AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಗೆ ಅಂತಹ‌ ದೊಡ್ಡ ನಾಯಕರ ಅವಶ್ಯಕತೆ ಇಲ್ಲ: ಜಗದೀಶ್ ಶೆಟ್ಟರ್ ಬಗ್ಗೆ ಕುಮಾರಸ್ವಾಮಿ ಹೇಳಿದ್ದಿಷ್ಟು

ಜಗದೀಶ್​ ಶೆಟ್ಟರ್ ಬಿಜೆಪಿ ತೊರೆದ ಸಂಬಂಧ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು ಜಗದೀಶ್​ ಶೆಟ್ಟರ್ ನನ್ನನ್ನು ಸಂಪರ್ಕ ಮಾಡಿಲ್ಲ. ನಮಗೆ ಅಂತಹ‌ ದೊಡ್ಡ ನಾಯಕರ ಅವಶ್ಯಕತೆ ಇಲ್ಲ ಎಂದಿದ್ದಾರೆ.

ಆಯೇಷಾ ಬಾನು
|

Updated on:Apr 16, 2023 | 12:29 PM

Share

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​​ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಜಗದೀಶ್​ ಶೆಟ್ಟರ್(Jagadish Shettar) ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಸ್ಪೀಕರ್​ ಕಾಗೇರಿ ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಈ ವಿಚಾರವಾಗಿ ಧರ್ಮಸ್ಥಳದಲ್ಲಿ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ(HD Kumaraswamy) ಪ್ರತಿಕ್ರಿಯೆ ನೀಡಿದ್ದಾರೆ. ಜಗದೀಶ್​ ಶೆಟ್ಟರ್ ನನ್ನನ್ನು ಸಂಪರ್ಕ ಮಾಡಿಲ್ಲ. ನಮಗೆ ಅಂತಹ‌ ದೊಡ್ಡ ನಾಯಕರ ಅವಶ್ಯಕತೆ ಇಲ್ಲ ಎಂದಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ವೇಳೆ ಈ ರೀತಿ ಹೇಳಿದ್ದಾರೆ. ಇದು ಅವರ ಪಕ್ಷದ ಆಂತರಿಕವಾದ ಬೆಳವಣಿಗೆ. ಅವರೊಬ್ಬ ಅನುಭವಸ್ಥ ರಾಜಕಾರಣಿ. ಜಗದೀಶ್​ ಶೆಟ್ಟರ್​ ಜನಸಂಘದಿಂದಲೂ ಕೆಲಸ ಮಾಡಿದವರು. ಅವರಂತವರೆ ಇಂತಹ ತೀರ್ಮಾನ ಮಾಡಿದ್ದಾರೆ. ಈ ಹಿಂದೆ ಬಿಜೆಪಿಯಲ್ಲಿ ನಡೆಯುತ್ತಿರುವ DNA ಬಗ್ಗೆ ಮಾತನಾಡಿದ್ದೆ. ಆ ಡಿಎನ್​ಎ ಪ್ರಸ್ತುತವಾಗಿ ಅಲ್ಲಿನ ಚಟುವಟಿಕೆಗಳಿಗೆ ಪೂರಕವಾಗಿದೆ. ಮಾಜಿ ಸಿಎಂ ಜಗದೀಶ್​ ಶೆಟ್ಟರ್ ನನ್ನನ್ನು ಸಂಪರ್ಕ ಮಾಡಿಲ್ಲ. ನಮಗೆ ಅಂತಹ‌ ದೊಡ್ಡ ನಾಯಕರ ಅವಶ್ಯಕತೆ ಇಲ್ಲ. ಸಣ್ಣವರು ಯಾರಾದರೂ ಬಂದರೆ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ. ಯಾಕಂದ್ರೆ ನಮ್ಮದು ಸಣ್ಣ ಪಕ್ಷ. ದೊಡ್ಡ ನಾಯಕರ ಬಗ್ಗೆ ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲ. ಕಾಂಗ್ರೆಸ್ ನವರು ಮಾತುಕತೆ ನಡೆಸಿದ್ರೆ ಅದು ಅವರಿಗೆ ಸೇರಿದ್ದು ನನಗೆ ಸಂಬಂಧ ಇಲ್ಲ ಎಂದರು.

ಇದನ್ನೂ ಓದಿ: ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟಿದರಿಂದ ಪಕ್ಷಕ್ಕೆ ಏನು ಹಿನ್ನಡೆ ಆಗಿಲ್ಲ: ನಳಿನ್​ ಕುಮಾರ್​ ಕಟೀಲ್​

ಜಗದೀಶ್ ಶೆಟ್ಟರ್​ ಕಾಂಗ್ರೆಸ್​ ಸೇರ್ಪಡೆ ಫಿಕ್ಸ್? ಬೆಂಗಳೂರಿಗೆ ಕರೆತರಲು ಡಿಕೆ ಶಿವಕುಮಾರ್​ ಆಪ್ತನ ಹೆಸರಲ್ಲಿ 2 ಹೆಲಿಕಾಪ್ಟರ್​ ಬುಕ್​

ಬೆಂಗಳೂರು/ಹುಬ್ಬಳ್ಳಿ: ಈ ಬಾರಿ ಹುಬ್ಬಳ್ಳಿ ಕೇಂದ್ರ ಟಿಕೆಟ್ ಜಗದೀಶ್ ಶೆಟ್ಟರ್(Jagadish shettar) ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದು, ಇಂದು ಬಿಜೆಪಿಯ(BJP) ಎಲ್ಲಾ ಸ್ಥಾನಮಾನಗಳಿಗೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ. ಇನ್ನೊಂದೆಡೆ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ಹಾಗಾದ್ರೆ, ಯಾವ ಪಕ್ಷದಿಂದ ಸ್ಪರ್ಧೆ ಮಾಡುತ್ತಾರೆ? ಸ್ವಾತಂತ್ರ ಅಭ್ಯರ್ಥಿ ಆಗ್ತಾರೋ ಅಥವಾ ಕಾಂಗ್ರೆಸ್ ಸೇರುತ್ತಾರೋ? ಎನ್ನುವ ಚರ್ಚೆಗಳು ರಾಜ್ಯ ರಾಜಕಾರಣದಲ್ಲಿ ನಡೆದಿವೆ. ಈ ಹಿನ್ನೆಲೆಯಲ್ಲಿ ಶೆಟ್ಟರ್​ ಅವರ ಮುಂದಿನ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ. ಇನ್ನೊಂದೆಡೆ ಕಾಂಗ್ರೆಸ್​ ಜಗದೀಶ್​ ಶೆಟ್ಟರ್​ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಕಸರತ್ತು ನಡೆಸಿದೆ. ಕಾಂಗ್ರೆಸ್​ಗೆ ಬರುವಂತೆ ಜಗದೀಶ್​ ಶೆಟ್ಟರ್​ ಅವರಿಗೆ ಕಾಂಗ್ರೆಸ್​ನ ಪ್ರಮುಖ ನಾಯಕರು ಆಹ್ವಾನ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:23 pm, Sun, 16 April 23

Follow Us
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ