AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ, ಕಾಂಗ್ರೆಸ್ ಟಿಕೆಟ್ ವಂಚಿತರು ಜೆಡಿಎಸ್ ಸೇರ್ಪಡೆ ಕುರಿತು ಹೆಚ್​ಡಿ ಕುಮಾರಸ್ವಾಮಿ ಹೇಳಿದಿಷ್ಟು

ಬಿಜೆಪಿ, ಕಾಂಗ್ರೆಸ್ ಟಿಕೆಟ್ ವಂಚಿತರು ಜೆಡಿಎಸ್ ಸೇರ್ಪಡೆ ಆಗುವ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ ಹೆಚ್​.ಡಿ ​ಕುಮಾರಸ್ವಾಮಿ, ಕೆಲವರು ಇನ್ನೂ ಅವರವರ ಕಾರ್ಯಕರ್ತರ ಜೊತೆ ಚರ್ಚೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ, ಕಾಂಗ್ರೆಸ್ ಟಿಕೆಟ್ ವಂಚಿತರು ಜೆಡಿಎಸ್ ಸೇರ್ಪಡೆ ಕುರಿತು ಹೆಚ್​ಡಿ ಕುಮಾರಸ್ವಾಮಿ ಹೇಳಿದಿಷ್ಟು
ಹೆಚ್ ಡಿ ಕುಮಾರಸ್ವಾಮಿ
ಗಂಗಾಧರ​ ಬ. ಸಾಬೋಜಿ
|

Updated on:Apr 13, 2023 | 9:25 PM

Share

ಹಾವೇರಿ: ಈ ಬಾರಿ ವಿಧಾನಸಭೆ ಚುನಾವಣಾ ಟಿಕೆಟ್​ ಕೈತಪ್ಪಿದ್ದಕ್ಕೆ ಬಿಜೆಪಿ, ಕಾಂಗ್ರೆಸ್ ಟಿಕೆಟ್ ವಂಚಿತರು ಜೆಡಿಎಸ್ ಸೇರ್ಪಡೆ ಆಗುತ್ತಾರೆ ಎಂಬ ವಿಚಾರ ಹರಿದಾಡುತ್ತಿದೆ. ಜಿಲ್ಲೆಯಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ (HD Kumaraswamy) ಪ್ರತಿಕ್ರಿಯೆ ನೀಡಿದ್ದು, ಕೆಲವರು ಇನ್ನೂ ಅವರವರ ಕಾರ್ಯಕರ್ತರ ಜೊತೆ ಚರ್ಚೆ ಮಾಡುತ್ತಿದ್ದಾರೆ. ಯಾರು ಯಾರು ನಿರ್ಧಾರ ತೆಗೆದುಕೊಳ್ಳುತ್ತಾರೆ ನೋಡೋಣ. ಇನ್ನೂ ಹಲವಾರು ಜನ ಬರುವವರಿದ್ದಾರೆ. ಜೆಡಿಎಸ್​ ಪರವಾದ ವಾತಾವರಣ ಭಗವಂತನೇ ಸೃಷ್ಟಿ ಮಾಡಿದ್ದಾನೆ. ನನ್ನ ಶ್ರಮ ನೋಡಿ ಒಂದು ಬಾರಿ ಬೆಂಬಲಿಸೋಣ ಅಂತ ಜನ ನಿರ್ಧಾರ ಮಾಡಿದ್ದಾರೆ. ಜೆಡಿಎಸ್​ಗೆ ಶಕ್ತಿ ತುಂಬಲು ಬಹಳ ಜನ ಕಾಯುತ್ತಿದ್ದಾರೆ ಎಂದು ಹೇಳಿದರು.

ಅವರು ದೊಡ್ಡವರು, ಅವರಷ್ಟು ದೊಡ್ಡ ವ್ಯಕ್ತಿ ನಾನಲ್ಲ

ವೈಎಸ್​ವಿ ದತ್ತಾ ಜೆಡಿಎಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಅವರು ದೊಡ್ಡವರು, ಅವರಷ್ಟು ದೊಡ್ಡ ವ್ಯಕ್ತಿ ನಾನಲ್ಲ. ದೇವೆಗೌಡರು, ರೇವಣ್ಣ ಇದಾರೆ ಅವರು ತೀರ್ಮಾನ ಮಾಡುತ್ತಾರೆ. ಬಿಜೆಪಿಯಲ್ಲಿ ಲಿಂಗಾಯತ ನಾಯಕರಿಗೆ ಬೀಳ್ಕೊಡುಗೆ ವಿಚಾರವಾಗಿ ಮಾತನಾಡಿ, ಇನ್ನೂ ಇದಾರಲ್ಲಾ ನಾಯಕರು. ಬಿಜೆಪಿ ಸಹವಾಸದಲ್ಲಿ ಯಾರು ಯಾರು ಎಲ್ಲಿ ಬಂದು ನಿಲ್ಲುತ್ತಾರೆ ನೋಡೋಣ ಎಂದರು.

ಇದನ್ನೂ ಓದಿ: Laxman Savadi: ಟಿಕೆಟ್ ತಪ್ಪಿದ್ದರಿಂದ ಪಕ್ಷ ಬಿಡುತ್ತಿಲ್ಲ; ಬಿಜೆಪಿ ಬಿಡುತ್ತಿರುವುದಕ್ಕೆ ಬೇರೆಯೇ ಕಾರಣ ನೀಡಿದ ಲಕ್ಷ್ಮಣ ಸವದಿ

ಕೃಷಿ ಸಚಿವ ಬಿ.ಸಿ ಪಾಟೀಲ್ ವಿರುದ್ದ ಹೆಚ್​ಡಿಕೆ ವ್ಯಂಗ್ಯ

ಹಿರೇಕೆರೂರಿನ ಮಹಾನುಭಾವ ಯಾರೂ ಮಾಡದ ಸಾಧನೆ ಮಾಡಿದ್ದಾರೆ. ಅಸಿಸ್ಟೆಂಟ್ ಡೈರೆಕ್ಟರ್, ಪ್ಯೂನ್​ಗಳ ವರ್ಗಾವಣೆಯಲ್ಲೂ ಲೂಟಿ ಹೊಡೆದವರು. ಅಂದು ಹಿರೆಕೇರೂರಿನ ಬಣವೆಗಳಿಗೆ ಬೆಂಕಿ ಬಿದ್ದಾಗ ರೈತರಿಗೆ ನಾನು ದುಡ್ಡು ಕೊಟ್ಟು ಹೋದೆ. ಈ ಮಹಾನುಭಾವ ಫೋಟೋದಲ್ಲಿ ನನ್ನ ಪಕ್ಕ‌ ನಿಂತು ಫೋಟೋ ತೆಗೆಸಿಕೊಂಡ. ಅವನು ಶಾಸಕನಾಗಿ ಅವನ ಜೇಬಿನಿಂದ ದುಡ್ಡು ಕೊಡಲಿಲ್ಲ. ನಾನು ದುಡ್ಡು ಕೊಟ್ಟು ಬಂದಿದ್ದೆ. ಇಂಥವರು ನನ್ನ ಬಗ್ಗೆ ಮಾತನಾಡುತ್ತಾರೆ ಇವತ್ತು ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ಬೀಳಗಿಯಲ್ಲಿ ನಾಮಪತ್ರ ಸಲ್ಲಿಸಿದ ಮುರುಗೇಶ್ ನಿರಾಣಿ ಹೊಂದಿರುವ ಆಸ್ತಿ ಎಷ್ಟು ಗೊತ್ತಾ?

ಭಾಷಣದ ವೇಳೆ ಆರ್​ಶಂಕರ್​ ವಿರುದ್ಧ ಕಿಡಿ

ಇವತ್ತಿನ ರಾಜಕಾರಣ ಎಲ್ಲಿ ಹೋಗಿ ನಿಂತಿದೆ? ಈ ಜಿಲ್ಲೆಯವರೇ ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆ. ರೈತರ ಶಾಶ್ವತ ಬದುಕಿಗೆ ಏನು ಕಾರ್ಯಕ್ರಮ ನೀಡಿದ್ದಾರೆ ಎಂದು ಭಾಷಣದ ವೇಳೆ ಆರ್​ಶಂಕರ್​ ವಿರುದ್ಧ ಕಿಡಿಕಾರಿದರು. ಇಂಡಿಪೆಂಡೆಂಟ್ ಆಗಿ ಆಯ್ಕೆ ಯಾದ ಆ ವ್ಯಕ್ತಿ ಮಂತ್ರಿ ಆಗಿದ್ದರು. ಆ ಮಹಾನುಭಾವನಿಗೆ ಏನು ಅನ್ಯಾಯ ಆಗಿತ್ತು? ಯಾಕೆ ಬಿಟ್ಟು ಹೋದ ಎಂದು ಪ್ರಶ್ನಿಸಿದರು. ಎಂಎಲ್​ಸಿ ಮಾಡಿದ್ರು, ಮಂತ್ರಿ ಸೀಟ್ ಕೊಡಲೇ ಇಲ್ಲ. ಆ ಪುಣ್ಯಾತ್ಮನಿಗೆ ಬಿಜೆಪಿ ನೀಡಿದ ಬಳುವಳಿ ಇದು. ಈಗ ಮತ್ತೆ ಇಂಡಿಪೆಂಡೆಂಟ್ ಆಗಿ ಸ್ಪರ್ಧೆ ಮಾಡೋಕೆ ತಯಾರಾಗಿದ್ದಾರೆ ಎಂದರು.

ರೈತರ ಸಾಲ ಮನ್ನಾ ಮಾಡಿದ ಯಾರಾದರೂ ಸಿಎಂ ಇದ್ದಾರಾ

ಪದೇ ಪದೇ ನನ್ನ ಪಕ್ಷ ಕೈ ಬಿಟ್ಟರೂ ಏಕಾಂಗಿಯಾಗಿ ಬಂದು ಸಹಾಯ ಮಾಡಿದ್ದೇನೆ. ಏನು ತಪ್ಪು ಮಾಡಿದ್ದೇವೆ ಅಂತ ನಮಗೆ ಶಿಕ್ಷೆ ಕೊಡುತ್ತಿದ್ದೀರಿ ಎಂದರು. ನೂರಾರು ಜನ ರೈತರು ಈ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡರು. ಅವರಿಗೆ 75 ಲಕ್ಷ ಕೊಟ್ಟು ಹೋಗಿದ್ದೆ. ಪಂಚರತ್ನ ಕಾರ್ಯಕ್ರಮ ತರೋಕೆ ಹೊರಟಿರೋದು ನಿಮಗಾಗಿ. ಅಧಿಕಾರ ಹಿಡಿಯಬೇಕು ಅಂತ ಅಲ್ಲ. ದೈವಾನುಗ್ರಹದಿಂದ 2 ಸಲ ಸಿಎಂ ಆಗಿದ್ದೇನೆ. ರೈತರ ಸಾಲ ಮನ್ನಾ ಮಾಡಿದ ಯಾರಾದರೂ ಸಿಎಂ ಇದ್ದಾರಾ ಎಂದು ಪ್ರಶ್ನಿಸಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:23 pm, Thu, 13 April 23

Follow Us
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ