AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಮುವಾದಿಗಳನ್ನು ದೂರವಿಟ್ಟು ಜನ ಕಾಂಗ್ರೆಸ್​ಗೆ ಅಧಿಕಾರ ನೀಡಿದ್ದಾರೆ: ಹೆಚ್​ಡಿ ರೇವಣ್ಣ

ಕೋಮುವಾದಿಗಳನ್ನು ದೂರವಿಟ್ಟು ಜನ ಕಾಂಗ್ರೆಸ್​ಗೆ ಅಧಿಕಾರ ನೀಡಿದ್ದಾರೆ. ಕಾಂಗ್ರೆಸ್​​​ ಒಳ್ಳೆಯ ಆಡಳಿತ ನೀಡಿ, ಗ್ಯಾರಂಟಿಗಳನ್ನು ಈಡೇರಿಸಲಿ ಎಂದು ಜೆಡಿಎಸ್​ ನಾಯಕ ಹೆಚ್​ಡಿ ರೇವಣ್ಣ ಹೇಳಿದ್ದಾರೆ.

ಕೋಮುವಾದಿಗಳನ್ನು ದೂರವಿಟ್ಟು ಜನ ಕಾಂಗ್ರೆಸ್​ಗೆ ಅಧಿಕಾರ ನೀಡಿದ್ದಾರೆ: ಹೆಚ್​ಡಿ ರೇವಣ್ಣ
ಮಾಜಿ ಸಚಿವ ಹೆಚ್​ ಡಿ ರೇವಣ್ಣ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: May 16, 2023 | 3:18 PM

Share

ಹಾಸನ: ಕೋಮುವಾದಿಗಳನ್ನು ದೂರವಿಟ್ಟು ಜನ ಕಾಂಗ್ರೆಸ್​ಗೆ (Congress) ಅಧಿಕಾರ ನೀಡಿದ್ದಾರೆ. ಕಾಂಗ್ರೆಸ್​​​ ಒಳ್ಳೆಯ ಆಡಳಿತ ನೀಡಿ, ಗ್ಯಾರಂಟಿಗಳನ್ನು ಈಡೇರಿಸಲಿ. ನಮ್ಮ ಪಕ್ಷದ ಸೋಲನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸುತ್ತೇವೆ. 2 ರಾಷ್ಟ್ರೀಯ ಪಕ್ಷಗಳನ್ನು ಜೆಡಿಎಸ್ (JDS) ಮುಗಿಸಲು ಪ್ರಯತ್ನಿಸಿದವು. ಆದರೆ ಜನರು ನಮ್ಮ ಪಕ್ಷವನ್ನು ಉಳಿಸಿಕೊಂಡಿದ್ದಾರೆ. ಹಾಸನ (Hassan) ಜಿಲ್ಲೆಯಲ್ಲಿ ನಮ್ಮ ಪಕ್ಷದ ನಾಲ್ವರು ಗೆದ್ದಿದ್ದೇವೆ, ಮೂವರು ಸೋತಿದ್ದಾರೆ. ನಮಗೆ ಮತ ನೀಡಿದ ಎಲ್ಲರಿಗು ಧನ್ಯವಾದ. ರಾಷ್ಟ್ರೀಯ ಪಕ್ಷಗಳ ಮುಖಂಡರೇ ಸೊತಿರುವಾಗ ನಮ್ಮದೇನಿದೆ. ಕೆಲ ನಾಯಕರು ನಮ್ಮನ್ನು ಮುಗಿಸಬೇಕು ಎಂದು ನಾಲ್ಕು ವರ್ಷರಿಂದ ಹೋರಾಟ ಮಾಡಿದರು ಎಂದು ಜೆಡಿಎಸ್​ ನಾಯಕ ಹೆಚ್​​.ಡಿ ರೇವಣ್ಣ (HD Revanna) ಹೇಳಿದ್ದಾರೆ.

ಚುನಾವಣಾ ಫಲಿತಾಂಶದ ಬಳಿಕ ಮೊದಲ ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಜನರು ನಮ್ಮನ್ನ ಜನ ಉಳಿಸಿಕೊಂಡಿದ್ದಾರೆ. ನಾವು ಸೋಲು ಗೆಲುವು ಎರಡನ್ನು ನೋಡಿದ್ದೇವೆ. ಒಂದು ಕ್ಷೇತ್ರದಲ್ಲಿ ನಾವು ಅಲ್ಪ ಮತದಿಂದ ಸೋತಿದ್ದೇವೆ. ಮಂಡ್ಯದಲ್ಲಿ ಕೂಡ ಜೆಡಿಎಸ್ ತೆಗಿಬೇಕು ಎಂದು ಪ್ರಯತ್ನ ಮಾಡಿದರು. ಪ್ರಧಾನಿ ನರೇಂದ್ರ ಮೋದಿಯವರೇ ಹಾಸನ ಮತ್ತು ಮಂಡ್ಯಕ್ಕೆ ಬಂದು ಹೋದರು. ಚನ್ನಪಟ್ಟಣಕ್ಕೆ ಪ್ರಧಾನಿ ಮೋದಿ ಬಂದು ಹೋಗಿದ್ದರೂ, ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿಯವರು ಗೆಲ್ಲಲಿಲ್ಲವೇ ? ಇನ್ನೂ ನಮಗೆ ಐದು ವರ್ಷ ಸಮಯ ಇದೆ ಎಲ್ಲವನ್ನು ಸರಿ ಮಾಡಿಕೊಳ್ತೇವೆ ಎಂದರು.

ಇದನ್ನೂ ಓದಿ: ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ ಬಂದಿದ್ದರೂ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರಮಾನಾಥ್ ​ರೈ

ಬೇಲೂರಿನಲ್ಲಿ ಜೆಡಿಎಸ್ ಅನ್ನು ಸೋಲಿಸಲೇ ಬೇಕು ಅಂತ ಪ್ರಧಾನಿಯವರು ಬಂದರೇ ಏನ ಮಾಡೋಕೆ ಆಗುತ್ತೆ. ಈ ಚುನಾವಣೆ ಫಲಿತಾಂಶ ಮುಂದಿನ ಚುನಾವಣೆಯಲ್ಲಿ ಏನೂ ಪರಿಣಾಮ ಬೀರಲ್ಲ. ಕಾಲ ಇನ್ನೂ ಇದೆ ನೋಡ್ತಾ ಇರಿ, ದೇವೇಗೌಡರು ಸುಮ್ಮನೇ ಕೂರಲ್ಲ. ದೇವೇಗೌಡರಿಗೆ ಇನ್ನೂ ಶಕ್ತಿ ಇದೆ. ಕೂಡಲೆ ಸಭೆ ಕರೆದು ಈ ಬಗ್ಗೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಮಾಡ್ತೇವೆ ಎಂದು ತಿಳಿಸಿದರು.

ಹಾಸನದಲ್ಲಿ ಅಲ್ಪಸಂಖ್ಯಾತರು ನಮ್ಮ ಪಕ್ಷದ ಕೈ ಹಿಡಿದಿದ್ದಾರೆ. ಅಲ್ಪಸಂಖ್ಯಾತರಿಗೆ ಅವಕಾಶ ಕೊಟ್ಟಿದ್ದು ಜೆಡಿಎಸ್. ಬಿಜೆಪಿ ಅವರು ಅಧಿಕಾರದಿಂದ ಕೆಳಗೆ ಇಳುಯುವಾಗ ಒಂದು ಶಾಕ್ ಕೊಟ್ಟಿದ್ದಾರೆ. ಒಂದು ಯುನಿಟ್​ಗೆ 70 ಪೈಸೆ ಎರಿಸಿದ್ದಾರೆ, ಇದನ್ನು ಇಳಿಸಲಿ. ಕಾಂಗ್ರೆಸ್​ನಲ್ಲಿ ಯಾರಾದರೂ ಮುಖ್ಯಮಂತ್ರಿಯಾಗಲಿ ಒಳ್ಳೆ ಕೆಲಸ ಮಾಡಿಲಿ ಎಂದು ಹಾರೈಸಿದರು.

ಹಾಸನದಲ್ಲಿ ಶಾಸಕ ಸ್ವರೂಪ್ ಪ್ರಕಾಶ ಇದ್ದಾನೆ ಎಲ್ಲವನ್ನು ಮಾಡುತ್ತಾನೆ. ಅವನಿಗೆ ಶಕ್ತಿ ಇದೆ ಮಾಡುತ್ತಾನೆ. ಖಂಡಿತ ಹಾಸನ ಕ್ಷೇತ್ರದಲ್ಲಿ ಒಳ್ಳೆ ಕೆಲಸ ಮಾಡುತ್ತೇವೆ. ನಾವೇನು ಯಾರಿಗೂ ತೊಂದರೆ ಕೊಡುವುದಿಲ್ಲ. ಇನ್ನೊಬ್ಬರಿಗೆ ಕಿರುಕುಳ ಕೊಡುವುದಿಲ್ಲ ಎಂದು ಮಾತನಾಡಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ