AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತಾ ಬಳಿ ಇರೋದು ಒಂದು ಪಂಚೆ, ಒಂದು ಶರ್ಟ್ ಅಷ್ಟೆ, ನಾಮಪತ್ರ ಸಲ್ಲಿಕೆಗೆ ದೇವೇಗೌಡ ಬರುತ್ತಾರೆ ಎಂದ ರೇವಣ್ಣ

ಜೆಡಿಎಸ್​ ಸೇರ್ಪಡೆ ಸಂದರ್ಭ ಮಾತನಾಡಿದ ದತ್ತಾ, ಹೆಚ್​ಡಿ ದೇವೇಗೌಡರನ್ನು ಹಾಡಿಹೊಗಳಿದರು.

Ganapathi Sharma
|

Updated on:Apr 13, 2023 | 10:41 PM

Share

ಚಿಕ್ಕಮಗಳೂರು:  ವೈಎಸ್​ವಿ ದತ್ತಾ (YSV Datta) ಬಳಿ ಇರುವುದು ಒಂದು ಪಂಚೆ, ಒಂದು ಶರ್ಟ್ ಅಷ್ಟೆ. ನಾನೇ ಸಚಿವ ಆದಾಗ ಕಾರು ಕೊಡಿಸುತ್ತೇನೆ ಎಂದೆ. ಆದರೆ, ಬೇಡ ಸರ್, ನಂಗೇ ಆಟೋ ಸಾಕು ಅಂದಿದ್ದರು ಎಂದು ಜೆಡಿಎಸ್ ನಾಯಕ ಹೆಚ್​ಡಿ ರೇವಣ್ಣ ನೆನಪಿಸಿಕೊಂಡರು. ದತ್ತಾ ಅವರನ್ನು ಮರಳಿ ಜೆಡಿಎಸ್​​ಗೆ ಸೇರ್ಪಡೆ ಮಾಡಿಕೊಂಡ ಬಳಿಕ ಮಾತನಾಡಿದ ಅವರು, 18ನೇ ತಾರೀಖು ದತ್ತ ನಾಪಪತ್ರ ಸಲ್ಲಿಕೆ ಮಾಡಲಿದ್ದಾರೆ. ಎಷ್ಟೇ ಕಷ್ಟ ಆದರೂ ದೇವೆಗೌಡರು ಬರುತ್ತಾರೆ, ಬಂದೇ ಬರುತ್ತಾರೆ. ನಾನು ಬದುಕಿರುವವರೆಗೆ ದತ್ತನ ಕೈ ಬಿಡಬಾರದು ಎಂದು ಹೇಳಿದ್ದಾರೆ ಎಂಬುದಾಗಿ ರೇವಣ್ಣ ಹೇಳಿದರು.

ನೀವು ಬೇರೆ ಯೋಚನೆ ಮಾಡಬೇಡಿ. ದೇವೇಗೌಡರ ಮಾತನ್ನು ನಾನು, ದತ್ತಾ, ನೀವು ಎಲ್ಲರೂ ಪಾಲಿಸಬೇಕು. ದತ್ತಾರನ್ನು ಶಾಸಕ ಮಾಡಕೇಬೇಕು ಅಂತ ದೇವೇಗೌಡರು ಹೇಳಿದ್ದಾರೆ. ನಮಗೆ ಹೊಳೆನರಸೀಪುರ, ಕಡೂರು ಬೇರೆ-ಬೇರೆ ಅಲ್ಲ. ನಾನು ದತ್ತಾ ಜೊತೆ ಇರುತ್ತೇನೆ ಎಂದು ಕಡೂರಿನ ಯಗಟಿ ಗ್ರಾಮದ ದತ್ತಾ ಅವರ ಮನೆಯಲ್ಲಿ ರೇವಣ್ಣ ಹೇಳಿದ್ದಾರೆ.

ದೇವೇಗೌಡರನ್ನು ಹಾಡಿಹೊಗಳಿದ ದತ್ತಾ

ಜೆಡಿಎಸ್​ ಸೇರ್ಪಡೆ ಸಂದರ್ಭ ಮಾತನಾಡಿದ ದತ್ತಾ, ಹೆಚ್​ಡಿ ದೇವೇಗೌಡರನ್ನು ಹಾಡಿಹೊಗಳಿದರು. ದೇವೇಗೌಡರು ಸದಾ ಚಟುವಟಿಕೆಯಿಂದ ಇರುವ ವ್ಯಕ್ತಿ. 24 ಗಂಟೆಯೂ ಏನಾದರೊಂದು ಯೋಚನೆ ಮಾಡುತ್ತಿರುತ್ತಾರೆ. ರಾತ್ರಿ 3 ಗಂಟೆಗೆ ದೂರವಾಣಿ ಕರೆ ಮಾಡಿದ ದೇವೇಗೌಡರು, ಮನೆಗೆ ಬರುವಂತೆ ಕರೆದರು. ಇಷ್ಟೊತ್ತಿನಲ್ಲಿ ಹೇಗೆ ಬರಲಿ ಎಂದೆ. ಆಟೋ ಮಾಡಿಕೊಂಡು ಬಾರೋ ಎಂದರು. ಹಾಗೆ ಅವರ ಮನೆಗೆ ತೆರಳಿದೆ. ಅವರ ಜತೆ ಕುಳಿತು ಮಾತನಾಡಿದೆ. ‘ನಾನು ಮಲಗಿಕೊಂಡಿದ್ದೆ, ಏನೋ ಒಂದು ಯೋಚನೆ ಬಂತು. ನಿನ್ನ ಜತೆ ಮಾತನಾಡಬೇಕು ಎನಿಸಿತು’ ಎಂದರು. ಇದು ನನ್ನ ಮತ್ತು ದೇವೇಗೌಡರ ನಡುವಣ ಸಂಬಂಧ ಎಂದು ದತ್ತಾ ಹೇಳಿದರು.

ಇದನ್ನೂ ಓದಿ: YSV Datta: ಮತ್ತೆ ಜೆಡಿಎಸ್ ಸೇರಿದ ವೈಎಸ್​ವಿ ದತ್ತಾ; ಕಡೂರು ಟಿಕೆಟ್ ಫಿಕ್ಸ್​

ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿ ಚುನಾವಣೆಗೆ ಟಿಕೆಟ್​​ ಸಿಗದೆ ನಿರಾಶರಾಗಿದ್ದ ವೈಎಸ್​ವಿ ದತ್ತಾ ಗುರುವಾರ ಮತ್ತೆ ಜೆಡಿಎಸ್​​ ಸೇರ್ಪಡೆಯಾಗಿದ್ದಾರೆ. ಇದರ ಬೆನ್ನಲ್ಲೇ, ಕಡೂರು ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿಯನ್ನಾಗಿಯೂ ಅವರನ್ನು ಘೋಷಣೆ ಮಾಡಲಾಗಿದೆ. ಈ ಕುರಿತು ಪಕ್ಷದ ನಾಯಕ ಹೆಚ್​ಡಿ ರೇವಣ್ಣ ಗುರುವಾರ ಸಂಜೆ ಘೋಷಣೆ ಮಾಡಿದ್ದಾರೆ.

ಈ ಬೆಳವಣಿಗೆಯಿಂದ ಈಗಾಗಲೇ ಜೆಡಿಎಸ್​ನಿಂದ ಕಡೂರು ಕ್ಷೇತ್ರದ ಟಿಕೆಟ್​​ ಪಡೆದಿರುವ ಸಿ.ಎಂ. ಧನಂಜಯ್ ನಿರಾಶರಾಗಿದ್ದಾರೆ. ದತ್ತಾ ಜೆಡಿಎಸ್ ಸೇರ್ಪಡೆ ನಂತರ ಸುದ್ದಿಗೋಷ್ಠಿ ನಡೆಸಿದ ಧನಂಜಯ್, ಒತ್ತಡಕ್ಕೆ ಒಳಗಾಗಿ ದತ್ತಾಗೆ ಟಿಕೆಟ್ ಘೋಷಿಸಿದ್ದಾರೆ, 2-3 ದಿನದಲ್ಲಿ ಸ್ಪಷ್ಟ ಮಾಹಿತಿ ಸಿಗಲಿದೆ. ನಾಯಕರು ಚರ್ಚಿಸಿ ಒಳ್ಳೆಯ ನಿರ್ಧಾರಕ್ಕೆ ಬರುತ್ತಾರೆ ಎಂಬ ನಂಬಿಕೆ ಇದೆ ಎಂದಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:40 pm, Thu, 13 April 23

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್