AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಸೀಕೆರೆ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮಗೊಳಿಸುವಂತೆ ಕಾರ್ಯಕರ್ತರ ಪಟ್ಟು: ಶಿವಲಿಂಗೇಗೌಡಗೆ ಜ.15 ಡೆಡ್​​ಲೈನ್

ಅರಸೀಕೆರೆ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮಗೊಳಿಸುವಂತೆ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ. ಇದರಿಂದ ಎಚ್​ಡಿ ರೇವಣ್ಣ ಅವರು ಶಿವಲಿಂಗೇಗೌಡಗೆ ಜ. 15 ಡೆಡ್​​ಲೈನ್ ನೀಡಿ ಕಾರ್ಯಕರ್ತರನ್ನು ಸಮಾಧಾನ ಮಾಡಿದರು.

ಅರಸೀಕೆರೆ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮಗೊಳಿಸುವಂತೆ ಕಾರ್ಯಕರ್ತರ ಪಟ್ಟು: ಶಿವಲಿಂಗೇಗೌಡಗೆ ಜ.15 ಡೆಡ್​​ಲೈನ್
ಶಿವಲಿಂಗೇಗೌಡ ಮತ್ತು ಹೆಚ್​ಡಿ ರೇವಣ್ಣ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 30, 2022 | 9:23 PM

ಹಾಸನ: ಜೆಡಿಎಸ್​ ಭದ್ರಕೋಟೆಯಾಗಿರುವ ಹಾಸನ ಜಿಲ್ಲೆಯಲ್ಲಿ(Hassan District)  ಗೊಂದಲ ನಿರ್ಮಾಣವಾಗಿದೆ. ಅರಸೀಕೆರೆ ಜೆಡಿಎಸ್​ ಶಾಸಕ ಶಿವಲಿಂಗೇಗೌಡ (Arasikere) ರಾಜಕೀಯ ನಿಗೂಢ ನಡೆಯಿಂದ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್​ನ ಮೊದಲ ಪಟ್ಟಿಯಲ್ಲಿ ಹಾಸನ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿಲ್ಲ. ಆದ್ರೆ, ಇದೀಗ ಕಾರ್ಯಕರ್ತರು ರೊಚ್ಚಿಗೆದ್ದಿದ್ದು, ಅರಸೀಕೆರೆ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮಗೊಳಿಸುವಂತೆ ಕಾರ್ಯಕರ್ತರು ಬಿಗಿ ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: ನನಗೆ ವೋಟ್​ ಹಾಕದಿದ್ದರೆ ನಿಮ್ಮ ಕೆಲಸ ಮಾಡಿಕೊಡಲ್ಲ: ಮುಸ್ಲಿಮರಿಗೆ ಶಾಸಕ ಪ್ರೀತಂಗೌಡ ಎಚ್ಚರಿಕೆ!

ಇಂದು(ಡಿಸೆಂಬರ್ 30) ಅರಸೀಕೆರೆ ಕ್ಷೇತ್ರದ ಜೆಡಿಎಸ್​ ಕಾರ್ಯಕರ್ತರು ಹಾಸನ ಸಂಸದ ಕಚೇರಿ ಬಳಿ ಜಮಾಯಿಸಿದ್ದು, ಅರಸೀಕೆರೆ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮಗೊಳಿಸುವಂತೆ ಆಗ್ರಹಿಸಿದರು. ಶಿವಲಿಂಗೇಗೌಡರು ನಮ್ಮನ್ನ ಕಡೆಗಣಿಸಿ ,ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರಿಗೆ ಕಾರ್ಯಕ್ರಮಗಳಿಗೆ ಆಹ್ವಾನ ಮಾಡುತ್ತಿದ್ದಾರೆ. ನಮ್ಮ ಜೆಡಿಎಸ್ ಕಾರ್ಯಕರ್ತರ ಕೆಲಸವನ್ನೇ ಮಾಡಿ ಕೊಡುತ್ತಿಲ್ಲ. ಇತ್ತಿಚೆಗೆ ಜೆಡಿಎಸ್ ಅಡಿಯಲ್ಲಿ ಯಾವುದೇ ಕಾರ್ಯಕ್ರಮದಲ್ಲಿ ಅವರು ಭಾಗಿ ಆಗಿಲ್ಲ. ನಮ್ಮ ಕಣ್ಣ ಮುಂದೆಯೇ ಕಾಂಗ್ರೆಸ್ ಕಾರ್ಯಕರ್ತರಿಗೆ ಮಣೆ ಹಾಕುತ್ತಿದ್ದಾರೆ. ಆದಷ್ಟು ಬೇಗ ನಮ್ಮ ಕ್ಷೇತ್ರದ ಸಮಸ್ಯೆ ಬಗೆಹರಿಸಿ ಎಂದು ಜೆಡಿಎಸ್​ ಕಾರ್ಯಕರ್ತರು ಬಿಗಿಪಟ್ಟು ಹಿಡಿದರು.

ಶಿವಲಿಂಗೇಗೌಡಗೆ ಡೆಡ್​​ಲೈನ್​ ನೀಡಿದ ರೇವಣ್ಣ

ಅಭ್ಯರ್ಥಿ ಆಯ್ಕೆ ಅಂತಿಮಗೊಳಿಸಿ ಎಂದು ಪಟ್ಟು ಹಿಡಿದ ಕಾರ್ಯಕರ್ತರಿಗೆ ಸಮಾದಾನ ಮಾಡಿದ ಹೆಚ್.​ಡಿ. ರೇವಣ್ಣ, ಜನವರಿ 15ರವರೆಗೆ ಡೆಡ್​​ಲೈನ್ ಕೊಡೋಣ. ಬೇರೆಡೆ ಅನುಕೂಲವಾದ್ರೆ ತೀರ್ಮಾನ ತತೋ ಎಂದು ಹೇಳಿದ್ದೇನೆ. ಜ.20ರೊಳಗೆ ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಗೆ ಟಿಕೆಟ್​ ಘೋಷಿಸುತ್ತೇವೆ. ಸಮಯ ಕೊಡೋಣ ಎಂದು ಹೆಚ್​ಡಿಡಿ, ಹೆಚ್​ಡಿಕೆ ಸಹ ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ರೇವಣ್ಣ ಶಾಸಕ ಶಿವಲಿಂಗೇಗೌಡ ಗೆ ಪರೋಕ್ಷವಾಗಿ ಜನವರಿ 15 ಡೆಡ್ ಲೈನ್ ಕೊಟ್ಟರು.

ಇದನ್ನೂ ಓದಿ: ದೇವೇಗೌಡ-ಕುಮಾರಸ್ವಾಮಿ ಹೇಳಿದಾಕ್ಷಣ ಓಡಿಬಂದು ಓಟು ಒತ್ತೋರು ಇಲ್ಲಿ ಯಾರೂ ಇಲ್ಲ: ಶಾಸಕ ಶಿವಲಿಂಗೇಗೌಡ ಗುಡುಗು

ಹದಿನೈದರವರೆಗೆ ಸಮಯ ಕೊಡೋಣ ಎಂದು ಕುಮಾರಸ್ವಾಮಿ ದೇವೇಗೌಡರು ಕೂಡ ಹೇಳಿದಾರೆ. ಹಾಗಾಗಿ ಅವರಿಗೆ ಟೈಂ ಕೊಡೋಣ ಆಮೇಲೆ ನಮ್ಮಿಂದ ಹಿಂಗಾಯ್ತು ಎಂದು ಅಪವಾದ ಬರುವುದು ಬೇಡ. ಹೊಳೆನರಸೀಪುರ ನನಗೆ ಒಂದು ಕಣ್ಣಾದ್ರೆ ನಾನು ಜೀವ ಇರುವವರೆಗೆ ಅರಸೀಕೆರೆ ಮರೆಯಲ್ಲ. ರಾತ್ರಿ ಹನ್ನೆರಡು ಗಂಟೆಗೆ ಬರಲಿ ನಿಮಗಾಗಿ ದುಡಿಯದೆ ಹೋದರೆ ನಾನು ದೇವೇಗೌಡದ ಮಗ ಅಲ್ಲ. ಎಲ್ಲವನ್ನು ಅವರಿಗೆ ಬಿಡೋಣ ಹದಿನೈದರ ಮೇಲೆ ತೀರ್ಮಾನ ಮಾಡೋಣ ಎಂದು ಹೇಳಿದರು.

ಶಿವಲಿಂಗೇಗೌಡರ ನಡೆ ನಿಗೂಢ

ಹೌದು…ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅವರು ಪಕ್ಷದ ಕಾರ್ಯಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದು, ಕಾಂಗ್ರೆಸ್ ಸೇರಲು ಚಿಂತನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಲಿಂಗೇಗೌಡ ಅವರು ಜೆಡಿಎಸ್​ ಕಾರ್ಯ ಚಟುವಟಿಕೆಗಳಿಂದ ದೂರು ಉಳಿದಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆ ಹಲವು ಸುತ್ತಿನ ಮಾತುಕತೆ ಮುಗಿದಿದ್ದು, ಫೆಬ್ರವರಿಯಲ್ಲಿಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:43 pm, Fri, 30 December 22

ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್