ್ದೇವೆ. ಎಲ್ಲೂ ನಿಂತೂ ಮಾತಾಡಿಲ್ಲ. ಇಂದು ಮನಸ್ಸಿನ ಮೇಲೆ ಪ್ರೇರಣೆ ಆಗಿದೆ ಎಂದು ಹೇಳಿದರು.

ಇದನ್ನೂ ಓದಿ: Doddaballapura: ಮೂರು ಬಾರಿ ಸೋತು, ನಾಲ್ಕನೇ ಭಾರಿ ಅಗ್ನಿ ಪರೀಕ್ಷೆಗಿಳಿದ ಜೆಡಿಎಸ್​ ಅಭ್ಯರ್ಥಿ; ಈ ಬಾರಿಯಾದರೂ ಗೆಲ್ಲಿಸಿ ಎಂದು ಪತ್ನಿಯಿಂದ ಕಣ್ಣೀರ ಪಾಲಿಟಿಕ್ಸ್

ಒಂದೆಡೆ ಚನ್ನಪಟ್ಟಣದಲ್ಲಿ ಪುತ್ರನ ಪರ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ಪ್ರಚಾರ ಮಾಡಿದರೆ, ಮತ್ತೊಂದೆಡೆ ರಾಮನಗರ ಜೆಡಿಎಸ್ ಅಭ್ಯರ್ಥಿ, ಪುತ್ರ ನಿಖಿಲ್​ ಪರ ಮಾಜಿ ಸಿಎಂ ಹೆಚ್​​.ಡಿ ಕುಮಾರಸ್ವಾಮಿ ಮತಯಾಚನೆ ಮಾಡಿದರು. ರಾಮನಗರ ವಿಧಾನಸಭಾ ಕ್ಷೇತ್ರದ ಹಾರೋಹಳ್ಳಿ,‌ ಮರಳವಾಡಿ ಪಟ್ಟಣದಲ್ಲಿ ಬೃಹತ್ ರೋಡ್ ಶೋ ಮೂಲಕ ಪ್ರಚಾರ ಮಾಡಲಾಯಿತು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ವಿಜಯಪುರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ: ತಲೆಕೆಳಗಾದ ಬಿಜೆಪಿ ಅಭ್ಯರ್ಥಿ ಯತ್ನಾಳ್​ ಲೆಕ್ಕಾಚಾರ

ನಿನ್ನೆ(ಏ.29) ಜೆಡಿಎಸ್ ಅಭ್ಯರ್ಥಿ ಪರ ಮತ ಕೇಳಲು ಬಂದ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡರು ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮಕ್ಕೆ ಆಗಮಿಸಿದ್ರು. ಈ ವೇಳೆ ದೇವೇಗೌಡರ ಮುಂದೆಯೂ ಕಣ್ನೀರಾಕುತ್ತಲೆ ಪತಿಯ ಪರ ಮತಯಾಚನೆ ಮಾಡಿದ್ರು. ದೇವೇಗೌಡರು ಕೂತಿದ್ದ ವೇದಿಕೆ ಮೇಲೆಯೆ ಮಾತನಾಡುತ್ತಾ ಸೆರಗೊಡ್ಡಿ ಮತಯಾಚಿಸಿದ ಪದ್ಮಾವತಿ. ಈ ಭಾರಿ ದೇವೇಗೌಡರು ಸಹ ನಮ್ಮ ಪರ ಮತಯಾಚನೆಗೆ ಬಂದಿದ್ದು, ಕೈಕೊಡಬೇಡಿ ನಮ್ಮನ್ನ ಗೆಲ್ಲಿಸಿ ಎಂದು ಅಂಗಲಾಚಿದ್ರು. ಇನ್ನು ಇದೇ ವೇಳೆ ಮೂರು ಬಾರಿ ಮುನೇಗೌಡ ಸೋತಿದ್ದು, ಈ ಭಾರಿಯಾದ್ರು ಗೆಲ್ಲಿಸಿ ಎಂದು ಅಭ್ಯರ್ಥಿ ಪರ ದೇವೇಗೌಡರು ಸಹ ಕ್ಯಾಂಪೇನ್ ನಡೆಸಿದ್ರು.

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿರುವುದು ತಪ್ಪಿಲ್ಲ ಎಂದ ಹೆಚ್​​ಡಿಕೆ

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಗೆ ಹೆಚ್​ಡಿ ಕುಮಾರಸ್ವಾಮಿ ಧ್ವನಿಗೂಡಿಸಿದ್ದಾರೆ. JDS, ಕಾಂಗ್ರೆಸ್ಸಿಗರ ಮೇಲೆ ಐಟಿ ದಾಳಿ ಆಗುತ್ತೆ. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿರುವುದು ತಪ್ಪಿಲ್ಲ. ಬಿಜೆಪಿಯಲ್ಲಿ ಇಡಿ ಮೋರ್ಚಾ ಹಾಗೂ ಐಟಿ ಮೋರ್ಚಾ ಇದೆ ಎಂದು ಆದಿಚುಂಚನಗಿರಿ ಮಠದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:58 pm, Sun, 30 April 23

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ